ಮದುವೆ ಕಾರ್ಯಕ್ರಮದಲ್ಲಿ ಎಚ್ಡಿಕೆ-ಬಿಎಸ್ವೈ ಮುಖಾಮುಖೀ
ರಾಜಕೀಯ ವಲಯದಲ್ಲಿ ನಾನಾ ವ್ಯಾಖ್ಯಾನ; ಎಸ್ಎಂಕೆ ಸಮ್ಮುಖದಲ್ಲಿ ಪ್ರತ್ಯೇಕವಾಗಿ ಮಾತನಾಡಿದ್ರಾ ?
Team Udayavani, Nov 1, 2019, 9:15 PM IST
ಬೆಂಗಳೂರು: ನಗರದ ಖಾಸಗಿ ಹೊಟೇಲ್ನಲ್ಲಿ ಉದ್ಯಮಿಯೊಬ್ಬರ ಕುಟುಂಬದ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೈ ಕುಲುಕಿ ಪರಸ್ಪರ ಉಭಯ ಕುಶಲೋಪರಿ ವಿಚಾರಿಸಿರುವುದು ಕುತೂಹಲ ಮೂಡಿಸಿದೆ.
ಇದೇ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಸಮ್ಮುಖದಲ್ಲಿ ಬಿ.ಎಸ್.ಯಡಿಯೂರಪ್ಪ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರು ಪ್ರತ್ಯೇಕವಾಗಿ ಕೆಲವು ಕಾಲ ಮಾತನಾಡಿದರು ಎಂದು ಹೇಳಲಾಗುತ್ತಿದ್ದು ರಾಜಕೀಯ ವಲಯದಲ್ಲಿ ನಾನಾ ವ್ಯಾಖ್ಯಾನಗಳಿಗೆ ಕಾರಣವಾಗಿದೆ.
ಇತ್ತೀಚೆಗಷ್ಟೇ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದಲ್ಲಿ ಬಿಜೆಪಿ ಸರಕಾರ ಪತನಗೊಳ್ಳಲು ಬಿಡುವುದಿಲ್ಲ ಎಂದು ಹೇಳಿದ್ದರು. ಜತೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಎರಡು ಮೂರು ತಿಂಗಳುಗಳಲ್ಲಿ ಜೆಡಿಎಸ್ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿದ್ದರು. ಹೀಗಾಗಿ ಈ ಭೇಟಿ ಸಂಚಲನ ಮೂಡಿಸಿದೆ.
ಉಪ ಚುನಾವಣೆ ಫಲಿತಾಂಶದ ಅನಂತರ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಬದಲಾವಣೆ ಉಂಟಾಗಬಹುದು. ಬಿಜೆಪಿಗೆ ನಿರೀಕ್ಷಿತ ಫಲಿತಾಂಶ ಬಾರದಿದ್ದರೆ ಮತ್ತೆ ಜೆಡಿಎಸ್-ಬಿಜೆಪಿ ಸರಕಾರ ರಚನೆಯಾಗಬಹುದು ಎಂಬೆಲ್ಲ ಮಾತುಗಳು ಕೇಳಿಬರುತ್ತಿವೆ. ಹೀಗಾಗಿ ಹೊಟೇಲ್ನಲ್ಲಿ ನಡೆದಿರುವ ಮಾತುಕತೆಯಲ್ಲಿ ಇವೆಲ್ಲ ಅಂಶಗಳು ಪ್ರಸ್ತಾವವಾಗಿರಬಹುದು ಎಂದು ಹೇಳಲಾಗುತ್ತಿದೆ.
ಆದರೆ ಜೆಡಿಎಸ್ ಮತ್ತು ಬಿಜೆಪಿ ನಾಯಕರು ವಿವಾಹ ಕಾರ್ಯಕ್ರಮದಲ್ಲಿ ಭೇಟಿಯಾದಾಗ ಕೈ ಕುಲುಕಿ ಶುಭಾಶಯ ಕೋರುವುದು, ಕುಶಲೋಪರಿ ವಿಚಾರಿಸುವುದು ಸಹಜ. ಇದಕ್ಕೆ ರಾಜಕೀಯ ಅರ್ಥ ಕಲ್ಪಿಸಬೇಕಿಲ್ಲ ಎಂದು ಸಮರ್ಥನೆ ನೀಡಿದ್ದಾರೆ.
ಜೆಡಿಎಸ್ ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರು ಬಿಜೆಪಿಯತ್ತ ಹೋಗಲು ತಯಾರಿ ಮಾಡಿಕೊಂಡಿದ್ದು ಅದನ್ನು ತಡೆಯುವ ನಿಟ್ಟಿನಲ್ಲಿ ಕುಮಾರಸ್ವಾಮಿ ಈ ತಂತ್ರಗಾರಿಕೆಗೆ ಮೊರೆ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ.
ಐಟಿ ಭಯವಾ?
ಮತ್ತೂಂದು ಮೂಲಗಳ ಪ್ರಕಾರ ಕಾಂಗ್ರೆಸ್ ನಾಯಕರ ಮೇಲೆ ದಾಳಿ ಆದಂತೆ ತಮ್ಮ ಮೇಲೂ ಐಟಿ ಅಥವಾ ಸಿಬಿಐ ದಾಳಿಗೆ ಬಿಜೆಪಿ ಮುಂದಾಗಬಹುದು ಎಂಬ ಆತಂಕದಿಂದ ಎಚ್.ಡಿ.ಕುಮಾರಸ್ವಾಮಿ ಬಿಜೆಪಿ ಬಗ್ಗೆ ಸಾಫ್ಟ್ ಕಾರ್ನರ್ ಆಗಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.
ಇತ್ತೀಚೆಗೆ ಈ ಕುರಿತು ಕೇಳಲಾದ ಪ್ರಶ್ನೆಗೆ ಕುಮಾರಸ್ವಾಮಿ ಅವರು ನನಗೆ ಐಟಿ, ಸಿಬಿಐ ಭಯವಿಲ್ಲ. ನನ್ನ ಮನೆ ಮೇಲೆ ಆದಾಯ ತೆರಿಗೆಯವರು ಯಾವಾಗ ಬೇಕಾದರೂ ದಾಳಿ ಮಾಡಬಹುದು. ಅವರಿಗೆ ಯಡಿಯೂರಪ್ಪ ಅವರ ದಾಖಲೆಗಳು ಸಾಕಷ್ಟು ಸಿಗುತ್ತವೆ ಎಂದು “ಬಾಂಬ್’ ಸಿಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ
Revealed; ನೇಹಾ ಹಿರೇಮಠ ಹಂತಕ ಫಯಾಜ್ನ ಮತ್ತೊಂದು ಕರಾಳ ಮುಖ ಅನಾವರಣ
Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್ ಜಿದ್ದಾಜಿದ್ದಿ
MUST WATCH
ಹೊಸ ಸೇರ್ಪಡೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್ ಟಿಆರ್ – ಪ್ರಶಾಂತ್ ನೀಲ್ ಸಿನಿಮಾ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ