ಎಳ್ಳಿನ ಸೇವನೆಯಿಂದ ಆರೋಗ್ಯಕ್ಕೆ ಹಲವು ಉಪಯೋಗ

ಎಳ್ಳಿನ ಎಣ್ಣೆ ಲೇಪಿಸಿಕೊಳ್ಳುವುದರಿಮದ ಕೂದಲಿನ ಆರೊಗ್ಯವನ್ನು ಕಾಪಾಡಲು ಸಹಕಾರಿ.

Team Udayavani, Nov 15, 2022, 2:38 PM IST

ಎಳ್ಳಿನ ಸೇವನೆಯಿಂದ ಆರೋಗ್ಯಕ್ಕೆ ಹಲವು ಉಪಯೋಗ

ಎಳ್ಳಿನಲ್ಲಿ ಕ್ಯಾಲ್ಸಿಯಂ ಅಂಶ ಅಧಿಕವಾಗಿರುವುದರಿಂದ ಮೂಳೆಗಳ ಆರೋಗ್ಯಕ್ಕೆ ಒಳ್ಳೆಯದು. ಹಾಗೆಯೇ ಡಿಎನ್‌ಎ ಕಣಗಳಿಗೆ ಹಾನಿಯಾಗದಂತೆ ರಕ್ಷಣೆ ಮಾಡುತ್ತದೆ. ಕ್ಯಾನ್ಸರ್‌ ಶಮನಕಾರಿ ಪ್ರತಿದಿನ 100 ಮಿ.ಗ್ರಾಂ. ಎಳ್ಳು ತಿನ್ನುವುದರಿಂದ ಕರುಳಿನ ಕ್ಯಾನ್ಸರ್‌ ತಡೆಯಬಹುದು. ಎಳ್ಳೆಣ್ಣೆಯಲ್ಲಿ ಆ್ಯಂಟಿಆಕ್ಸೆಡ್‌ ಅಂಶವಿರುವುದರಿಂದ ಎದೆ ಉರಿ ಮುಂತಾದ ಹೃದಯ ಸಂಬಂಧಿ ಸಮಸ್ಯೆಗಳನ್ನು ಹೋಗಲಾಡಿಸುತ್ತದೆ.

ಉಸಿರಾಟ ತೊಂದರೆಗೆ ಸಹಕಾರಿ
ಉಸಿರಾಟದ ತೊಂದರೆ ಇರುವವರು ಎಳ್ಳು ತಿನ್ನುವುದರಿಂದ ಆರೋಗ್ಯವನ್ನು ವೃದ್ಧಿಸಿಕೊಳ್ಳಬಹುದು. ಇದರಲ್ಲಿ ಮ್ಯಾಗ್ನೇಷಿಯಂ ಅಂಶ ಇರುವುದರಿಂದ ದೇಹದಲ್ಲಿ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ಆದ್ದರಿಂದ ಅಧಿಕ ರಕ್ತದೊತ್ತಡ ಸಮಸ್ಯೆ ಇರುವವರು ಬಳಸಿಕೊಳ್ಳುವುದರಿಂದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಶ್ವಾಸಕೋಶವನ್ನು ಶುದ್ದಿಗೊಳಿಸುವಲ್ಲಿ ಎಳ್ಳಿನ ಪಾತ್ರ ಮುಖ್ಯವಾದದ್ದು.

ಜೀರ್ಣಕ್ರಿಯೆಗೆ ಸಹಕಾರಿ
ಎಳ್ಳಿನಲ್ಲಿರುವ ಹೆಚ್ಚಿನ ಫೈಬರ್‌ ಅಂಶ ಆಹಾರ ಬೇಗನೇ ಜೀರ್ಣವಾಗುವಂತೆ ಮಾಡುತ್ತದೆ. ಇದರಿಂದ ದೇಹದ ಕ್ರಿಯೆಗಳು ಸರಾಗವಾಗಿ ನಡೆಯಲು ಸಹಕರಿಸುತ್ತದೆ. ಎಳ್ಳು ಸೇವನೆಯಿಂದ ಸುಸ್ತು ಕಡಿಮೆಯಾಗುವುದಲ್ಲದೆ, ದೇಹದ ಶಕ್ತಿ ಹೆಚ್ಚುತ್ತದೆ.

ದೇಹದಲ್ಲಿನ ಅಧಿಕ ಬೊಜ್ಜು ಹಾಗೂ ಕೊಬ್ಬಿನಾಂಶವನ್ನು ಕಡಿಮೆಗೊಳಿಸಲು ಎಳ್ಳು ಸಹಕಾರಿ. ಚರ್ಮ, ಮೂಳೆ, ನರಮಂಡಲ, ಮಾಂಸಖಂಡಗಳನ್ನು ಪೋಷಿಸುತ್ತದೆ. ಎಳ್ಳಿನಲ್ಲಿ ಸಾಕಷ್ಟು ಪ್ರಮಾಣದ ನಾರಿನಾಂಶವಿದ್ದು ಮಲಬದ್ಧತೆ, ಮೂಲವ್ಯಾಧಿಯಂತಹ ಸಮಸ್ಯೆಗಳನ್ನು ನಿವಾರಣೆ ಮಾಡುತ್ತದೆ.

ಚರ್ಮದ ಆರೋಗ್ಯಕ್ಕೆ
ಎಳ್ಳಿನಲ್ಲಿರುವ ಸತುವಿನ ಅಂಶ ಚರ್ಮದ ಆರೊಗ್ಯವನ್ನು ವೃದ್ಧಿಸುವಲ್ಲಿ ಸಹಕಾರಿಯಾಗಿದೆ. ಸೂರ್ಯನ ಕಿರಣದಿಂದ ಚರ್ಮ ಕಪ್ಪಾಗಿದ್ದರೆ ಎಳ್ಳನ್ನು ಸೇವಿಸಿ, ಇದರಿಂದ ಚರ್ಮ ಸುಕ್ಕು ಗಟ್ಟುವುದನ್ನು ತಪ್ಪಿಸಬಹುದು. ಚರ್ಮದ ಮೇಲಿನ ಗಾಯ , ಬಿರುಕು, ಕಲೆಗಳನ್ನು ಹೊಗಲಾಡಿಸಿ ತ್ವಚೆಯನ್ನು ಕೋಮಲಗೊಳಿಸಲು ಎಳ್ಳು ಸಹಕಾರಿ. ಮುಖದಲ್ಲಿ ಕಪ್ಪು ಕಲೆಯನ್ನು ಹೊಗಲಾಡಿಸಲು ಕಪ್ಪು ಎಳ್ಳನ್ನು ಹಾಲಲ್ಲಿ ನೆನೆಸಿ, ರುಬ್ಬಿ ಸಾಯಂಕಾಲ ಮುಖಕ್ಕೆ ಲೇಪಿಸಿಕೊಂಡು ಅರ್ಧಗಂಟೆ ಬಳಿಕ ಮುಖ ತೊಳೆಯಿರಿ ಇದರಿಂದ ತ್ವಚೆ ಇನ್ನಷ್ಟು ಕೋಮಲವಾಗುತ್ತದೆ.

ಕೂದಲಿನ ಆರೈಕೆ
ಎಳ್ಳಿನ ಎಣ್ಣೆ ಲೇಪಿಸಿಕೊಳ್ಳುವುದರಿಮದ ಕೂದಲಿನ ಆರೊಗ್ಯವನ್ನು ಕಾಪಾಡಲು ಸಹಕಾರಿ. ದಂತ ಪಂಕ್ತಿಗಳು ಗಟ್ಟಿಯಾಗುವಂತೆ ಮಾಡುತ್ತದೆ. ಏಕಾಗ್ರತೆ, ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಎಳ್ಳು ಸೇವನೆ ತುಂಬಾನೆ ಸಹಕಾರಿ.

ಪ್ರತಿ ನಿತ್ಯ ಎಳ್ಳು ಪಾನಕ ಸೇವಿಸಿದರೆ ಸಂಧಿಗಳ ನೋವು ಮತ್ತು ಸವೆತವನ್ನು ತಡೆಗಟ್ಟಬಹುದು. ಎಳ್ಳೆಣ್ಣೆಯಲ್ಲಿ ವಿಟಮಿನ್‌ ಇ ಹಾಗೂ ಕೀಟಾಣು, ವೈರಾಣು ನಾಶಕ ಗುಣಗಳಿರುವುದರಿಂದ ವಸಡಿನ ರಕ್ತಸ್ರಾವ, ಹಲ್ಲು ನೋವು, ಹಲ್ಲು ಹುಳುಕಾಗುವಿಕೆ, ಬಾಯಿ ಹುಣ್ಣಿನ ಸಮಸ್ಯೆಯನ್ನು ಸುಲಭವಾಗಿ ಹೋಗಲಾಡಿಸಬಹುದು. ಕಪ್ಪೆಳ್ಳನ್ನು ಹುರಿದು ಹುಡಿ ಮಾಡಿ, ಒಂದು ಲೋಟ ನೀರಿನಲ್ಲಿ ಕುದಿಸಿ ಸ್ವಲ್ಪ ಬೆಲ್ಲ ಸೇರಿಸಿ ದಿನಕ್ಕೊಮ್ಮೆ ಕುಡಿಯುವುದರಿಂದ ಮಹಿಳೆಯರಿಗೆ ಉತ್ತಮ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3–child-growth

Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು

2-bamboo-brush

Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್‌ ಮೊರೆಹೋಗಿ

2-kidney-day

World Kidney Day: ಹಿಮೋಡಯಾಲಿಸಿಸ್‌: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?

3-health

Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.