ರಕ್ತಹೀನತೆ ಸಮಸ್ಯೆ ನಿವಾರಣೆ…ಕೇಶ ಸೌಂದರ್ಯಕ್ಕೆ ಪೇರಳೆ ಎಲೆ ಬಳಸಿ…

ತಲೆಯಲ್ಲಿ ಹೊಟ್ಟು ನಿವಾರಣೆಗೆ ಪೇರಳೆ ಎಲೆ ಸೂಕ್ತ ಪರಿಹಾರ.

Team Udayavani, Aug 11, 2022, 1:44 PM IST

ರಕ್ತಹೀನತೆ ಸಮಸ್ಯೆ ನಿವಾರಣೆ…ಕೇಶ ಸೌಂದರ್ಯಕ್ಕೆ ಪೇರಳೆ ಎಲೆ ಬಳಸಿ…

ಕೇಶರಾಶಿ ಕನ್ಯೆಯರ ಸೌಂದರ್ಯ ಹೆಚ್ಚಿಸುತ್ತದೆ. ಉದ್ದ ಜಡೆ, ಗುಂಗುರು ಕೂದಲು, ದಪ್ಪ ಕೂದಲು ಇದು ಹೆಂಗಳೆಯರ ಸೌಂದರ್ಯಕ್ಕೆ ಇನ್ನಷ್ಟು ಮೆರುಗು ನೀಡುತ್ತದೆ. ಆದರೆ ಅದೇ ಕೂದಲು ಉದುರಲು ಶುರುವಾದರೆ ಅದರಿಂದ ಬೇಸತ್ತು ಹೋಗುತ್ತೇವೆ. ಇತ್ತೀಚಿನ ಹವಾಮಾನ ಬದಲಾವಣೆ, ನೀರಿನ ಸಮಸ್ಯೆಯಿಂದ ಕೂದಲು ಉದುರುವುದು ಹೆಚ್ಚಾಗಿದೆ. ವಿವಿಧ ಸೆಲೂನ್‌ ಚಿಕಿತ್ಸೆ, ದುಬಾರಿ ಕೇಶವರ್ಧಕ ಶ್ಯಾಂಪೂ ಬಳಸಿದರೂ ಕೂಡ ಯಾವುದೇ ಪರಿಣಾಮ ಕಂಡು ಬಂದಿಲ್ಲವಾದಲ್ಲಿ ನೈಸರ್ಗಿಕವಾಗಿ ಸಿಗುವ ಪೇರಳೆ ಎಲೆಗಳಿಂದ ಕೇಶ ಕಾಪಾಡಿಕೊಳ್ಳಿ.

ಪೇರಳೆ ಎಲೆಗಳಲ್ಲಿ ವಿಟಮಿನ್‌ ಬಿ ಮತ್ತು ಸಿ ಇರುವುದರಿಂದ ಇದು ಕೂದಲಿನ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಈ ಎಲೆಗಳನ್ನು ನಿಮ್ಮ ಮನೆಯಲ್ಲಿ ಈ ರೀತಿಯಾಗಿ ಪ್ರಯೋಗಿಸಿ ನೋಡಿ.

ಪೇರಳೆ ಹಣ್ಣಿನ ಚಹಾ
ನೀವು ಪೇರಳೆ ಎಲೆಗಳನ್ನು ಬಳಸಿ ಒಂದು ಕಪ್‌ ಚಹಾ ತಯಾರಿಸಿ, ಪ್ರತಿದಿನ ಎರಡು ಬಾರಿಯಾದರೂ ನಿಯಮಿತವಾಗಿ ಕುಡಿಯಿರಿ. ಇದು ನಿಮ್ಮ ತಲೆಕೂದಲಿನ ಬೆಳವಣಿಗೆ ಸಹಾಯ ಮಾಡುತ್ತದೆ.

ಪೇರಳೆ ಎಲೆಯ ಸ್ನಾನ
ಸ್ವಲ್ಪ ಪೇರಳೆ ಎಲೆ, ಒಂದು ಲೀ. ನೀರು ಇಷ್ಟನ್ನು ಬಳಸಿಕೊಂಡು ಪೇರಳೆ ಎಲೆಗಳನ್ನು 20 ನಿಮಿಷಗಳ ಕಾಲ ಕುದಿಸಿಕೊಳ್ಳಿ. ಅನಂತರ ಇದನ್ನು ತಣ್ಣಗಾಗಲು ಬಿಡಿ. ಅನಂತರ ನಿಮ್ಮ ಕೂದಲು ಒಣಗಿದ ಮೇಲೆ ನೆತ್ತಿಗೆ 10 ನಿಮಿಷಗಳ ಕಾಲ ಈ ದ್ರಾವಣ ಮಸಾಜ್‌ ಮಾಡಿ. ಅನಂತರ ತಣ್ಣೀರಿನಲ್ಲಿ ತಲೆಸ್ನಾನ ಮಾಡಿ. ಇನ್ನು ನೀವು ಕೂದಲು ಉದುರುವಿಕೆಯ ಸಮಸ್ಯೆಯನ್ನು ಎದುರಿಸುತ್ತಿದ್ದರೆ ಇದನ್ನು ನೀವು ವಾರದಲ್ಲಿ ಎರಡು, ಮೂರು ಬಾರಿ ಬಳಸಿಕೊಳ್ಳಿ. ಇದರಿಂದ ನಿಮ್ಮ ಕೂದಲಿನ ಆರೋಗ್ಯ ಉತ್ತಮವಾಗಿರುತ್ತದೆ. ಅಥವಾ ನಿಮ್ಮ ಕೂದಲಿಗೆ ಅಥವಾ ನೆತ್ತಿಗೆ ಲೋಶನ್‌ ತಯಾರಿಸಿ ಹಚ್ಚಿಕೊಳ್ಳಿ. ಇದರಿಂದ ಕೂಡ ಕೂದಲು ಉದುರುವಿಕೆಯನ್ನು ತಡೆಗಟ್ಟಬಹುದು ಮತ್ತು ಇದರಿಂದ ಕೂದಲಿನ ಬೆಳವಣಿಗೆ ಸಾಧ್ಯವಾಗುತ್ತದೆ.

ಉರಿಯೂತವನ್ನು ಕಡಿಮೆ ಮಾಡುತ್ತದೆ
ಪೇರಳೆ ಎಲೆಗಳು ನೆತ್ತಿಯ ಉರಿಯೂತವನ್ನು ಕಡಿಮೆ ಮಾಡುತ್ತವೆ. ನೆತ್ತಿಯ ಉರಿಯೂತದಿಂದ ಕೂದಲು ಉದುರುವ ಸಾಧ್ಯತೆಗಳಿರುತ್ತವೆ. ಪೇರಳೆ ಹಣ್ಣಿನ ಎಲೆಗಳನ್ನು ಪೇಸ್ಟ್‌ ಮಾಡಿ ನೆತ್ತಿಯ ಮೇಲೆ ಹಚ್ಚಿಕೊಳ್ಳಿ. ಇದರಿಂದ ತಲೆ ಕೂದಲು ಉದುರುವ ಸಮಸ್ಯೆ ನಿವಾರಣೆಯಾಗುತ್ತದೆ.

ರಕ್ತ ಹೀನತೆಯನ್ನು ತಡೆಗಟ್ಟುತ್ತದೆ
ರಕ್ತಹೀನತೆಯಿಂದಾಗಿ ಕೂಡ ಕೂದಲು ಉದುರುತ್ತದೆ. ಅನೇಕ ಮಹಿಳೆಯರು ಇಂದು ರಕ್ತಹೀನತೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಕೂದಲು ಉದುರುವ ಸಮಸ್ಯೆಗಳು ಕೂಡ ಹೆಚ್ಚಾಗಿವೆ. ಪೇರಳೆ ಎಲೆಯ ಚಹಾವನ್ನು ತಯಾರಿಸಿ ಅದನ್ನು ಕುಡಿಯುವುದರಿಂದ ರಕ್ತಹೀನತೆ ಸಮಸ್ಯೆ ನಿವಾರಣೆಯಾಗುತ್ತದೆ.

ಹೊಟ್ಟು ನಿವಾರಣೆ
ತಲೆಯಲ್ಲಿ ಹೊಟ್ಟು ನಿವಾರಣೆಗೆ ಪೇರಳೆ ಎಲೆ ಸೂಕ್ತ ಪರಿಹಾರ. ಪೇರಳೆ ಎಲೆಯಿಂದ ಸೀರಮ್‌ ಅನ್ನು ತಯಾರಿಸಿ ಅದನ್ನು ತಲೆಗೆ ಹಚ್ಚುವುದರಿಂದ ಕೂದಲಿನ ಬೆಳವಣಿಗೆ ಸಾಧ್ಯವಾಗುತ್ತದೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.