ಮನೆಮದ್ದು; ಉಪಯುಕ್ತ ಔಷಧೀಯ ಗುಣ ಹೊಂದಿರೋ ಸಂಜೀವಿನಿ “ತುಳಸಿ”

ತುಳಸಿಯೊಂದಿಗೆ ಜೇನುತುಪ್ಪ ಮತ್ತು ಶುಂಠಿ ರಸದ ಮಿಶ್ರಣವು ಅದ್ಭುತವಾಗಿ ಕೆಲಸ ಮಾಡುತ್ತದೆ.

Team Udayavani, Jul 13, 2022, 11:47 AM IST

ಮನೆಮದ್ದು; ಉಪಯುಕ್ತ ಔಷಧೀಯ ಗುಣ ಹೊಂದಿರೋ ಸಂಜೀವಿನಿ “ತುಳಸಿ”

ಪುಟ್ಟ ಸಸ್ಯವಾದ ತುಳಸಿಯನ್ನು ಹಿಂದೂ ಧರ್ಮದಲ್ಲಿ ವಿಶೇಷ ಸ್ಥಾನವನ್ನು ನೀಡಿ ಪೂಜಿಸಲಾಗುತ್ತದೆ. ಜಗತ್ ಪಾಲಕನಾದ ಭಗವಾನ್ ವಿಷ್ಣುವಿಗೆ ತುಳಸಿ ಅತ್ಯಂತ ಶ್ರೇಷ್ಠವಾದದ್ದು. ಯಾರು ಮನೆಯಲ್ಲಿ ತುಳಸಿ ಗಿಡವನ್ನು ನಿತ್ಯವೂ ಪೂಜಿಸುತ್ತಾರೋ ಆ ಮನೆಯಲ್ಲಿ ದೇವರು ನೆಲೆಸುತ್ತಾರೆ ಎಂಬ ನಂಬಿಕೆ ಇದೆ. ತುಳಸಿ ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ಬೆಳೆಯುವ ದೈವಿಕ ಸಸ್ಯ. ತುಳಸಿ ಧಾರ್ಮಿಕವಾಗಿ ಮಾತ್ರವಲ್ಲದೆ, ಔಷಧೀಯ ಗುಣಗಳನ್ನು ಹೊಂದಿದೆ.

ತುಳಸಿಯ ಔಷಧೀಯ ಉಪಯೋಗ:
ಪ್ರತಿದಿನ ತುಳಸಿ ಎಲೆಗಳನ್ನು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಜಗಿದು ತಿನ್ನುವುದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಇದರ ಎಲೆಗಳಿಂದ ತಯಾರಿಸಿದ ಸುಗಂಧ ತೈಲವು ಬ್ಯಾಕ್ಟೀರಿಯಾ ನಿರೋಧಕ ಗುಣ ಹೊಂದಿದೆ.

ಪ್ರತಿ ದಿನ ತಿಂದರೆ ಹಲವು ಸೋಂಕು ಮತ್ತು ರೋಗವನ್ನು ದೂರವಿರಿಸಬಹುದು. ಇದರ ಸೇವನೆಯಿಂದ ಜ್ಞಾಪಕ ಶಕ್ತಿಯೂ ಹೆಚ್ಚಾಗಿ ಬುದ್ಧಿವಂತಿಕೆಯೂ ಚುರುಕುಗೊಳ್ಳುತ್ತದೆ.

ಜ್ವರ ಹಾಗೂ ಶೀತಕ್ಕೆ ಮನೆಮದ್ದು:
ತುಳಸಿ ಎಲೆಗಳನ್ನು ಸೇವಿಸುವುದರಿಂದ ಜ್ವರ ಹಾಗೂ ಶೀತ ಕಡಿಮೆಯಾಗುತ್ತದೆ. ಸ್ವಲ್ಪ ತುಳಸಿ ಎಲೆಗಳನ್ನು ಚಹಾದೊಂದಿಗೆ ಕುದಿಸಿ ಕುಡಿಯುವುದರಿಂದ ಮಲೇರಿಯಾ ಹಾಗೂ ಡೆಂಗ್ಯೂ ಜ್ವರ ಉಪಶಮನವಾಗುತ್ತದೆ. ಹಾಗೆಯೇ ತುಳಸಿ ರಸ ಜ್ವರವನ್ನು ತಗ್ಗಿಸುವಲ್ಲಿ ಸಹಕಾರಿಯಾಗಿದ್ದು, ಇದರ ಎಲೆಯನ್ನು ಜಗಿಯುವುದರಿಂದ ಶೀತ ಹಾಗೂ ಕೆಮ್ಮು ನಿವಾರಣೆಯಾಗುತ್ತದೆ.

ಜೀರ್ಣಶಕ್ತಿ ಉತ್ತಮಗೊಳಿಸುತ್ತದೆ:
ಜೀರ್ಣಶಕ್ತಿ ಉತ್ತಮವಾಗಿದ್ದರೆ ಮನುಷ್ಯ ಆರೋಗ್ಯವಾಗಿ ಇರುತ್ತಾನೆ. ಹೀಗಾಗಿ ತುಳಸಿ ಎಲೆಗಳನ್ನು ಸೇವಿಸಿ ಜೀರ್ಣಶಕ್ತಿಯನ್ನು ವೃದ್ಧಿಸಿಕೊಂಡು ಆರೋಗ್ಯವಾಗಿ ಇರಬಹುದು.

ತಲೆನೋವಿಗೆ ಉಪಶಮನ ನೀಡುತ್ತದೆ:
ತುಳಸಿ ರಸವನ್ನು ಗಂಧದೊಂದಿಗೆ ತೇಯ್ದು ನೆತ್ತಿಗೆ ಹಚ್ಚುವುದರಿಂದ ತಲೆನೋವು ದೂರವಾಗುತ್ತದೆ. ಹೀಗಾಗಿ ಅನೇಕ ತಲೆನೋವು ಔಷಧಿಗಳಲ್ಲಿ ತುಳಸಿ ಎಲೆಗಳನ್ನು ಬಳಸಲಾಗುತ್ತದೆ.

ತುಳಸಿ ಎಲೆಯ ರಸವನ್ನು ಎಣ್ಣೆಯಲ್ಲಿ ಕಾಯಿಸಿ ತಲೆಗೆ ಹಚ್ಚುವುದರಿಂದ ತಲೆಯಲ್ಲಿನ ಹೇನು, ಹೊಟ್ಟು ಬರುವಿಕೆ ಕೂಡಾ ನಿವಾರಣೆಯಾಗುತ್ತದೆ.

ಕೆಮ್ಮು,ಉಸಿರಾಟದ ತೊಂದರೆಗಳು:
ಉಸಿರಾಟದ ವ್ಯವಸ್ಥೆಗೆ ತುಲಸಿ ಒಂದು ಅಮೃತ ಸಮಾನ, ಈಗ ಮಾರುಕಟ್ಟೆಯಲ್ಲಿರುವ ಮುಕ್ಕಾಲು ಭಾಗ ಕಾಫ಼್ ಸಿರಪ್ ಗಳಲ್ಲಿ ತುಳಸಿಯನ್ನು ಉಪಯೋಗಿಸಲಾಗಿರುತ್ತದೆ. ತುಳಸಿಯೊಂದಿಗೆ ಜೇನುತುಪ್ಪ ಮತ್ತು ಶುಂಠಿ ರಸದ ಮಿಶ್ರಣವು ಅದ್ಭುತವಾಗಿ ಕೆಲಸ ಮಾಡುತ್ತದೆ.

ಬಾಯಿ ಹುಣ್ಣು ನಿವಾರಿಸುತ್ತದೆ:
ಬಾಯಿಯಲ್ಲಿ ಹುಣ್ಣು ಮತ್ತು ಸೋಂಕುಗಳಿಗೆ ತುಳಸಿ ಎಲೆಗಳು ತುಂಬಾ ಪರಿಣಾಮಕಾರಿ.

ಹದಿಹರೆಯದವರನ್ನು ಕಾಡುವ ಮೊಡವೆ ಯಾ ಸಮಸ್ಯೆಗಳಿಗೆ ತುಳಸಿ ಎಲೆಯನ್ನು ಅರೆದು ರಸವನ್ನು ಲೇಪಿಸಬೇಕು.

ಊರಿ ಮೂತ್ರದ ತೊಂದರೆ ಇರುವಾಗ ತುಳಸಿ ಎಲೆಯ ರಸವನ್ನು ಹಾಲು ಸಕ್ಕರೆಯೊಂದಿಗೆ ಬೆರೆಸಿ ಕುಡಿಯಬೇಕು

ಮಕ್ಕಳಲ್ಲಿ ಕಫದ ಸಮಸ್ಯೆ ಕಂಡು ಬಂದಲ್ಲಿ ತುಳಸಿ ಎಲೆಯ ರಸವನ್ನು ಜೇನು ತುಪ್ಪದೊಂದಿಗೆ ಬೆರೆಸಿ 2  3 ಗಂಟೆಗಳಿಗೊಮ್ಮೆ ಕುಡಿಸಿದರೆ ಕಫದ ಪ್ರಮಾಣ ಕಡಿಮೆಯಾಗುತ್ತದೆ.

ಚಿಕ್ಕ ಮಕ್ಕಳಲ್ಲಿ ಹೊಟ್ಟೆ ನೋವು ಕಾಣಿಸಿಕೊಂಡಲ್ಲಿ ತುಳಸಿ ರಸದೊಂದಿಗೆ ಶುಂಠಿ ರಸ ಹಾಗು ಜೇನು ತುಪ್ಪ ಬೆರೆಸಿ ಕುಡಿಸಬೇಕು.

ಹೀಗಿ ಸಾಕಷ್ಟು ಆರೋಗ್ಯಕರ ಅಂಶವನ್ನು ತುಳಸಿ ತನ್ನಲ್ಲಿ ಬಚ್ಚಿಟ್ಟುಕೊಂಡಿದೆ. ಹೀಗಾಗಿ ನಿಮ್ಮ ದಿನನಿತ್ಯದ ಆಹಾರದಲ್ಲಿ ಮಿತವಾಗಿ ತುಳಸಿ ಬಳಸಿ, ಆರೋಗ್ಯವನ್ನು ಕಾಯ್ದುಕೊಳ್ಳಿ.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.