ಪಕ್ಷದ ಭರವಸೆಯಂತೆ ಮುನಿರತ್ನಗೆ ಟಿಕೆಟ್ ಸಿಗುವ ವಿಶ್ವಾಸವಿದೆ : ಡಾ.ಕೆ. ಸುಧಾಕರ್
ನಾಯಕತ್ವ ಬದಲಾವಣೆ ಸುಳ್ಳು ಯಡಿಯೂರಪ್ಪ ಅವರೇ ಸಮರ್ಥರಿದ್ದಾರೆ
Team Udayavani, Sep 29, 2020, 5:01 PM IST
ಬೆಂಗಳೂರು: ಪಕ್ಷದ ಭರವಸೆಯಂತೆ ಮುನಿರತ್ನ ಅವರಿಗೇ ಟಿಕೆಟ್ ಸಿಗುವ ವಿಶ್ವಾಸವಿದ್ದು, ಯಾವುದೇ ಪ್ರತಿರೋಧವಿಲ್ಲದೇ ಉಪಚುನಾವಣೆಯಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದರು.
ಅಧಿಕೃತ ನಿವಾಸದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದರ ಅವರು, ಮುನಿರತ್ನ ಅವರು ಶಾಸಕ ಸ್ಥಾನ ತ್ಯಜಿಸಿ ಸರಕಾರ ರಚನೆಗಾಗಿ ಕೊಡುಗೆ ನೀಡಿದ್ದಾರೆ. ಆ ವೇಳೆ ನೀಡಿದ ಭರವಸೆಯಂತೆ ಹಿರಿಯ ನಾಯಕರು ಖಂಡಿತ ನ್ಯಾಯುತವಾದ ತೀರ್ಮಾನ ಕೊಡುತ್ತಾರೆ ಎಂಬ ವಿಶ್ವಾಸವಿದೆ. ಉಪ ಚುನಾವಣೆಯಲ್ಲಿ ಗೆದ್ದ ನಮ್ಮೆಲ್ಲರಿಗೂ ಭರವಸೆಯಂತೆ ನಡೆದುಕೊಂಡಿದ್ದಾರೆ. ಹೀಗಾಗಿ ಮುನಿರತ್ನ ಅವರಿಗೂ ಸಹ ಈ ಬಾರಿ ಯಾವುದೇ ಅನ್ಯಾಯವಾಗುವುದಿಲ್ಲ. ಯಾರಿಗೆ ಆದ್ಯತೆ ನೀಡಬೇಕು ಎಂಬುದು ಪಕ್ಷದ ನಾಯಕರಿಗೆ ತಿಳಿದಿದೆ ಎಂದು ಹೇಳಿದರು.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ
ಯಡಿಯೂರಪ್ಪ ಅವರೇ ನಮ್ಮನಾಯಕರು:
ಪಕ್ಷದ ನಾಯಕತ್ವ ಬದಲಾವಣೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನಮ್ಮ ನಾಯಕರು ಸದೃಢರಾಗಿದ್ದಾರೆ, ನಾಯಕತ್ವ ಬದಲಾವಣೆ ಹೇಳಿಕೆಯ ಊಹಾಪೋಹಗಳಿಗೆ ಕಿವಿಗೊಡಬೇಕಿಲ್ಲ ಎಂದು ಸ್ಪಷ್ಟಪಡಿಸಿದರು.
ಇತ್ತೀಚೆಗಷ್ಟೆ ಅಗಲಿದ ಸುರೇಶ್ ಅಂಗಡಿ ಅವರನ್ನು ರಾಜಕೀಯವಾಗಿ ಎಳೆ ತರುವುದು ಸರಿಯಲ್ಲ. ಅವರ ಕುಟುಂಬಸ್ಥರು ಈ ನೋವಿನಿಂದ ಇನ್ನೂ ಹೊರಬಂದಿಲ್ಲ, ಹೀಗಿರುವಾಗ ಅವರ ಹೆಸರನ್ನು ರಾಜಕೀಯವಾಗಿ ಬಳಸಬೇಡಿ. ಸಿದ್ದರಾಮಯ್ಯ ಅವರ ಹೇಳಿಕೆಗೆ ತಿರುಗೇಟು ನೀಡಿದ ಸಚಿವರು, ಉಪಚುನಾವಣೆಯಲ್ಲೂ ನಾವೆ ಗೆಲ್ಲುತ್ತೇವೆ, ಮುಂದಿನ 10 ವರ್ಷ ಕಾಂಗ್ರೆಸ್ ಪಕ್ಷವನ್ನು ವಿರೋಧ ಪಕ್ಷದಲ್ಲೇ ಕೂರಿಸುತ್ತೇವೆ ಎಂದು ಯಡಿಯೂರಪ್ಪ ಅವರು ದಿಟ್ಟ ಉತ್ತರ ನೀಡಿದ್ದರೂ ನಾಯಕತ್ವ ಬದಲಾವಣೆ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ನೀಡುವರೆ ಎಂದರು.
ಇದನ್ನೂ ಓದಿ:ಬಿಹಾರ: ಚುನಾವಣೆಗೂ ಮುನ್ನ ಮೈತ್ರಿಪಕ್ಷದಲ್ಲಿ ಒಡಕು, ನಿತೀಶ್ ವಿರುದ್ಧ LJP ಅಭ್ಯರ್ಥಿ?
ಡಿಜಿಟಲ್ ಮೂಲಕ ರಾಜಕೀಯ ಪ್ರಚಾರ:
ಉಪಚುನಾವಣೆಗಿಂತ ಕೊರೋನ ನಿಯಂತ್ರಣ ಅವಶ್ಯವಾದ್ದರಿಂದ ಉಪಚುನಾವಣೆ ಪ್ರಚಾರದ ವೇಳೆ ಎಲ್ಲಾ ಪಕ್ಷಗಳು ಜಾಗೃತಿ ವಹಿಸಿ, ಡಿಜಿಟಲ್ ಮೂಲಕ ಪ್ರಚಾರ ನಡೆಸಿದರೆ ಉತ್ತಮ ಎಂದು ಸಲಹೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ