ಉತ್ತರ ಕರ್ನಾಟಕದಲ್ಲಿ ಮತ್ತೆ ಜಲಪ್ರಳಯ ಭೀತಿ


Team Udayavani, Oct 20, 2019, 11:35 PM IST

rain

– ಮಲಪ್ರಭಾ, ಕೃಷ್ಣಾ, ವೇದಗಂಗಾ, ದೂಧಗಂಗಾ ನದಿ ಮಟ್ಟ ಹೆಚ್ಚಳ
– ಚಿಕ್ಕೋಡಿ ತಾಲೂಕಿನ ಬೇಡಕಿಹಾಳ ಆಸ್ಪತ್ರೆಗೆ ನುಗ್ಗಿದ ನೀರು
– ನಿಪ್ಪಾಣಿ ತಾಲೂಕಿನ ಆಡಿ ಗ್ರಾಮದಲ್ಲಿ ಕೊಚ್ಚಿ ಹೊದ ಕಾರು-ಬೈಕ್‌
– ಡೋಣಿ ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಇಬ್ಬರು ಯುವಕರ ರಕ್ಷಣೆ

ಹುಬ್ಬಳ್ಳಿ: ಪ್ರವಾಹದಿಂದ ತತ್ತರಿಸಿದ್ದ ಉತ್ತರ ಕರ್ನಾಟಕದಲ್ಲಿ ಮತ್ತೆ ಜಲಪ್ರಳಯ ಭೀತಿ ಎದುರಾಗಿದೆ. ನಾಲ್ಕು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಕೃಷ್ಣಾ, ವೇದಗಂಗಾ, ದೂಧಗಂಗಾ, ಮಲಪ್ರಭಾ ಸೇರಿದಂತೆ ಪ್ರಮುಖ ನದಿಗಳು ಉಕ್ಕಿ ಹರಿಯುತ್ತಿವೆ.

ಬೆಳಗಾವಿ ಜಿಲ್ಲೆಯ ಒಂದೆರಡು ತಾಲೂಕುಗಳನ್ನು ಹೊರತುಪಡಿಸಿ ಉಳಿದೆಲ್ಲ ತಾಲೂಕು ಕೇಂದ್ರಗಳು ಮಳೆಯ ಅವಾಂತರಕ್ಕೆ ತುತ್ತಾಗಿವೆ. ಮಳೆಯ ರಭಸಕ್ಕೆ ವಾಹನಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗಿವೆ. ಸುತಗಟ್ಟಿ ಹಾಗೂ ಹೊನಗಾ ಗ್ರಾಮದ ಹತ್ತಿರ ರಾಷ್ಟಿÅàಯ ಹೆದ್ದಾರಿ ಮೇಲೆ ನೀರು ಹರಿಯುತ್ತಿದ್ದು, ಸಂಚಾರ ಸ್ಥಗಿತಗೊಳಿಸಲಾಗಿದೆ.

ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣ ಜಲಾವೃತವಾಗಿದೆ. ಕೆಲ ಪ್ರದೇಶಗಳು ನಡುಗಡ್ಡೆಯಂತಾಗಿದ್ದು, ಕಾರು, ದ್ವಿಚಕ್ರ ವಾಹನ ಸೇರಿದಂತೆ 10ಕ್ಕೂ ಹೆಚ್ಚು ವಾಹನಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗಿವೆ. ನಿಪ್ಪಾಣಿ ತಾಲೂಕಿನ ಆಡಿ ಗ್ರಾಮದಲ್ಲೂ 10ಕ್ಕೂ ಹೆಚ್ಚು ಬೈಕ್‌ಗಳು ಸೇರಿದಂತೆ ಅನೇಕ ವಾಹನಗಳು ನೀರಿನಲ್ಲಿ ತೇಲಿಕೊಂಡು ಹೋಗಿವೆ.

ಚಿಕ್ಕೋಡಿ ತಾಲೂಕಿನ ಬೇಡಕಿಹಾಳ ಗ್ರಾಮದಲ್ಲಿ ಆಸ್ಪತ್ರೆಗೆ ನೀರು ನುಗ್ಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆಯಲ್ಲಿನ ರೋಗಿಗಳನ್ನು ಚಿಕ್ಕೋಡಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಸವದತ್ತಿ-ಧಾರವಾಡ ರಸ್ತೆ ಸಂಪರ್ಕ ಕಡಿತಗೊಂಡಿದೆ. ಬೈಲಹೊಂಗಲ ತಾಲೂಕಿನ ಬೈಲವಾಡ ಗ್ರಾಮದ ಕಿರು ಸೇತುವೆ ಮುಳುಗಡೆಯಾಗಿದೆ. ಅಥಣಿ ಹಾಗೂ ಗೋಕಾಕ ತಾಲೂಕುಗಳಲ್ಲಿ ಮಳೆಯಾಗಿದ್ದರೂ ಯಾವುದೇ ಅನಾಹುತವಾಗಿಲ್ಲ.

ಮಲಪ್ರಭಾ ಜಲಾಶಯಕ್ಕೆ ಹೆಚ್ಚು ನೀರು:
ಮಲಪ್ರಭಾ ನದಿಯ ಒಳ ಹಾಗೂ ಹೊರಹರಿವಿನ ಪ್ರಮಾಣ ಹೆಚ್ಚಳವಾಗಿದ್ದು, ನದಿ ಪಾತ್ರದ ಗ್ರಾಮಗಳ ಮತ್ತೆ ಪ್ರವಾಹ ಎದುರಾಗಿದೆ. ಮಲಪ್ರಭಾ ಜಲಾಶಯಕ್ಕೆ 18 ಸಾವಿರ ಕ್ಯೂಸೆಕ್‌ ನೀರು ಬರುತ್ತಿದ್ದು ಇದೇ ಪ್ರಮಾಣದಲ್ಲಿ ನೀರನ್ನು ಹೊರಗಡೆ ಬಿಡಲಾಗುತ್ತಿದೆ.

ವಿಜಯಪುರ ಜಿಲ್ಲೆಯಲ್ಲಿ ಡೋಣಿ ನದಿ ಉಕ್ಕಿ ಹರಿಯುತ್ತಿದ್ದು, ತಾಳಿಕೋಟೆ ತಾಲೂಕಿನ ಕಲ್ಲದೇವನಹಳ್ಳಿ ಬಳಿ ಸೇತುವೆ ಮೇಲೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಕೊಚ್ಚಿ ಹೋಗುತ್ತಿದ್ದ ಇಬ್ಬರು ಯುವಕರು ಈಜಿ ದಡ ಸೇರಿದ್ದಾರೆ. ಗದಗ, ಹಾವೇರಿ, ಧಾರವಾಡ, ಬಳ್ಳಾರಿ, ಚಿತ್ರದುರ್ಗ, ಉತ್ತರ ಕನ್ನಡ ಸೇರಿದಂತೆ ಉತ್ತರ ಕರ್ನಾಟಕದಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ.

ಟಾಪ್ ನ್ಯೂಸ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.