ಬೆಂಗಳೂರು : ಪೂರ್ವ ಭಾಗದಲ್ಲಿ ಭರ್ಜರಿ ಮಳೆ, 10 ಮರಗಳು ಧರೆಗೆ


Team Udayavani, Jun 4, 2022, 10:27 PM IST

ಬೆಂಗಳೂರು : ಪೂರ್ವ ಭಾಗದಲ್ಲಿ ಭರ್ಜರಿ ಮಳೆ, 10 ಮರಗಳು ಧರೆಗೆ

ಬೆಂಗಳೂರು: ನಗರದ ಪೂರ್ವ ವಲಯದಲ್ಲಿ ಶನಿವಾರ ಸಂಜೆ ಭರ್ಜರಿ ಮಳೆಯಾಗಿದೆ. ಉಳಿದೆಡೆ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಿದೆ. ಪಶ್ಚಿಮ ಭಾಗದಲ್ಲಿ ಮಳೆಗಿಂತ ಗಾಳಿಯ ವೇಗ ಹೆಚ್ಚಾಗಿದ್ದರಿಂದ ಸುಮಾರು 8ರಿಂದ 10 ಕಡೆ ಮರಗಳು ಉರುಳಿರುವ ಬಗ್ಗೆ ವರದಿಯಾಗಿದೆ.

ಪೂರ್ವ ಭಾಗದ ಕೆ.ಆರ್‌. ಪುರದಲ್ಲಿ 44.5 ಮಿಮೀ ಮಳೆಯಾಗಿದೆ. ಮಹದೇವಪುರ ಹಾಗೂ ದೊಡ್ಡನೆಕ್ಕುಂದಿಯಲ್ಲಿ ತಲಾ 33 ಮಿಮೀ ಮಳೆಯಾಗಿದೆ. ಪರಿಣಾಮ, ಪೂರ್ವಭಾಗದಲ್ಲಿ ಶನಿವಾರ ಬೈಕ್‌ ಸವಾರರು ಸಂಚರಿಸಲು ಪರದಾಡುವಂತಾಯಿತು.

ನಗರದ ಕೇಂದ್ರ ಭಾಗವಾದ ಮೆಜೆಸ್ಟಿಕ್‌, ಮಾರ್ಕೆಟ್‌, ಹಲಸೂರು, ಕಾರ್ಪೋರೇಷನ್‌, ಚಿಕ್ಕಪೇಟೆ, ಮಲ್ಲೇಶ್ವರ, ರಾಜಾಜಿನಗರ, ಶಾಂತಿನಗರ ಸೇರಿದಂತೆ ಹಲವೆಡೆ ಶನಿವಾರ ಸಂಜೆ ಜಿಟಿ ಜಿಟಿ ಮಳೆಯಾಗಿದೆ.

ಎಲ್ಲೆಲ್ಲಿ ಎಷ್ಟು ಮಳೆ?
ದಾಸನಪುರ 16 ಮಿಮೀ, ಆಲೂರು 8.5, ಹುಸ್ಕೂರು 10.5, ಮಾದನಾಯಕನಹಳ್ಳಿ 13, ಅಡಕೆಮಾರನಹಳ್ಳಿ 12.5, ಹಸೆರುಘಟ್ಟ 19.5, ಅರಕೆರೆ 17, ಶಿವಕೋಟೆ 13, ಸೊನ್ನೇನಹಳ್ಳಿ 13.5, ಐಟಿಸಿ ಜಾಲ 21.5, ಹುಣಸೆಮಾರನಹಳ್ಳಿ 16.5, ಸಿಂಗನಾಯಕನಹಳ್ಳಿ 29.5, ಚಿಕ್ಕಬಣಾವರ 10, ಬಾಗಲಗುಂಟೆ 20, ಹೂಡಿ 23, ಹೊರಮಾವು 10.5, ಎಚ್‌ಎಎಲ್‌ 20, ರಾಮೂರ್ತಿನಗರ 13.5, ಮಹದೇವಪುರ 33, ವರ್ತೂರು 21, ದೊಡ್ಡನೆಕ್ಕುಂದಿ 33, ಮಾರತ್ತಹಳ್ಳಿ 13, ವಿಜ್ಞಾನನಗರ 8 ಮಳೆಯಾಗಿದೆ.

ದಕ್ಷಿಣ ವಲಯದ ರಾಜರಾಜೇಶ್ವರಿ ನಗರ, ಕುಮಾರಸ್ವಾಮಿ ಹಾಗೂ ಸಾರಕ್ಕಿಯಲ್ಲಿ ತಲಾ 1 ಮಿಮೀ, ಕೋರಮಂಗಲ 3 ಮಿಮೀ ಮತ್ತು ಚಾಮರಾಜನಗರ 1.5 ಮಿಮೀ ಮಳೆಯಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ತಿಳಿಸಿದೆ.

ಇದನ್ನೂ ಓದಿ : ಪೆರ್ಲ : ಪ್ರೀತಿಸಿ ವಿವಾಹವಾದ ಯುವ ದಂಪತಿ ನೇಣು ಬಿಗಿದು ಆತ್ಮಹತ್ಯೆ

8 ಮರಗಳು ಧರೆಗೆ:
ನಗರದಲ್ಲಿ ಮಳೆ ಮತ್ತು ಬಿರುಗಾಳಿ ಬೀಸಿದ್ದರಿಂದ ಮರಗಳು ಉರುಳಿ ಬಿದ್ದಿದ್ದು, ಮರದ ಕೊಂಬೆಗಳು ಮುರಿದು ಬಿದ್ದಿವೆ.

ಕೆ.ಆರ್‌. ಪುರದ ವಿಜಯ ಬ್ಯಾಂಕ್‌ ಕಾಲೋನಿ, ಕುಂದನಹಳ್ಳಿಯ ಎಇಸಿಐ ಲೇಔಟ್‌, ಜಯನಗರ 4ನೇ ಬ್ಲಾಕ್‌, ಅತ್ತಿಗುಪ್ಪೆ, ಆಸ್ಟಿನ್‌ಟೌನ್‌ನ ಜಸ್ಮಾ ಭವನ, ಮಲ್ಲಸಂದ್ರ, ಗೆಳೆಯರ ಬಳಗದ ಎಜಿಬಿ ಬಡಾವಣೆ ಸೇರಿದಂತೆ ಹಲವೆಡೆ ಮರಗಳು ಉರುಳಿ ಬಿದ್ದಿವೆ ಎಂದು ಬಿಬಿಎಂಪಿ ಸಹಾಯವಾಣಿ ಮಾಹಿತಿ ನೀಡಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.