ಬಣಕಲ್ ಸುತ್ತಮುತ್ತ ಧಾರಾಕಾರ ಮಳೆ : ಮನೆಯ ಮೇಲೆ ಬಾಗಿದ ವಿದ್ಯುತ್ ಕಂಬ
Team Udayavani, Mar 30, 2022, 6:12 PM IST
ಕೊಟ್ಟಿಗೆಹಾರ: ಬಣಕಲ್ ಕೊಟ್ಟಿಗೆಹಾರ ಸುತ್ತಮುತ್ತ ಬುಧವಾರ ಧಾರಾಕಾರ ಮಳೆಯಾಗಿದ್ದು ಬಣಕಲ್ನಲ್ಲಿ ಹೆದ್ದಾರಿ ಬದಿಯಲ್ಲಿ ಹಾಕಿದ ವಿದ್ಯುತ್ ಕಂಬ ಮನೆಯೊಂದರ ಮೇಲೆ ಬಾಗಿ ಬೀಳುವ ಸ್ಥಿತಿಯಲ್ಲಿದೆ.
ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಿನ್ನಲೆಯಲ್ಲಿ ಬಣಕಲ್ ಭಾಗದಲ್ಲಿ ರಸ್ತೆ ಬದಿಯಲ್ಲಿ ಹೊಸದಾಗಿ ವಿದ್ಯುತ್ ಕಂಬಗಳನ್ನು ಹಾಕಲಾಗಿದ್ದು ಅವೈಜ್ಞಾನಿಕವಾಗಿ ವಿದ್ಯುತ್ ಕಂಬ ಅಳವಡಿಸಿರುವುದರಿಂದ ಕಂಬವೊಂದು ರಸ್ತೆ ಬದಿಯ ಪೌಲ್ಸನ್ ಎಂಬುವವರ ಮನೆಯ ಮೇಲೆ ಬಾಗಿ ನಿಂತು ಅಪಾಯ ಆಹ್ವಾನಿಸುವಂತಿದೆ.
ಈ ಭಾಗದಲ್ಲಿ ಮಳೆ ಹೆಚ್ಚು ಬೀಳುವುದರಿಂದ ಮಣ್ಣು ಸಡಿಲಗೊಂಡು ವಿದ್ಯುತ್ ಕಂಬಗಳು ಧರೆಗುರುಳುವ ಸಾಧ್ಯತೆಗಳು ಹೆಚ್ಚಿದ್ದು ವಿದ್ಯುತ್ ಕಂಬವನ್ನು ಅಳವಡಿಸುವಾಗ ಕಂಬದ ಕೆಳಭಾಗದಲ್ಲಿ ಸುತ್ತ ಕಾಂಕ್ರೇಟ್ ಹಾಕಿ ಕಂಬ ಅಳವಡಿಸಿದರೇ ಕಂಬ ಧರೆಗುರುಳುವುದು ತಪ್ಪುತ್ತದೆ. ಕೆಲ ಕಡೆಗಳಲ್ಲಿ ರಸ್ತೆ ಪಕ್ಕದ ದಿಬ್ಬದ ಮೇಲೆ ಕಂಬಗಳನ್ನು ಹಾಕಲಾಗಿದ್ದುಯ ತಗ್ಗಿನಲ್ಲಿರುವ ಮನೆ, ತೋಟಗಳ ಮೇಲೆ ಕಂಬ ಉರುಳುವ ಸಾಧ್ಯತೆ ಇರುವುದರಿಂದ ಹೆದ್ದಾರಿ ಬದಿಯಲ್ಲಿ ಹಾಕಿರುವ ಕಂಬಗಳನ್ನು ವೈಜ್ಞಾನಿಕವಾಗಿ ಅಳವಡಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಇದನ್ನೂ ಓದಿ : “ದಿ ಕಾಶ್ಮೀರಿ ಫೈಲ್ಸ್” ಚಿತ್ರಕ್ಕೆ ನೀಡಿದ ಪ್ರೋತ್ಸಾಹ “ದಂಡಿ”ಗೂ ನೀಡಿ: ವಿಶಾಲ್ ರಾಜ್
ಕೊಟ್ಟಿಗೆಹಾರ, ಬಣಕಲ್, ಚಾರ್ಮಾಡಿ ಘಾಟ್, ಬಾಳೂರು ಸೇರಿದಂತೆ ಹಲವು ಕಡೆ ಒಂದು ಗಂಟೆಗೂ ಹೆಚ್ಚು ಕಾಲ ಮಳೆ ಸುರಿಯಿತು. ಬೇಸಿಗೆಯ ತಾಪ ಜೋರಾಗಿದ್ದು ಮಳೆಯಿಂದ ತಂಪಿನ ವಾತಾವರಣ ಕಂಡು ಬಂತು. ಕಾಫಿ,ಕಾಳು ಮೆಣಸು, ಮತ್ತಿತರ ವಾಣಿಜ್ಯ ಬೆಳೆಗಳಿಗೆ ಮಳೆಯಿಂದ ಅನುಕೂಲವಾಗಿದ್ದು ರೈತರು ಮಳೆಯಿಲ್ಲದೇ ಕಂಗಾಲಾಗಿ ಬೆಳೆಗೆ ನೀರಾಯಿಸಲು ಪರದಾಡಿ ಸ್ಪ್ರಿಂಕ್ಲರ್ ಮೊರೆ ಹೋಗಿದ್ದರು. ಬುಧವಾರ ಸುರಿದ ಮಳೆಯಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
MUST WATCH
ಹೊಸ ಸೇರ್ಪಡೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!