ಕುಂದಾಪುರದ ಕೆಲವೆಡೆ ಗುಡುಗು ಸಹಿತ ಉತ್ತಮ ಮಳೆ
Team Udayavani, Mar 13, 2021, 4:50 AM IST
ಕುಂದಾಪುರ: ಹವಾಮಾನ ವೈಪರೀತ್ಯದ ಪರಿಣಾಮವಾಗಿ ಶುಕ್ರವಾರ ಬೆಳಗ್ಗಿನ ಜಾವ ಹಾಗೂ ಮಧ್ಯಾಹ್ನದ ವೇಳೆಗೆ ಕುಂದಾಪುರ ತಾಲೂಕಿನ ಹಲವೆಡೆಗಳಲ್ಲಿ ಗುಡುಗು, ಮಿಂಚು ಸಹಿತ ಉತ್ತಮ ಮಳೆಯಾಗಿದೆ. ಇದರಿಂದಾಗಿ ಅಂಗಳದಲ್ಲಿ ಒಣಗಲು ಹಾಕಿದ ಅಡಿಕೆ, ಕೊಬ್ಬರಿ, ಭತ್ತದ ಕಟಾವಿಗೆ ತೊಂದರೆಯಾಗಿದೆ.
ಕುಂದಾಪುರ, ಕೋಟೇಶ್ವರ, ಬೀಜಾಡಿ, ಗೋಪಾಡಿ, ತೆಕ್ಕಟ್ಟೆ, ಕುಂಭಾಸಿ, ತಲ್ಲೂರು, ಹೆಮ್ಮಾಡಿ, ಹಾಲಾಡಿ, ಬಿದ್ಕಲ್ಕಟ್ಟೆ, ಕಾಳಾವರ ಸೇರಿದಂತೆ ಹಲವೆಡೆ ಶುಕ್ರವಾರ ಬೆಳಗ್ಗಿನ ಜಾವ 2.30ರಿಂದ 3.30 – 4 ಗಂಟೆಯವರೆಗೂ ಭಾರೀ ಮಳೆಯಾಗಿದೆ. ಇದಲ್ಲದೆ ನೇರಳಕಟ್ಟೆ, ಕರ್ಕುಂಜೆ, ಕಾವ್ರಾಡಿ, ಬಸ್ರೂರು, ಅಂಪಾರು, ಕಂಡಲೂರು, ಬಳ್ಕೂರು ಮತ್ತಿತರ ಕಡೆಗಳಲ್ಲಿ ಶುಕ್ರವಾರ ಮಧ್ಯಾಹ್ನವೂ ಉತ್ತಮ ಸುರಿದಿದೆ.
ಅಂಗಡಿಯೊಳಗೆ ನುಗ್ಗಿದ ಮಳೆ ನೀರು
ಗುಜ್ಜಾಡಿ ಗ್ರಾ.ಪಂ. ವ್ಯಾಪ್ತಿಯ ಕೊಡಪಾಡಿಯಲ್ಲಿ ಕುಡಿಯುವ ನೀರಿನ ಪೂರೈಕೆಗಾಗಿ ಪೈಪ್ಲೈನ್ ಸಂಪರ್ಕ ಕಲ್ಪಿಸಲು ಹೊಂಡ ತೋಡಿದ್ದು, ಪೈಪ್ಲೈನ್ ಹಾಕಿದರೂ, ಹೊಂಡ ಮುಚ್ಚದೇ ಮಣ್ಣು ಹಾಗೇ ಬಿಟ್ಟ ಪರಿಣಾಮ, ಈಗ ಆ ಮಣ್ಣೆಲ್ಲ ಕೊಚ್ಚಿಕೊಂಡು ಹೋಗಿ ಚರಂಡಿಯ ಮೋರಿಯಲ್ಲಿ ರಾಶಿ ಬಿದ್ದಿದೆ. ಇದರಿಂದ ಭಾರೀ ಪ್ರಮಾಣದಲ್ಲಿ ಮಳೆ ನೀರು ಸಂಗ್ರಹಗೊಂಡು, ಅಲ್ಲೇ ಸಮೀಪದ ಎವಿನ್ ಲೂವಿಸ್ ಅವರ ಅಂಗಡಿಯೊಳಗೆ ನುಗ್ಗಿದೆ. ಪಶು ಆಹಾರ ಸೇರಿದಂತೆ ಇನ್ನಿತರ ದಿನಸಿ ಉತ್ಪನ್ನಗಳು ನೀರು ನುಗ್ಗಿದ್ದರಿಂದ ಒದ್ದೆಯಾಗಿದೆ. ಈ ಅಂಗಡಿಯ ಹಿಂದಿರುವ ಮನೆಯ ಅಂಗಳಕ್ಕೂ ನೀರು ನುಗ್ಗಿ, ಮೆಟ್ಟಿಲಿನವರೆಗೂ ಬಂದಿದೆ. ಅಂಗಳದಲ್ಲಿ ಹಾಕಲಾದ ತೆಂಗಿನ ಕೊಬ್ಬರಿಯೂ ಒದ್ದೆಯಾಗಿದೆ.
ಕೃಷಿಗೆ ತೊಂದರೆ
ಈಗ ಬಹುತೇಕ ಕಡೆಗಳಲ್ಲಿ ಭತ್ತದ ಕೃಷಿಯ ಸುಗ್ಗಿ ಹಂಗಾಮಿನ ಕಟಾವು ಕಾರ್ಯ ನಡೆಯುತ್ತಿದ್ದು, ಅಕಾಲಿಕ ಮಳೆಯಿಂದಾಗಿ ಗದ್ದೆಗಳಲ್ಲಿ ಕೊಯ್ದಿಟ್ಟ ಭತ್ತದ ಪೈರಿಗೆ ಹಾನಿಯಾಗಿದೆ. ಇದಲ್ಲದೆ ಅಂಗಳದಲ್ಲಿ ಒಣಗಲು ಹಾಕಿದ ಅಡಿಕೆಯೂ ಒದ್ದೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
D.K,Udupi ಸಿಎನ್ಜಿ ಇಂಧನ ಕೊರತೆ: ಬಂಕ್ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು
Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ
Kundapura ಕಾರು ಡಿವೈಡರ್ ಏರಿ ಪಲ್ಟಿ; ಮೂವರಿಗೆ ಗಾಯ
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು