ಕಾಫಿನಾಡು ಚಿಕ್ಕಮಗಳೂರಿನಲ್ಲಿ ದಿಢೀರ್ ಮಳೆ
Team Udayavani, Sep 1, 2020, 2:27 PM IST
ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಂಗಳವಾರ ದಿಢೀರ್ ಮಳೆಯಾಗಿದೆ, ಬೆಳಿಗ್ಗೆಯಿಂದಲೇ ಜಿಲ್ಲೆಯಲ್ಲಿ ಮೋಡಕವಿದ ವಾತಾವರಣ ಇದ್ದು ಬಾರಿ ಮಳೆಯಾಗುತ್ತಿದೆ.
ಕಳೆದ 20 ದಿನಗಳ ಹಿಂದೆ ಜಿಲ್ಲೆಯಾದ್ಯಂತ ಭಾರಿ ಮಳೆಯಾಗಿದ್ದು ಮಳೆಗೆ ಆರು ಮಂದಿ ಸಾವನ್ನಪ್ಪಿದ್ದರು, ಆ ಬಳಿಕ ಮಳೆಯ ಪ್ರಮಾಣ ಕಡಿಮೆಯಾಗಿದ್ದು ಬೇಸಿಗೆಯ ವಾತಾವರಣ ನಿರ್ಮಾಣವಾಗಿತ್ತು ಆದರೆ ಮಂಗಳವಾರ ಬೆಳಿಗ್ಗೆಯಿಂದಲೇ ಮೋದಕವಿದಿದ್ದ ವಾತಾವರಣ ನಿರ್ಮಾಣವಾಗಿದ್ದು ದಿಢೀರ್ ಮಳೆ ಸುರಿಯಲಾರಂಭಿಸಿದೆ.
ಮತ್ತೆ ಸುರಿದ ಮಳೆಯಿಂದ ಜಿಲ್ಲೆಯ ಜನರು ಕಂಗಾಲಾಗಿದ್ದಾರೆ ಆಗಸ್ಟ್ ಮೊದಲ ವಾರದಲ್ಲಿ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆ ಜನರನ್ನು ಬೆಚ್ಚಿ ಬೀಳಿಸಿತ್ತು.