ಕೌರಿ ಗ್ರಾಮದಲ್ಲಿ ಮಳೆಯ ರುದ್ರ ನರ್ತನ : ಕೊಚ್ಚಿ ಹೋದ ಮೋರಿ, ಬೆಳೆ ನಾಶ


Team Udayavani, Jul 28, 2021, 7:49 PM IST

ಕೌರಿ ಗ್ರಾಮದಲ್ಲಿ ಮಳೆಯ ರುದ್ರ ನರ್ತನ : ಕೊಚ್ಚಿ ಹೋದ ಮೋರಿ, ಬೆಳೆ ನಾಶ

ತೀರ್ಥಹಳ್ಳಿ: ಕವಲೇದುರ್ಗ ಕೋಟೆಯ ಪಶ್ಚಿಮ ಭಾಗದ ಕೆಳಭಾಗದಲ್ಲಿರುವ ಕುಗ್ರಾಮ ಕೌರಿಯಲ್ಲಿ ಕವಲೇದುರ್ಗ ಗುಡ್ಡದ ತಪ್ಪಲಿನಲ್ಲಿ ಸುರಿದ ಬಾರಿ ಮಳೆಯಿಂದಾಗಿ ಕೌರಿ ಹಳ್ಳದಲ್ಲಿ ಭಾರಿ ಪ್ರಮಾಣದಲ್ಲಿ ಹರಿದ ನೀರು ಹಳ್ಳದ ಕಟ್ಟೆಯೊಡೆದು ಭತ್ತದ ಸಸಿ ಹಾಕಿದ್ದ ಗದ್ದೆಗಳ ಮೇಲೆ ತನ್ನ ಪಥವನ್ನೆ ಬದಲಿಸಿ ಹರಿದ ಪರಿಣಾಮ ಸುಮಾರು 30-40 ಎಕರೆ ವಿಸ್ತೀರ್ಣದ ಗದ್ದೆಗಳೆಲ್ಲ ಕಲ್ಲು, ಮರಳು , ಮಣ್ಣುಗಳಿಂದ ಆವರಿಸಿಕೊಂಡಿದ್ದು, ಭಾರಿ ನಷ್ಟವಾಗಿದೆ. ಮಾತ್ರವಲ್ಲದೆ ಆ ಭಾಗದ ಗ್ರಾಮಸ್ಥರು ಈ ಸಲ ಭತ್ತದ ನಾಟಿ ಮಾಡುವುದೂ ದುಸ್ತರವಾಗಿದೆ.

ಯಡೂರು ಗ್ರಾಮ ಪಂಚಾಯತಿಯ ಕೌರಿ ಗ್ರಾಮದ ಸರ್ವೆ ನಂ.13 ರಲ್ಲಿ ಬರುವ ಈ ಜಾಗದಲ್ಲಿರುವ ಹಳ್ಳದಲ್ಲಿ ಹಿಂದೆಂದೂ ಹರಿಯದಿರುವಷ್ಟು ನೀರು ಈ ಬಾರಿ ಉಕ್ಕಿ ಹರಿದಿದ್ದರಿಂದ ಮುಖ್ಯ ರಸ್ತೆಯಿಂದ ಕೌರಿ ಗ್ರಾಮವನ್ನು ಸಂಪರ್ಕಿಸುವ ರಸ್ತೆಯಲ್ಲಿರುವ ಮೋರಿಯೂ ಒಡೆದು ಮೋರಿಯಡಿಯ ದೊಡ್ಡ ಗಾತ್ರದ ಪೈಪುಗಳೆಲ್ಲ ಚಲ್ಲಪಿಲ್ಲಿಯಾಗಿ ನೆರೆ ನೀರಲ್ಲಿ ಕೊಚ್ಚಿ ಹೋಗಿದ್ದು, ಮಾಗಲು, ಶೆಟ್ಟಿಕೊಪ್ಪ, ಬಿಚ್ಚಾಡಿ ಗ್ರಾಮಗಳೆಲ್ಲ ಈಗ ದ್ವೀಪಗಳಾಗಿವೆ.

ಈ ಗ್ರಾಮಗಳನ್ನು ಸೇರುವ ರಸ್ತೆಯಲ್ಲಿ ಬರುವ ಮತ್ತೊಂದು ಮೋರಿಯೂ ಹೀಗೇ ಹಳ್ಳದ ನೆರೆಯಿಂದಾಗಿ ಕೊಚ್ಚಿ ಹೋಗಿದ್ದು, ಗ್ರಾಮಸ್ಥರು ತೊಡೆಯವರೆ ಅಪಾಯಕಾರಿ ಹರಿಯುತ್ತಿರುವ ಹಳ್ಳದ ನೀರನ್ನೇ ದಾಟಿಕೊಂಡು ಮುಖ್ಯ ರಸ್ತೆಗೆ ಬರಬೇಕಾಗಿದೆ. ಮಕ್ಕಳು,‌ ವಯಸ್ಸದಾವರಂತೂ ಇಲ್ಲಿ ತಿರುಗಾಡುವಂತೆಯೇ ಇಲ್ಲ. ಇನ್ನು ಯಾರಿಗಾದರೂ ಅನಾರೋಗ್ಯವಾದರಂತೂ ಆ ದೇವರೆ ಗತಿ ಬಿಡಿ !!

ಯಡೂರು ಗ್ರಾಮ ಪಂಚಾಯತಿಯ ವ್ಯಾಪ್ತಿಗೆ ಬರುವ ಕೌರಿ ಗ್ರಾಮದಿಂದ ಹೊಸನಗರಕ್ಕೆ 48 ಕಿ.ಮಿ. ದೂರವಾಗುತ್ತದೆ. ತೀರ್ಥಹಳ್ಳಿಗೆ ಕೇವಲ 20 ಕಿ.ಮಿ. ತೀರ್ಥಹಳ್ಳಿ ತಾಲೂಕಿನ ಗಡಿ ಭಾಗದಲ್ಲಿಯೆ ಈ ಗ್ರಾಮವಿದ್ದರೂ, ಇಲ್ಲಿನ ಗ್ರಾಮಸ್ಥರು ತಮ್ಮ ಜಮೀನಿಗೆ ಸಂಬಂಧಿಸಿದ ಮತ್ತು ನ್ಯಾಯಾಲಯ ಹಾಗೂ ಇತರ ಸರ್ಕಾರಿ ಕೆಲಸಗಳಿಗೆ ದೂರದ ಹೊಸನಗರಕ್ಕೆ ಹೋಗಬೇಕಾದ ಪರಿಸ್ಥಿತಿಯಿದೆ.

ಈಗಂತೂ ರಸ್ತೆಯ ಮೋರಿಯೂ ಕೊಚ್ಚಿ ಹೋಗಿ ತಮ್ಮ ಗದ್ದೆಗಳ ಮೇಲೆಲ್ಲ ಮೂರ್ನಾಲ್ಕು ಅಡಿ ಮರಳು , ಕಲ್ಲು ಬಂದು ನಿಂತಿದೆ ಗ್ರಾಮಸ್ಥರಿಗೆ ದಾರಿಯೇ ಕಾಣದಂತಾಗಿದ್ದು, ಸಂಕಷ್ಟಕ್ಕೆ ಸಿಲುಕಿ ನಲುಗಿ ಹೋಗಿದ್ದಾರೆ.

ಕೌರಿ ಗ್ರಾಮದ ನಾಗರತ್ನ ಹಾಗೂ ಸುರೇಂದ್ರ ಶೆಟ್ಟಿಯವರ ಮನೆಯ ಪಕ್ಕದಲ್ಲಿಯೇ ಇರುವ ಹಳ್ಳದ ನೀರು ಧಾರಾಕಾರ ಮಳೆಯಿಂದಾಗಿ ಯದ್ವಾತದ್ವಾ ಹರಿದ ಪರಿಣಾಮವಾಗಿ ಮನೆಯ ಪಕ್ಕದಲ್ಲಿ ಮಣ್ಣು ಕುಸಿಯುತ್ತಿದ್ದು, ಮನೆಗೂ ಅಪಾಯವಾಗುವ ಆತಂಕವಿದೆ. ಮನೆಯಿಂದ ಗದ್ದೆಗೆ ಹೋಗಲು ಮಾಡಿಕೊಂಡಿದ್ದ ಕಾಲು ಸಂಕದ ಬುಡದಲ್ಲಿದ್ದ ರಕ್ಷಣಾ ಕಂಬವೂ ಕೊಚ್ಚಿ ಹೋಗಿದೆ.

ಹಳ್ಳದಲ್ಲಿ ಈ ರೀತಿಯಲ್ಲಿ ಯಾವತ್ತೂ ನೀರು ಬಂದಿರಲಿಲ್ಲ. ಹಳ್ಳದ ಬದಿಯಲ್ಲಿ ಲಕ್ಷಾಂತರ ರೂ.ಗಳನ್ನು ಖರ್ಚು ಮಾಡಿ ಕಟ್ಟಿದ್ದ ಕಲ್ಲಿನ ಪಿಚಿಂಗ್ ಮತ್ತು ತಡೆಗೋಡೆಗಳೆಲ್ಲ ನೀರಿನ ರಭಸಕ್ಕೆ ಕೊಚ್ಚಿ ಹೋಗಿವೆ ಎಂದು ಸಂಕಷ್ಟಕ್ಕೊಳಗಾಗಿರುವ ಕೌರಿ ಗ್ರಾಮದ ಸುರೇಂದ್ರ ಶೆಟ್ಟಿಯವರು ತೀವ್ರ ಬೇಸರದಿಂದ ಹೇಳುತ್ತಾರೆ.

ಕೌರಿ ಗ್ರಾಮದಲ್ಲಿ ಭಾರಿ ಅನಾಹುತವಾಗಿದ್ದು, ಲಕ್ಷಾಂತರ ರೂ.ಗಳ ನಷ್ಟವಾಗಿದೆ. ಯಡೂರು ಪಂಚಾಯತಿ ಮತ್ತು ತಾಲೂಕು ಆಡಳಿತ ತುರ್ತಾಗಿ ಇವರ ನೆರವಿಗೆ ಬಂದು ಆತಂಕದಲ್ಲಿರುವ ಗ್ರಾಮಸ್ಥರಿಗೆ ಸಹಾಯ ಹಸ್ತ ಚಾಚಬೇಕಾಗಿದೆ. ಗ್ರಾಮವನ್ನು ಸಂಪರ್ಕಿಸುವ ಮೋರಿಯನ್ನು ಆದಷ್ಟು ಶೀಘ್ರವಾಗಿ ದುರಸ್ತಿ ಮಾಡಿ ಸಂಚಾರಕ್ಕೆ ಅನುವು ಮಾಡಿ ಕೊಡಬೇಕಾಗಿದೆ. ಮರಳು, ಕಲ್ಲು ಜಮೆಯಾಗಿರುವ ಗದ್ದೆಗಳಲ್ಲಿ ನಾಟಿ ಮಾಡುವ ವ್ಯವಸ್ಥೆಯನ್ನು ಮಾಡಿ ಗ್ರಾಮಸ್ಥರ ಸಂಕಷ್ಟವನ್ನು ದೂರ ಮಾಡಬೇಕು.ಎನ್ನುವ ಮಾತು ಸಾರ್ವಜನಿಕವಾಗಿ ಕೇಳಿ ಬರುತ್ತಿದೆ.

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.