ಉತ್ತರದಲ್ಲಿ ಭಾರೀ ಮಳೆ, ಹಾನಿ : ಅಪಾಯ ಮಟ್ಟ ಮೀರಿದ ಗಂಗಾ, ಭಾಗೀರಥಿ
Team Udayavani, Jun 20, 2021, 7:30 AM IST
ಡೆಹ್ರಾಡೂನ್: ಉತ್ತರಾಖಂಡ್ನ ಚಮೋಲಿ ಕಣಿವೆ ಹಾಗೂ ಇನ್ನಿತರ ಕಡೆಗಳಲ್ಲಿ ಮೂರು ದಿನಗಳಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಆ ರಾಜ್ಯದ ಪ್ರಮುಖ ನದಿಗಳಾದ ಗಂಗಾ ಹಾಗೂ ಭಾಗೀರಥಿ ನದಿಗಳು ಶನಿವಾರ ಅಪಾಯ ಮಟ್ಟ ಮೀರಿ ಹರಿಯುತ್ತಿವೆ. ಹಾಗಾಗಿ, ನದಿ ಪಾತ್ರದಲ್ಲಿ ಬರುವ ಎಲ್ಲ ಗ್ರಾಮ, ಊರು ಹಾಗೂ ಇನ್ನಿತರ ಜನವಸತಿ ಪ್ರದೇಶಗಳಿಂದ ಜನರನ್ನು ತೆರವು ಗೊಳಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಗಂಗಾ ನದಿಯು ಹರಿದ್ವಾರ ಹಾಗೂ ರಿಷಿಕೇಶ್ನಲ್ಲಿ, ಭಾಗೀರಥಿ ನದಿ ತೇಹ್ರಿ ಜಿಲ್ಲೆಯ ದೇವಪ್ರಯಾಗ್ನಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.
ಉತ್ತರ ಪ್ರದೇಶದ ವಿವಿಧ ಪ್ರದೇಶಗಳಲ್ಲಿ ಶನಿವಾರ, ಗುಡುಗು ಸಹಿತ ಭಾರೀ ಮಳೆಯಾಗಿದೆ. ಕಾನ್ಪುರ, ಮೊರಾದಾಬಾದ್, ಫೂಲ್ಪುರ್, ಮವು ತಾಲೂಕು, ತೀರ್ವಾ, ಕರ್ಚಾನಾ, ಧೌರಾಹರ, ರಾಜಘಾಟ್, ಕಾಂತ್ ಪ್ರಾಂತ್ಯಗಳಲ್ಲಿ ಭಾರೀ ಮಳೆ ಬಿದ್ದಿದೆ. ಮುಂಗಾರು ಮಾರುತಗಳು ಆ ರಾಜ್ಯದ ಪಶ್ಚಿಮದ ಕಡೆಗೂ ಸಾಗಿದ್ದು, ಆ ಭಾಗದಲ್ಲೂ ಹಲವಾರು ಕಡೆ ಮಳೆಯಾಗಿದೆ. ಜೂ. 20ರಂದು ಧಾರಾಕಾರವಾಗಿ ಬೀಳಬಹುದೆಂದು ಹವಾಮಾನ ಇಲಾಖೆ ತಿಳಿಸಿದೆ.
ಗುಜರಾತ್ನಲ್ಲಿ: ನೈಋತ್ಯ ಮುಂಗಾರು ಮಾರುತಗಳ ಪ್ರಭಾವದಿಂದಾಗಿ ಗುಜರಾತ್ನ ಹಲವಾರು ಪ್ರಾಂತ್ಯಗಳಲ್ಲಿ ಶನಿವಾರದಂದು ತೀವ್ರ ಮಳೆಯಾಗಿದೆ. ಶುಕ್ರವಾರವೂ ಅಲ್ಲಿ ಭಾರೀ ಮಳೆ ಸುರಿದಿತ್ತು. ಗುಜರಾತ್ನ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಮುಂಗಾರು ಮಾರುತಗಳು ಕಾಲಿಟ್ಟಿದ್ದು, ಎಲ್ಲ ಜಿಲ್ಲೆಗಳಲ್ಲೂ ಮಳೆಯಾಗುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
MUST WATCH
ಹೊಸ ಸೇರ್ಪಡೆ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ