ತತ್ತರಿಸಿದ ಉತ್ತರ ಭೀಮಾ, ಕೃಷ್ಣಾರ್ಭಟ
5 ಜಿಲ್ಲೆಗಳಲ್ಲಿ ಪ್ರವಾಹ: ಜನರ ಸ್ಥಳಾಂತರ
Team Udayavani, Aug 5, 2019, 6:03 AM IST
ಚಿಕ್ಕೋಡಿ ಬಳಿಯ ಸದಲಗಾ-ಬೋರ್ಗಾಂವ್ ಸೇತುವೆ ಬಳಿ ದೂಧ್ಗಂಗಾ ನದಿ ಭಾನುವಾರ ಉಕ್ಕಿ ಹರಿಯುತ್ತಿರುವುದು.
ಹುಬ್ಬಳ್ಳಿ: ಮಹಾರಾಷ್ಟ್ರ ಹಾಗೂ ಬೆಳಗಾವಿ ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಬರಗಾಲದಲ್ಲೂ ಉತ್ತರ ಕರ್ನಾಟಕ ಅಕ್ಷರಶಃ ತತ್ತರಿಸಿ ಹೋಗಿದೆ. ಕೃಷ್ಣಾ, ಭೀಮಾ, ವೇದಗಂಗಾ, ದೂಧ್ಗಂಗಾ, ಮಲಪ್ರಭಾ, ಘಟಪ್ರಭಾ, ಹಿರಣ್ಯಕೇಶಿ, ಮಾರ್ಕಂಡೇಯ, ಕಾಳಿ, ಅಘನಾಶಿನಿ ಸೇರಿದಂತೆ ಪ್ರಮುಖ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಐದು ಜಿಲ್ಲೆಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ಹಲವೆಡೆ ಗಂಜಿ ಕೇಂದ್ರ ತೆರೆಯಲಾಗಿದ್ದು, 38 ಸೇತುವೆಗಳು ಮುಳುಗಡೆಯಾಗಿ ಕೆಲವೆಡೆ ಸಂಪರ್ಕ ಕಡಿತಗೊಂಡಿದೆ. 900ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ.
ಮಹಾರಾಷ್ಟ್ರದ ಕೊಯ್ನಾ ಜಲಾಶಯ ವ್ಯಾಪ್ತಿ, ಅಂಬೋಲಿ, ಅಜರಾ ಪ್ರದೇಶ, ಮಲಪ್ರಭಾ ನದಿಯ ಉಗಮ ಸ್ಥಾನ ಖಾನಾಪುರದ ಕಣಕುಂಬಿ ಅರಣ್ಯದಲ್ಲಿ ಧಾರಾಕಾರ ಮಳೆಯಿಂದ ನೀರು ಹರಿದು ಬರುತ್ತಿದೆ. ಕೃಷ್ಣಾ ನದಿಗೆ 2.31 ಲಕ್ಷ ಕ್ಯುಸೆಕ್ ನೀರು ಹರಿದು ಬರಲಾರಂಭಿಸಿದೆ. ಕೊಯ್ನಾ ಜಲಾಶಯದಲ್ಲಿ 94 ಟಿಎಂಸಿ ನೀರು ಸಂಗ್ರಹವಾಗಿದ್ದು, ಭರ್ತಿಗೆ ಇನ್ನು 10 ಟಿಎಂಸಿ ಅಗತ್ಯವಿದೆ.
ಸ್ಥಳಾಂತರ: ಪ್ರವಾಹಕ್ಕೆ ತುತ್ತಾಗಿರುವ ಚಿಕ್ಕೋಡಿ ತಾಲೂಕು ಸೇರಿದಂತೆ ಹಲವು ಪ್ರದೇಶಗಳಿಂದ ಇದುವರೆಗೆ 900ಕ್ಕೂ ಹೆಚ್ಚು ಮಂದಿಯನ್ನು ಸ್ಥಳಾಂತರಿಸಿದ್ದಾರೆ. ಕೃಷ್ಣಾ ನದಿ ಉಕ್ಕಿ ಹರಿಯುತ್ತಿರುವುದರಿಂದ ಆಲಮಟ್ಟಿ ಜಲಾಶಯದಿಂದ 2,49,823 ಕ್ಯೂಸೆಕ್ ನೀರನ್ನು 26 ಕ್ರಸ್ಟ್ಗೇಟ್ಗಳ ಮೂಲಕ ಹೊರ ಬಿಡಲಾಗುತ್ತಿದೆ.
ಭೀಮಾ ಭರ್ತಿ: ಬರದಿಂದ ಬತ್ತಿ ಬರಿದಾಗಿದ್ದ ಭೀಮೆ ಒಡಲು ಕೂಡ ಇದೀಗ ತುಂಬಿಕೊಂಡಿದೆ. ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಭೀಮಾ ನದಿಗೆ 60 ಸಾವಿರ ಕ್ಯುಸೆಕ್ ನೀರು ಬರುತ್ತಿದ್ದು, ಕರ್ನಾಟಕ-ಮಹಾರಾಷ್ಟ್ರಕ್ಕೆ ಸೇರಿದ 8 ಬ್ಯಾರೇಜ್ಗಳು ಭರ್ತಿಯಾಗಿ ಪ್ರವಾಹ ಭೀತಿ ಎದುರಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?