
ಮಳೆ ಅನಾಹುತ : ಪಶ್ಚಿಮ ಬಂಗಾಳ, ರಾಜಸ್ಥಾನದಲ್ಲಿ 17 ಮಂದಿ ಸಾವು
Team Udayavani, Aug 3, 2021, 10:30 PM IST

ನವ ದೆಹಲಿ: ಉತ್ತರದಲ್ಲಿ ವರುಣ ಅಬ್ಬರಿಸುತ್ತಿದ್ದು, ಪ.ಬಂಗಾಳ ಹಾಗೂ ರಾಜಸ್ಥಾನಗಳಲ್ಲಿ 17 ಮಂದಿ ಮಳೆ ಸಂಬಂಧಿ ಘಟನೆಗಳಿಂದ ಸಾವಿಗೀಡಾಗಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಮಂಗಳವಾರ ಗೋಡೆ ಕುಸಿತ ಮತ್ತು ವಿದ್ಯುತ್ ಆಘಾತ ಪ್ರಕರಣಗಳಿಂದ 14 ಮಂದಿ ಅಸುನೀಗಿದ್ದಾರೆ. ಮಳೆ ತೀವ್ರಗೊಂಡ ಹಿನ್ನೆಲೆಯಲ್ಲಿ ದಾಮೋದರ್ ವ್ಯಾಲಿ ಕಾರ್ಪೊರೇಷನ್ ಅಣೆಕಟ್ಟಿನಿಂದ ನೀರು ಹೊರಬಿಡಲಾಗಿದ್ದು, ಪರಿಣಾಮ 6 ಜಿಲ್ಲೆಗಳ ಎರಡೂವರೆ ಲಕ್ಷ ಮಂದಿ ನಿರ್ವಸಿತರಾಗಿದ್ದಾರೆ. ಇವರಿಗೆ ರಾಜ್ಯ ಸರ್ಕಾರವು ಆಶ್ರಯ ಒದಗಿಸಿದ್ದು, ಪರಿಹಾರ ಕಾರ್ಯಾಚರಣೆಯೂ ಚುರುಕುಗೊಂಡಿದೆ. ಹಲವು ಜಿಲ್ಲೆಗಳು ಜಲಾವೃತಗೊಂಡು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
3 ಮಕ್ಕಳು ಸಾವು:
ರಾಜಸ್ಥಾನದ ಸವಾಯಿ ಮಾಧೋಪುರ್ ಮತ್ತು ಟೋಂಕ್ ನಲ್ಲಿ ಧಾರಾಕಾರ ಮಳೆಯಿಂದಾಗಿ ಕಾರೊಂದು ಕೊಚ್ಚಿಹೋದ ಪರಿಣಾಮ, ಅದರಲ್ಲಿದ್ದ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಮೂವರನ್ನು ರಕ್ಷಿಸಲಾಗಿದೆ. ಟೋಂಕ್ ನಲ್ಲಿ ಮಹಿಳೆಯೊಬ್ಬರ ಮೃತದೇಹವನ್ನು ಒಯ್ಯುತ್ತಿದ್ದ ಆ್ಯಂಬುಲೆನ್ಸ್ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಅದರಲ್ಲಿದ್ದ ಮಹಿಳೆಯ 12 ವರ್ಷದ ಮಗ ಸಾವಿಗೀಡಾಗಿದ್ದಾನೆ. ಮಹಿಳೆಯ ಪತಿಯೂ ನಾಪತ್ತೆಯಾಗಿದ್ದಾರೆ.
ಇದನ್ನೂ ಓದಿ :ಜೀವನ ಪರ್ಯಂತ ಪಶ್ಚಾತ್ತಾಪ ಪಡುವೆ: ಅಪಘಾತದಲ್ಲಿ ಸ್ನೇಹಿತೆ ಸಾವಿಗೆ ನಟಿ ಯಶಿಕಾ ಕಣ್ಣೀರು
ಮಧ್ಯಪ್ರದೇಶದಲ್ಲಿ ಮಳೆ-ಪ್ರವಾಹದಿಂದಾಗಿ 1,171 ಗ್ರಾಮಗಳು ಸಂಕಷ್ಟಕ್ಕೀಡಾಗಿವೆ. ಪ್ರವಾಹದಿಂದ ರಕ್ಷಿಸಿಕೊಳ್ಳಲು 24 ಗಂಟೆಗಳ ಕಾಲ ಮರದ ಮೇಲೆ ಕುಳಿತಿದ್ದ ಮೂವರನ್ನು ಮತ್ತು ಇತರೆ ಐವರನ್ನು ಮಂಗಳವಾರ ಸೇನೆ ರಕ್ಷಿಸಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fake Notes: ಜಾತ್ರೆಯಲ್ಲಿ ಐಸ್ಕ್ರೀಮ್ ಸವಿಯಲು ನಕಲಿ ನೋಟ್ಗಳನ್ನು ಬಳಸಿದ ಅಪ್ರಾಪ್ತರು

Manipur: ಬಂಡುಕೋರರ ಗುಂಡಿನ ದಾಳಿ: ಓರ್ವ ಬಿಎಸ್ಎಫ್ ಯೋಧ ಹುತಾತ್ಮ, ಇಬ್ಬರು ಯೋಧರಿಗೆ ಗಾಯ

Balasore Train Tragedy ಸಂತ್ರಸ್ತರಿಗೆ ರಿಲಯನ್ಸ್ ಫೌಂಡೇಷನ್ ಹತ್ತು ಅಂಶಗಳ ನೆರವು

VIDEO: ಅಂತರ್ಜಾತಿ ವಿವಾಹವಾದ ಸಹೋದರಿಯನ್ನು ಗಂಡನ ಮನೆಯಿಂದ ಬಲವಂತವಾಗಿ ಎಳೆದೊಯ್ದ ಸಹೋದರರು

Gujarat: ಕ್ರಿಕೆಟ್ ಬಾಲ್ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು
ಹೊಸ ಸೇರ್ಪಡೆ

ಸೂಲಿಬೆಲೆ ದೇಶಭಕ್ತಿಗೆ ಕಾಂಗ್ರೆಸ್ ಸರ್ಟಿಫಿಕೇಟ್ ಬೇಕಾಗಿಲ್ಲ: ಸಿ.ಟಿ ರವಿ

SPL23ಕರಾವಳಿ ಕೋಯಲ್ ಚಾಂಪಿಯನ್ಸ್: ಟೀಂ ಪ್ರತಿಮಾ ವಿನ್ನರ್, ಪಂಚಮ್ ಹಳೆಬಂಡಿ ಟೀಂ ರನ್ನರ್ ಅಪ್

ಚಿಕ್ಕಮಗಳೂರು: ಕಾಫಿತೋಟದ ಕಾರ್ಮಿಕ ಮಹಿಳೆ ಮೇಲೆ ಹುಲಿ ದಾಳಿ

Fake Notes: ಜಾತ್ರೆಯಲ್ಲಿ ಐಸ್ಕ್ರೀಮ್ ಸವಿಯಲು ನಕಲಿ ನೋಟ್ಗಳನ್ನು ಬಳಸಿದ ಅಪ್ರಾಪ್ತರು

HUNSUR: ಕೆಲ ದಿನಗಳಿಂದ ಕಣ್ಮರೆಯಾಗಿದ್ದ ಕಪ್ಪು ಚಿರತೆ ಪತ್ತೆ