ಮುಂದಿನ 24ಗಂಟೆಗಳಲ್ಲಿ ಭಾರೀ ಮಳೆ, ಕಾಸರಗೋಡಿನಲ್ಲಿ ರೆಡ್ ಅಲರ್ಟ್; ಹವಾಮಾನ ಇಲಾಖೆ
Team Udayavani, Jul 23, 2019, 1:08 PM IST
ತಿರುವನಂತಪುರಂ/ಬೆಂಗಳೂರು:ಮುಂದಿನ 24 ಗಂಟೆಗಳ ಕಾಲ ಕರ್ನಾಟಕ ಹಾಗೂ ಕೇರಳದ ವಿವಿಧ ಭಾಗಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಮಂಗಳವಾರ ಎಚ್ಚರಿಕೆ ನೀಡಿದೆ.
ಅಲ್ಲದೇ ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಎಚ್ಚರಿಕೆ ನೀಡಿದೆ ಎಂದು ವರದಿ ತಿಳಿಸಿದೆ.
ಕೋಝಿಕೋಡ್, ಮಲಪ್ಪುರಂ ವಯನಾಡ್ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್, ಪಾಲಕ್ಕಾಡ್, ತ್ರಿಶ್ಶೂರ್, ಎರ್ನಾಕುಲಂ ಮತ್ತು ಇಡುಕ್ಕಿ ಜಿಲ್ಲೆಗಳಿಗೂ ಎಚ್ಚರಿಕೆ ನೀಡಲಾಗಿದೆ ಎಂದು ವರದಿ ವಿವರಿಸಿದೆ.
ಕರ್ನಾಟಕ, ಕೇರಳ ಮತ್ತು ದಕ್ಷಿಣ ತಮಿಳುನಾಡು, ಲಕ್ಷದ್ವೀಪ ಕರಾವಳಿ ಪ್ರದೇಶದಲ್ಲಿ 40ರಿಂದ 50 ಕಿಲೋ ಮೀಟರ್ ವೇಗದಲ್ಲಿ ಭಾರೀ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ, ಕೇರಳ ಕರಾವಳಿ ಪ್ರದೇಶದಲ್ಲಿ ಮೀನುಗಾರರು ಮೀನುಗಾರಿಕೆಗೆ ಇಳಿಯದಂತೆ ಎಚ್ಚರಿಕೆ ನೀಡಲು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kasaragod ವಿವಿಪ್ಯಾಟ್ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ