ಹೇಮಾವತಿ ಜಲಾಶಯ ಖಾಲಿ, ಖಾಲಿ


Team Udayavani, May 5, 2019, 3:07 AM IST

hemavathi

ಹಾಸನ: ಕಾವೇರಿ ಕಣಿವೆಯ ಪ್ರಮುಖ ಜಲಾಯಗಳಲ್ಲಿ ಒಂದಾಗಿರುವ ಹೇಮಾವತಿ ಜಲಾಶಯ, ಹಾಸನ, ತುಮಕೂರು, ಮಂಡ್ಯ, ಮೈಸೂರು ಜಿಲ್ಲೆಗಳ ಅಚ್ಚುಕಟ್ಟು ಪ್ರದೇಶ ಮತ್ತು ಕುಡಿಯುವ ನೀರಿಗೆ ಆಧಾರ. ಸತತ ನಾಲ್ಕು ವರ್ಷಗಳ ಬಳಿಕ 2018ರ ಜೂನ್‌ ಅಂತ್ಯದಲ್ಲಿ ಭರ್ತಿಯಾಗಿತ್ತು.

ಈಗ ಬಹುತೇಕ ಬರಿದಾಗಿದೆ. ಹಾಗಾಗಿ, ಅಚ್ಚುಕಟ್ಟು ಪ್ರದೇಶದ ಬೇಸಿಗೆ ಬೆಳೆಗೆ ನೀರು ಹರಿಸುತ್ತಿಲ್ಲ. ಆದರೆ, ಹಾಸನ ನಗರಕ್ಕೆ ಕುಡಿಯುವ ನೀರು, ಪ್ರಾಣಿ, ಪಕ್ಷಿ ಹಾಗೂ ಜಲಚರಗಳಿಗೆ ಕುಡಿಯಲು ನದಿಯಲ್ಲಿ ಹರಿಸಬಹುದಾದಷ್ಟು ನೀರು ಈಗಲೂ ಜಲಾಶಯದಲ್ಲಿದೆ.

ಹಾಸನ ತಾಲೂಕು ಗೊರೂರಿನ ಬಳಿಯಿರುವ ಹೇಮಾವತಿ ಜಲಾಶಯದಲ್ಲಿ ಈಗ 5.09 ಟಿಎಂಸಿ ನೀರಿನ ಸಂಗ್ರಹವಿದೆ. ಅದರಲ್ಲಿ, ನಾಲೆಗೆ ಹರಿಸಬಹುದಾದ ನೀರು 0.72 ಟಿಎಂಸಿ ಮಾತ್ರ. ಜಲಾಶಯದಲ್ಲಿರುವ 5.09 ನೀರಿನಲ್ಲಿ 3.70 ಟಿಎಂಸಿವರೆಗೂ ಬಳಸಿಕೊಳ್ಳಬಹುದು.

ಹಾಗಾಗಿ, ಹಾಸನ ನಗರ ಸೇರಿ ನದಿ ಪಾತ್ರದಲ್ಲಿ ಕುಡಿಯುವ ನೀರಿಗೆ ಆತಂಕ ಪಡುವ ಅಗತ್ಯವಿಲ್ಲ. ಹೇಮಾವತಿ ಜಲಾಶಯದ ಗರಿಷ್ಠ ಸಂಗ್ರಹಣಾ ಸಾಮರ್ಥಯ 37.10 ಟಿಎಂಸಿ ಮಾತ್ರ. ಈ ವರ್ಷ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗಿದ್ದರಿಂದ ಜಲಾಶಯಕ್ಕೆ 105 ಟಿಎಂಸಿಗೂ ಹೆಚ್ಚು ನೀರು ಹರಿದು ಬಂದಿದೆ.

ಆದರೆ ಅದನ್ನು ಹಿಡಿದಿಟ್ಟುಕೊಳ್ಳಲಾಗದೆ ನದಿಯಲ್ಲಿ ಪ್ರವಾಹವಾಗಿ ಹರಿದು ಹೋಗಿದೆ. ನಾಲೆಗಳ ಮೂಲಕ ಸುಮಾರು 50 ಟಿಎಂಸಿ ನೀರು ಮಾತ್ರ ಬಳಕೆಯಾಗಿದೆ. ಹಾಸನ ನಗರಕ್ಕೆ ಕುಡಿಯಲು 0.15 ಟಿಎಂಸಿ ಸಾಕು. ಹೇಮಾವತಿಯಿಂದ ತುಮಕೂರು ಜಿಲ್ಲೆಗೆ 25.31 ಟಿಎಂಸಿ ನೀರು ಹಂಚಿಕೆಯಾಗಿದ್ದು,

ಹಾಸನ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಿಗೆ 18.36 ಟಿಎಂಸಿ ನೀರು ಹಂಚಿಕೆಯಾಗಿದೆ. ತುಮಕೂರು ಜಿಲ್ಲೆಗೆ ಈ ವರ್ಷ 25.47 ಟಿಎಂಸಿ ನೀರು ಹರಿದಿದೆ. ಒಟ್ಟು 4 ಜಿಲ್ಲೆಗಳಲ್ಲಿ 7.08 ಲಕ್ಷ ಎಕರೆ ಅಚ್ಚುಕಟ್ಟು ಹೊಂದಿರುವ ಹೇಮಾವತಿ ಯೋಜನೆಯಲ್ಲಿ ತುಮಕೂರು ಜಿಲ್ಲೆ ಪಾಲು 3,17,672 ಎಕರೆಗಳು.

ಹಾಸನ ಜಿಲ್ಲೆ 1,55,030 ಎಕರೆ, ಮಂಡ್ಯ ಜಿಲ್ಲೆ 2,30,585 ಎಕರೆ, ಮೈಸೂರು ಜಿಲ್ಲೆಯ ಅಚ್ಚುಕಟ್ಟು ಪ್ರದೇಶ 5665 ಎಕರೆಗಳು. ಹೇಮಾವತಿ ಎಡದಂಡೆ ನಾಲೆ (ಎ.ಜಿ.ರಾಮಚಂದ್ರರಾವ್‌ ನಾಲೆ) ಈ ಯೋಜನೆಯ ಬಹುದೊಡ್ಡ ನಾಲೆಯಾಗಿದ್ದು, ಹಾಸನ, ತುಮಕೂರು, ಮಂಡ್ಯ, ಮೈಸೂರು ಜಿಲ್ಲೆಯಲ್ಲಿ ಅಚ್ಚುಕಟ್ಟು ಪ್ರದೇಶ ಹೊಂದಿದ್ದರೆ,

ಬಲದಂಡೆ ನಾಲೆ (ಗೊರೂರು ರಾಮಸ್ವಾಮಿ ಅಯ್ಯಂಗಾರ್‌ ನಾಲೆ) ಹಾಸನ ಜಿಲ್ಲೆಯ ಅರಕಲಗೂಡು ಮತ್ತು ಹೊಳೆನರಸೀಪುರ ತಾಲೂಕಿನಲ್ಲಿ, ಬಲ ಮೇಲ್ದಂಡೆ ನಾಲೆ (ಬೋರಣ್ಣಗೌಡ ನಾಲೆ) ಅರಕಲಗೂಡು ಮತ್ತು ಹೊಳೆನರಸೀಪುರ ತಾಲೂಕಿನಲ್ಲಿ ಅಚ್ಚಕಟ್ಟು ಪ್ರದೇಶ ಹೊಂದಿದೆ.

ಜಲಾಶಯ ನೀರಿನ ಮಟ್ಟ: (04-05-2019) (ಆವರಣದಲ್ಲಿರುವುದು ಕಳೆದ ವರ್ಷದ ನೀರಿನ ಮಟ್ಟ)
-ಗರಿಷ್ಠ ಮಟ್ಟ – 2922 ಅಡಿಗಳು
-ಇಂದಿನ ಮಟ್ಟ -2865.25 ಅಡಿಗಳು (2863.55 ಅಡಿ)
-ಒಳ ಹರಿವು – 58 ಕ್ಯೂಸೆಕ್‌. ( 22 ಕ್ಯೂಸೆಕ್‌)
-ಹೊರ ಹರಿವು ನದಿಗೆ -200 ಕ್ಯೂಸೆಕ್‌ ( 200 ಕ್ಯೂಸೆಕ್‌)

ಹಾಸನ ನಗರ ಸೇರಿ ಹೇಮಾವತಿ ನದಿ ಪಾತ್ರದ ಯಾವುದೇ ಪಟ್ಟಣಗಳಿಗೂ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗುವುದಿಲ್ಲ. ಕುಡಿಯವ ನೀರಿಗೆ ಸಾಕಷ್ಟು ಸಂಗ್ರಹವಿದೆ. ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆಯಾಗಿದ್ದರಿಂದ 4 ವರ್ಷಗಳ ನಂತರ ಜಲಾಶಯ ಭರ್ತಿಯಾಯಿತು. ಅಚ್ಚುಕಟ್ಟು ಪ್ರದೇಶಕ್ಕೆ ಸಮೃದ್ಧವಾಗಿ ನೀರು ಹರಿಯಿತು. ಆದರೆ, ಹಿಂಗಾರು ಹಂಗಾಮಿನಲ್ಲಿ ಮಳೆಯಾಗದಿದ್ದರಿಂದ ಜಲಾಶಯಕ್ಕೆ ನೀರು ಬರಲಿಲ್ಲ. ಹಾಗಾಗಿ, ಬೇಸಿಗೆ ಬೆಳೆಗೆ ನೀರು ಕೊಡಲಾಗಲಿಲ್ಲ.
-ಶ್ರೀನಾಥ್‌, ಎಇಇ, ಹೇಮಾವತಿ ಅಣೆಕಟ್ಟು ವಿಭಾಗ.

* ಎನ್‌. ನಂಜುಂಡೇಗೌಡ

ಟಾಪ್ ನ್ಯೂಸ್

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.