ಬಜೆಟ್ನಲ್ಲಿ ಕನ್ನಡ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ
Team Udayavani, Feb 11, 2022, 6:25 AM IST
ಬೆಂಗಳೂರು: ಬಜೆಟ್ನಲ್ಲಿ ಈ ಬಾರಿ ಕನ್ನಡ ಅಭಿವೃದ್ಧಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದು, ಮಕ್ಕಳಲ್ಲಿ ಸಾಹಿತ್ಯ ಹಾಗೂ ಸಂಸ್ಕೃತಿಯನ್ನು ಬೆಳೆಸುವ ನಿಟ್ಟಿನಲ್ಲಿ ಜಿಲ್ಲಾಮಟ್ಟದಲ್ಲಿ ಮಕ್ಕಳ ಸಾಹಿತ್ಯ ಹಾಗೂ ಸಾಂಸ್ಕೃತಿಕ ಸಮ್ಮೇಳನ ನಡೆಯಲಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕರ್ನಾಟಕ ಏಕೀಕರಣ ಹೋರಾಟಗಾರ ಡಾ. ಜಯದೇವಿ ತಾಯಿ ಲಿಗಾಡೆ ಹಾಗೂ ನಾಡೋಜ ಡಾ. ಕಯ್ಯಾರ ಕಿಂಇಣ್ಣ ರೈ ಹೆಸರಿನಲ್ಲಿ ನೀಡುವ ಗಡಿನಾಡ ಚೇತನ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿ, ಕನ್ನಡ ಅಭಿವೃದ್ಧಿಗೆ ಅಗತ್ಯತೆಗಳನ್ನು ನಮ್ಮ ಸರ್ಕಾರದಿಂದ ಪೂರ್ಣಗೊಳಿಸಲು ಶೇ.100ರಷ್ಟು ಪ್ರಯತ್ನ ಮಾಡಲಾಗುತ್ತದೆ ಎಂದು ಹೇಳಿದರು.
ಇದನ್ನೂ ಓದಿ:ರಾಜ್ಯದಲ್ಲಿಂದು 5,019 ಮಂದಿಗೆ ಕೋವಿಡ್ ಸೋಂಕು ದೃಢ; 39 ಸಾವು
ಇದೇ ಸಂದರ್ಭದಲ್ಲಿ ಗಡಿನಾಡ ಚೇತನ ಪ್ರಶಸ್ತಿಯನ್ನು ಡಾ.ಜಯದೇವಿ ತಾಯಿ ಲಿಗಾಡೆ ಹೆಸರಿನ ಪ್ರಶಸ್ತಿಯನ್ನು ಧಾರವಾಡದ ಐತಿಹಾಸಿಕ ಸಂಸ್ಥೆ ಕರ್ನಾಟಕ ವಿದ್ಯಾವರ್ಧಕ ಸಂಘಕ್ಕೆ ಮತ್ತು ನಾಡೋಜ ಡಾ.ಕಯ್ಯಾರ ಕಿಂಞ್ಞಣ್ಣ ರೈ ಹೆಸರಿನ ಪ್ರಶಸ್ತಿಯನ್ನು ಗಡಿನಾಡ ಸಂತ ಬಿ.ಪುರುಷೋತ್ತಮ ಮಾಸ್ತರ್ ಅವರಿಗೆ ಪ್ರದಾನ ಮಾಡಲಾಯಿತು.
ಕರ್ನಾಟಕ ವಿದ್ಯಾವರ್ಧಕ ಸಂಘದ ಪರವಾಗಿ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಪ್ರಶಸ್ತಿ ಸ್ವೀಕರಿಸಿದರು. ಪ್ರಾಧಿಕಾರದ ಅಧ್ಯಕ್ಷ ಡಾ. ಸಿ ಸೋಮಶೇಖರ್, ಕನ್ನಡ ಮತ್ತು ಸಂಸðತಿ ಇಲಾಖೆ ಕಾರ್ಯದರ್ಶಿ ಡಾ. ಎನ್.ಮಂಜುಳಾ, ನಾಡೋಜ ಪ್ರೊ. ಹಂಪ ನಾಗರಾಜಯ್ಯ, ಪತ್ರಕರ್ತ ರವೀಂದ್ರ ಭಟ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ