ವಾಹನ ಸವಾರರೇ ಎಚ್ಚರ : ಸುರಕ್ಷತೆ ಕ್ರಮಗಳಿಲ್ಲದ ಹೆದ್ದಾರಿ; ಅಪಘಾತಗಳಿಗೆ ರಹದಾರಿ


Team Udayavani, Mar 18, 2021, 5:00 AM IST

ವಾಹನ ಸವಾರರೇ ಎಚ್ಚರ : ಸುರಕ್ಷತೆ ಕ್ರಮಗಳಿಲ್ಲದ ಹೆದ್ದಾರಿ; ಅಪಘಾತಗಳಿಗೆ ರಹದಾರಿ

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ವಾಹನಗಳು ಸಂಚರಿಸಲು ದುಸ್ತರವಾದ ಹಿನ್ನೆಲೆಯಲ್ಲಿ ರಸ್ತೆ ದುರಸ್ತಿಗೆ ಸ್ಥಳೀಯರೆಲ್ಲಾ ಆಗ್ರಹಿಸಿದ್ದರು. ಅದಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಪತ್ರಿಕಾ ವರದಿ ಹಾಗೂ ಸ್ಥಳೀಯರ ಆಗ್ರಹವನ್ನು ಪುರಸ್ಕರಿಸಿ ಒಂದಿಷ್ಟು ತೇಪೆ ಹಾಕಿದರು. ಆದರೆ ಅದಾಗಿ ಆರೇಳು ತಿಂಗಳು ಕಳೆದರೂ ಸುರಕ್ಷಾ ಕ್ರಮಗಳನ್ನು ಕೈಗೊಂಡಿಲ್ಲ. ಹಾಗಾಗಿ ರಸ್ತೆಯೀಗ ಅಪಘಾತಗಳಿಗೆ ಕಾರಣವಾಗತೊಡಗಿದೆ.

ಈಗಾಗಲೇ ಹಲವರು ಇಲ್ಲಿಯ ಅಪಘಾತಗಳಲ್ಲಿ ಮರಣವನ್ನು ಹೊಂದಿದ್ದಾರೆ. ಹೆದ್ದಾರಿಯಲ್ಲಿ ವಾಹನ ಗಳೂ ಅತೀ ವೇಗದಿಂದ ಸಂಚರಿಸುತ್ತಿರುತ್ತವೆ. ಬೆಂಗಳೂರು-ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ಪ್ರಮುಖ ಹೆದ್ದಾರಿ ಇದು. ಇಲ್ಲಿ ಸುರಕ್ಷತೆ ವ್ಯವಸ್ಥೆ ಇಲ್ಲದ ಕಾರಣ, ಚೂರು ಹೆಚ್ಚು ಕಡಿಮೆಯಾದರೂ ವಾಹನಗಳು ಗುಂಡಿಗೆ ಬೀಳಬೇಕು ಇಲ್ಲವೇ ಬೇರೆ ವಾಹನಗಳಿಗೆ ಢಿಕ್ಕಿಹೊಡೆಯಬೇಕಾದ ಸ್ಥಿತಿ ಇದೆ. ಇದರೊಂದಿಗೆ ಇಲ್ಲಿನ ಜಂಕ್ಷನ್‌ಗಳು, ವೃತ್ತ ಭಾಗದಲ್ಲಿ ಸುರಕ್ಷಾ ಕ್ರಮಗಳನ್ನು ಕೈಗೊಳ್ಳಬೇಕಿತ್ತು. ಅದಾವುದೂ ಆಗದಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಜತೆಗೆ ಅಪಘಾತಗಳ ಸಂಖ್ಯೆ ಹೆಚ್ಚಳವಾಗಲು ಕಾರಣವಾಗಿದೆ.

ಹೆದ್ದಾರಿ ಕಾಮಗಾರಿಗೆ ಅಗೆದು ಹಾಕಿರುವ ಪರಿಣಾಮ ಹೆದ್ದಾರಿ ಬದಿಗಳಲ್ಲಿ ಎಲ್ಲೂ ಕೂಡ ತಡೆಗೋಡೆಯಾಗಲೀ ಮಾಹಿತಿ ಫ‌ಲಕಗಳಾಗಲೀ ಇಲ್ಲ. ಇದರಿಂದ ವಾಹನ ಚಾಲಕರು ನಿತ್ಯವೂ ಗೊಂದಲಕ್ಕೀಡಾಗುವಂತಿದೆ. ಹೆದ್ದಾರಿಯ ಬದಿ ಪಾದಚಾರಿಗಳಿಗೆ ನಡೆದಾಡುವ ಸ್ಥಳವನ್ನೂ ಪೊದೆ ಆವರಿಸಿಕೊಂಡಿದೆ. ಈ ಅವೈಜ್ಞಾನಿಕ ಕಾಮಗಾರಿಯ ಪರಿಣಾಮದಿಂದಾಗಿ ಜನರಿಗೆ ಸಮಸ್ಯೆಯಾಗಿದೆ.

ಹಿಂದೆ ಹೊಂಡಗಳಿದ್ದಾಗ ವಾಹನಗಳು ಕೊಂಚ ನಿಧಾನವಾಗಿ ಸಾಗುತ್ತಿದ್ದವು. ತೇಪೆ ಹಾಕಿದ ಮೇಲೆ ಜನರು ರಸ್ತೆ ಸರಿ ಇದೆ ಎಂದು ಒಂದೇ ಸಮನೆ ವೇಗದಲ್ಲಿ ವಾಹವನ್ನು ಚಲಾಯಿಸುತ್ತಾರೆ. ಅಪಘಾತಕ್ಕೆ ಕಾರಣವಾಗುತ್ತಿದ್ದಾರೆ ಎಂಬುದು ಸ್ಥಳೀಯರ ಅಭಿಪ್ರಾಯ.

ಫೆ. 7ರಂದು ಇಬ್ಬರನ್ನು ಬಲಿ ಪಡೆದಿತ್ತು
ಹೆದ್ದಾರಿಯ ಡಾಮರು ಕಾಮಗಾರಿ ನಡೆದ ಬಳಿಕ ಫೆ. 7ರಂದು ಒಂದೇ ದಿನ ಇಬ್ಬರು ದ್ವಿಚಕ್ರ ವಾಹನ ಸವಾರರು ಅಪಘಾತದಿಂದ ಮೃತಪಟ್ಟಿದ್ದರು. ಅದರ ಮರುದಿನ ಬಂಟ್ವಾಳ ಪೊಲೀಸ್‌ ಇಲಾಖೆ ಡಿವೈಎಸ್‌ಪಿ ಅವರ ನೇತೃತ್ವದಲ್ಲಿ ಹೆದ್ದಾರಿಯ ಪರಿಶೀಲನ ಕಾರ್ಯ ನಡೆಸಿತ್ತು. ಕಲ್ಲಡ್ಕ ಜಂಕ್ಷನ್‌ನಲ್ಲಿ ಬ್ಯಾರಿಕೇಡ್‌, ಪೈಬರ್‌ ಕೋನ್‌ಗಳನ್ನು ಅಳವಡಿಸಲಾಗಿತ್ತು. ಜತೆಗೆ ಹೆದ್ದಾರಿಗೆ ಸಂಬಂಧಪಟ್ಟ ಎಂಜಿನಿಯರ್‌ಗಳನ್ನು ಕರೆಸಿ ಅಪಘಾತಗಳಿಗೆ ಹೆದ್ದಾರಿಯ ಅವ್ಯವಸ್ಥೆಯೂ ಕಾರಣ ಎನ್ನಲಾಗಿತ್ತು.

ರಿಪ್ಲೆಕ್ಟರ್‌ಗಳಿಲ್ಲ
ಸಾಮಾನ್ಯವಾಗಿ ರಸ್ತೆಗಳ ಡಾಮರು ಕಾಮಗಾರಿ ಮುಗಿದ ಬಳಿಕ ರಾತ್ರಿ ಹೊತ್ತು ವಾಹನ ಚಾಲಕರು/ ಸವಾರರನ್ನು ಎಚ್ಚರಿಸುವ ರಿಪ್ಲೆಕ್ಟರ್‌ಗಳನ್ನು ಹಾಕ ಲಾಗುತ್ತದೆ. ಅಂತಹ ಯಾವುದೇ ರಿಪ್ಲೆಕ್ಟರ್‌ಗಳನ್ನು ಆಳವಡಿಸಿಲ್ಲ. ಜತೆಗೆ ಕ್ಯಾಟ್‌ ಐ(ರಾತ್ರಿ ಹೊತ್ತಿನಲ್ಲಿ ಬೆಳಗುವ ನಾಮಫಲಕ)ಗಳನ್ನೂ ಅಳವಡಿಸಿಲ್ಲ.

ಹೆದ್ದಾರಿ ಬದಿ ಅಪಾಯಕಾರಿ
ಕಾಮಗಾರಿ ನಡೆದಂತೆ ಹೆದ್ದಾರಿಯ ಬದಿಯಲ್ಲಿ ಎತ್ತರವಾಗುತ್ತದೆ. ಆಗ ಬದಿಗೆ ಮಣ್ಣು ಹಾಕಿ ಸಮತಟ್ಟು ಮಾಡಬೇಕು. ಪ್ರಸ್ತುತ ಬಿ.ಸಿ.ರೋಡಿನಿಂದ ಅಡ್ಡ ಹೊಳೆವರೆಗೆ ನಡೆದ ಕಾಮಗಾರಿಯ ಸಂದರ್ಭ ಎಲ್ಲೂ ಮಣ್ಣು ಹಾಕಿಲ್ಲ. ಹೀಗಾಗಿ ಹೆದ್ದಾರಿ ಸಾಕಷ್ಟು ಎತ್ತರದಲ್ಲಿದ್ದು, ದ್ವಿಚಕ್ರ ವಾಹನಗಳಿಗೆ ಸಾಕಷ್ಟು ಅಪಾ ಯಕಾರಿ. ಹೆದ್ದಾರಿಯಲ್ಲಿ ಘನ ವಾಹನಗಳೇ ಹೆಚ್ಚಾಗಿ ಸಾಗುತ್ತಿದ್ದು, ಪರಸ್ಪರ ಓವರ್‌ಟೇಕ್‌ ಮಾಡುವ ವೇಳೆ ಎದುರಿನಿಂದ ಬರುವ ವಾಹನಗಳನ್ನು ಹೆದ್ದಾರಿಯಿಂದ ಕೆಳಗೆ ಇಳಿಸಬೇಕಾದ ಸ್ಥಿತಿ ಇದೆ. ಇದೂ ಅಪಘಾತಕ್ಕೆ ಕಾರ ಣವಾಗುತ್ತಿದೆ ಎಂಬುದು ಸ್ಥಳೀಯರ ಅಭಿಪ್ರಾಯ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.