ಫ್ರಾನ್ಸ್‌ನಲ್ಲೂ ಹಿಜಾಬ್‌, ಹಲಾಲ್‌ ನಿಷೇಧದ ಕೂಗು!


Team Udayavani, Apr 21, 2022, 8:25 AM IST

thumb 2

ಪ್ಯಾರಿಸ್‌: ಕರ್ನಾಟಕದಲ್ಲಿ ಕೆಲವು ದಿನಗಳ ಹಿಂದೆ ಉಲ್ಪಣಿಸಿದ್ದ ಹಿಜಾಬ್‌ ಹಾಗೂ ಹಲಾಲ್‌ ಕಟ್‌ ನಿಷೇಧದ ಕೂಗು ದೂರದ ಫ್ರಾನ್ಸ್‌ನಲ್ಲಿಯೂ ಪ್ರತಿ ಧ್ವನಿಸಿದೆ. ಅಲ್ಲೀಗ ಅಧ್ಯಕ್ಷೀಯ ಚುನಾವಣೆಯ ಕಾವು ಹೆಚ್ಚಾಗಿದ್ದು, ಮತದಾನದ ಮೊದಲ ಹಂತ ಎ. 10ರಂದು ಮುಗಿದಿದೆ. ಎ. 24ರಂದು 2ನೇ ಹಂತದ ಮತದಾನ ನಡೆಯಲಿದೆ.

ಕುತೂಹಲಕಾರಿ ವಿಚಾರವೇನೆಂದರೆ, ಭಾರತದಲ್ಲಿನ ಪ್ರತೀ ಚುನಾವಣೆಗಳಲ್ಲಿ ವ್ಯಕ್ತವಾಗುವಂತೆ ರಾಷ್ಟ್ರೀಯವಾದ ಹಾಗೂ ಜಾತ್ಯತೀತತೆ ಅಲ್ಲಿಯ ಚುನಾವಣ ಪ್ರಚಾರಗಳಲ್ಲಿಯೂ ಮೇಳೈಸಿವೆ.

2020ರಲ್ಲಿ ಇಸ್ಲಾಂ ಧರ್ಮ ಸಂಸ್ಥಾಪಕರ ವಿರುದ್ಧ ಅವಹೇಳನಕಾರಿ ಕಾರ್ಟೂನ್ ನನ್ನು ತರಗತಿಯಲ್ಲಿ ಪ್ರದರ್ಶಿಸಿದ ಆರೋಪ ಹೊತ್ತಿದ್ದ ಶಿಕ್ಷಕನೊಬ್ಬನನ್ನು ದುಷ್ಕರ್ಮಿಗಳು ಶಿರಚ್ಛೇದ ಮಾಡಿದ ಘಟನೆ ಅನಂತರ ಅಲ್ಲಿ ಮುಸ್ಲಿಮರ ವಿರುದ್ಧ ಸಾಕಷ್ಟು ಪ್ರತಿಭಟನೆಗಳು ನಡೆದಿವೆ. ಹಾಗಾಗಿ ರಾಷ್ಟ್ರೀಯವಾದ ಮುನ್ನೆಲೆಗೆ ಬಂದಿದೆ.

ಈ ಹಿನ್ನೆಲೆಯಲ್ಲಿ, ಹಿಜಾಬ್‌, ಹಲಾಲ್‌ ವಿಚಾರಗಳು ಅಲ್ಲಿ ಪ್ರಸ್ತಾವವಾಗಿವೆ. ಹಾಗಾಗಿ ಕೆಲವು ಕಾಯ್ದೆ ಗಳು ಅಲ್ಲಿ ಜಾರಿಯಾಗಿವೆ. ದಶಕದ ಹಿಂದೆಯೇ ಅಲ್ಲಿ ಬುರ್ಖಾ ಅಥವಾ ಮುಖವನ್ನು ಧಾರ್ಮಿಕ ಕಾರಣಗಳಿಗಾಗಿ ಮರೆ ಮಾಚುವಂಥ ವಸ್ತ್ರಗಳಿಗೆ ನಿಷೇಧ ಹೇರಲಾಗಿದೆ. ಇದೇ ಫೆಬ್ರವರಿಯಲ್ಲಿ ಕ್ರೀಡೆಗಳಲ್ಲಿ ಹಿಜಾಬ್‌ ನಿಷೇಧಿಸಲಾಗಿದೆ.

ಇದನ್ನೂ ಓದಿ:ನಿಯೋಜನೆಗೆ ಒತ್ತಡ ಹೇರಿದವರ ವಿರುದ್ಧ ಶಿಸ್ತುಕ್ರಮ: ಪ್ರಭು ಚವ್ಹಾಣ್‌ ಎಚ್ಚರಿಕೆ

ಮರಿನ್‌ ಮತ್ತು ಹಿಜಾಬ್‌ ನಡುವೆ ಸ್ಪರ್ಧೆ: ಇನ್ನು, ಮರಿನ್‌ ಲೆ ಪೆನ್‌ ಅವರು ತಮ್ಮ ಚುನಾ ವಣ ಪ್ರಚಾರದಲ್ಲಿ ತಾವು ಅಧಿಕಾರಕ್ಕೆ ಬಂದರೆ, ಸಾರ್ವ ಜನಿಕ ಸ್ಥಳಗಳಲ್ಲಿ ಹಿಜಾಬ್‌ ಅನ್ನು ಧರಿಸುವುದಕ್ಕೆ ನಿಷೇಧ ಹೇರುವುದಾಗಿ ಹೇಳಿ ದ್ದಾರೆ. ಇದಲ್ಲದೆ ಕ್ರಮವಾಗಿ ಮುಸ್ಲಿಮರ ಹಾಗೂ ಯೆಹೂದಿಗಳ ಸಾಂಪ್ರದಾಯಿಕ ಪ್ರಾಣಿವಧೆಯ ಮಾರ್ಗಗಳಾದ ಹಲಾಲ್‌, ಕೋಶರ್‌ ಮಾಂಸವನ್ನು ನಿಷೇಧಿಸುವುದಾಗಿ ಹೇಳಿದ್ದಾರೆ. ಇವರೆಡರ ಬಗ್ಗೆ ಮ್ಯಾಕ್ರನ್‌ ನೇರ ಪ್ರಸ್ತಾವಿಸಿಲ್ಲ. ಆದರೂ ಶಾಲೆಗಳಲ್ಲಿ ಹಾಗೂ ಕ್ರೀಡೆಗಳಲ್ಲಿ ಹಿಜಾಬ್‌ ನಿಷೇಧಿಸುವ ತಮ್ಮ ಸರಕಾರದ ಕಾನೂನು ಮುಂದುವರಿಸಿರುವುದಾಗಿ ಹೇಳಿದ್ದಾರೆ. ಇವರಿಬ್ಬರಿಗೆ ಶೇ. 9ರಷ್ಟಿರುವ ಮುಸ್ಲಿಂ ಸಮುದಾಯ ಚುನಾವಣೆಯಲ್ಲಿ ಹೇಗೆ ಸ್ಪಂದಿಸುತ್ತದೆ ಎಂಬುದು ಕುತೂಹಲ ಕಾರಿಯಾಗಿದೆ.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

imran-khan

Oxford ವಿವಿ ಕುಲಪತಿ: ಇಮ್ರಾನ್‌ ಜೈಲಿಂದ ಸ್ಪರ್ಧೆ!

1-musk

Gender change ಬಗ್ಗೆ ವಿರೋಧ: ಮಸ್ಕ್ ಗೆ ಪುತ್ರಿ ತಿರುಗೇಟು!

1-obamma-aaa

US; ಅದ್ಭುತ ಅಧ್ಯಕ್ಷೆಯಾಗುತ್ತಾರೆ: ಕಮಲಾ ಹ್ಯಾರಿಸ್‌ಗೆ ಒಬಾಮಾ ಸಂಪೂರ್ಣ ಬೆಂಬಲ

kamala-haris

US; ಕಮಲಾ ಹ್ಯಾರಿಸ್‌ಗೆ ಕೊನೆಗೂ ಮಾಜಿ ಅಧ್ಯಕ್ಷ ಒಬಾಮಾ ಬೆಂಬಲ?

Bangladesh: ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲಿಸಿದ ಬಾಂಗ್ಲಾದೇಶ್ ಸರ್ಕಾರ!

Bangladesh: ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲಿಸಿದ ಬಾಂಗ್ಲಾದೇಶ್ ಸರ್ಕಾರ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.