ಹೆಣ್ಣು ಮಕ್ಕಳು ಶಿಕ್ಷಣದತ್ತ ಗಮನ ನೀಡಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Team Udayavani, Apr 24, 2022, 6:00 AM IST
ಉಡುಪಿ: ನಮ್ಮ ಹೆಣ್ಣು ಮಕ್ಕಳಿಗೆ ಬೇಕಾದದ್ದು ಶಿಕ್ಷಣ. ಶಿಕ್ಷಣ ಪಡೆದು ತಮ್ಮ ಕಾಲ ಮೇಲೆ ಅವರು ನಿಲ್ಲಬೇಕು. ಹಾಲ್ ಟಿಕೆಟ್ ಪಡೆದು ಪರೀಕ್ಷೆ ಬರೆಯದೆ ಪ್ರಚಾರ ಗಿಟ್ಟಿಸುತ್ತಿದ್ದಾರೆ .ಭಯೋತ್ಪಾದಕರು ಬೆಂಬಲ ಕೊಡುವ ರೀತಿಯಲ್ಲಿ ಭಾರತದಲ್ಲಿ ಏನೋ ನಡೆಯುತ್ತೆ ಎನ್ನುವಂತೆ ಬಿಂಬಿಸಲು ಹೊರಟಿದ್ದಾರೆ. ಭಾರತವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುತ್ತಿದ್ದಾರೆ. ಇದು ಭಾರತದಲ್ಲಿ ನಡೆಯುವುದಿಲ್ಲ. ಇಲ್ಲಿ ಪ್ರಜಾತಂತ್ರ ವ್ಯವಸ್ಥೆ ಇದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರೂ ಪರೀಕ್ಷೆ ಬರೆಯಬೇಕು. ಪದವಿ ಪಡೆದು ಅವರ ಕಾಲ ಮೇಲೆ ಅವರು ನಿಲ್ಲಬೇಕು. ಈಗಲಾದರೂ ಸರಿ ಮಾಡಿಕೊಂಡು ಹೋಗಬೇಕು. ನಿಮ್ಮ ಹಿಂದೆ ನಿಂತ ಸಂಘಟನೆ, ಬದುಕಿನಲ್ಲಿ ಬರುವುದಿಲ್ಲ ಎಂದರು.
ಹಿಜಾಬ್ಗ ಸಂಬಂಧಿಸಿದಂತೆ ಹೈಕೋರ್ಟ್ ಸ್ಪಷ್ಟ ನಿರ್ಧಾರ ತಿಳಿಸಿದೆ. ಸಮವಸ್ತ್ರ ಧರಿಸಿ ಬರಬೇಕೆಂದು ಹೇಳಿರುವುದರಿಂದ ರಾಜ್ಯ ಸರಕಾರದ ಶಿಕ್ಷಣ ಇಲಾಖೆ ಕೂಡ ಇದನ್ನೇ ಹೇಳಿದೆ. ಹೈಕೋರ್ಟ್ ಆದೇಶ ಮೀರಿ ಕೆಲವರು ಹಿಜಾಬ್ಗ ಬೆಂಬಲ ಕೊಡುತ್ತಿದ್ದಾರೆ. ಈ ದೇಶದ ನೆಲದ ಕಾನೂನನ್ನು ಪಾಲನೆ ಮಾಡುವುದಿಲ್ಲ; ಮನಬಂದಂತೆ ನಡೆದುಕೊಳ್ಳುತ್ತೇವೆ ಅನ್ನುವುದನ್ನು ಸಾಬೀತು ಮಾಡಿದ್ದಾರೆ. . ಪೊಲೀಸರಿಗೆ, ಸರಕಾರಕ್ಕೆ ಗೌರವ ಕೊಡುವುದಿಲ್ಲ. ಪೊಲೀಸ್ ವ್ಯವಸ್ಥೆ ಮೇಲೆ ದೌರ್ಜನ್ಯ,ಪೊಲೀಸ್ ಠಾಣೆ ಮೇಲೆ ದಾಳಿ ಮಾಡುತ್ತಾರೆ ಇದು ಅವರ ಮಾನಸಿಕತೆಯನ್ನು ತೋರಿಸುತ್ತದೆ. ದೇಶದಲ್ಲಿ ಎಲ್ಲರೂ ಒಟ್ಟಾಗಿ ಬದುಕಬೇಕು ಅನ್ನೋದು ನಮ್ಮ ಸಂಕಲ್ಪ ಎಂದರು.
ಭಾರತ ಎತ್ತ ಸಾಗುತ್ತಿದೆ ಎಂದು ಹಿಜಾಬ್ ಹೋರಾಟಗಾರ್ತಿ ಆಲಿಯಾ ಟ್ಟಿಟ್ಗೆ ಪ್ರತಿಕ್ರಿಯಿಸಿದ ಸಚಿವರು, ಭಾರತದಲ್ಲಿ ಎಲ್ಲರೂ ಒಂದೇ ರೀತಿಯಲ್ಲಿ ಬದುಕಬೇಕು ಅನ್ನುವುದನ್ನು ನಾವು ಸಾರುತ್ತೇವೆ. ಭಾರತದಿಂದ ಬಿಟ್ಟು ಹೋದವರ ಪರಿಸ್ಥಿತಿ ಏನಾಗಿದೆ, ಅಲ್ಲಿ ಊಟಕ್ಕೂ ಗತಿ ಇಲ್ಲದ ಪರಿಸ್ಥಿತಿ ಇದೆ. ಭಾರತದಲ್ಲಿ ಎಲ್ಲರಿಗೂ ಊಟ, ಔಷಧ ಸಿಗುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ
Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ
Veerappa Moily; ದೇಶಕ್ಕೆ ಕ್ರಿಕೆಟ್ ಕಾಮೆಂಟ್ರಿಯನ್ ಬೇಕಿಲ್ಲ
Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
MUST WATCH
ಹೊಸ ಸೇರ್ಪಡೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ