ಭಾರಿ ಮಳೆ : ಹಿಪ್ಪರಗಿ ಜಲಾಶಯದ ಒಳ ಹರಿವು 97000 ಕ್ಯೂಸೆಕ್
ಬಾಗಲಕೋಟೆ - ಬೆಳಗಾವಿ ಜಿಲ್ಲೆಗಳ ಸಂಪರ್ಕ ಕಲ್ಪಿಸುವ ಬೋಟ್ ಸೇವೆ ಬಂದ್
Team Udayavani, Jun 18, 2021, 7:14 PM IST
ಬನಹಟ್ಟಿ: ಕಳೆದ ಕೆಲವು ದಿನಗಳಿಂದ ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರಿ ಪ್ರಮಾಣದ ಮಳೆಯಿಂದಾಗಿ ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬನಹಟ್ಟಿ ಸಮೀಪದಲ್ಲಿ ಹರಿಯುತ್ತಿರುವ ಕೃಷ್ಣಾ ನದಿಗೆ ಶುಕ್ರವಾರ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.
ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಹಿಪ್ಪರಗಿ ಜಲಾಶಯಕ್ಕೆ ಶುಕ್ರವಾರ ಸಂಜೆ 97000 ಕ್ಯೂಸೆಕ್ ನೀರು ಬಂದಿದೆ. ಜಲಾಶಯದ ಹೊರ ಹರಿವು 96 ಸಾವಿರ ಕ್ಯೂಸೆಕ್ ಇದ್ದು, ಜಲಾಶಯದಲ್ಲಿ ನೀರಿನ ಮಟ್ಟ 521ಮೀಟರ್ ಇದ್ದು, ಜಲಾಶಯದಲ್ಲಿ 2.62 ಟಿಎಂಸಿ ನೀರಿನ ಸಂಗ್ರಹವಿದೆ ಎಂದು ರಬಕವಿ-ಬನಹಟ್ಟಿ ತಹಶೀಲ್ದಾರ ಸಂಜಯ ಇಂಗಳೆ ತಿಳಿಸಿದ್ದಾರೆ.
ಮುಂದಿನ ದಿನಗಳಲ್ಲಿ ನದಿಯು ಅಪಾಯ ಮಟ್ಟ ಮೀರಿ ಹರಿಯುವ ಸಾಧ್ಯತೆ ಇದೆ. ಈಗಾಗಲೇ ತಾಲೂಕು ಆಡಳಿತ ಘಟಪ್ರಭಾ ಹಾಗೂ ಕೃಷ್ಣಾನದಿ ಪ್ರವಾಹ ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ನದಿ ಪಾತ್ರದ ಜನರು, ತಮ್ಮ ಪಾತ್ರೆ ಹಾಗೂ ಜಾನವಾರಗಳ ಸಮೇತ ಸುರಕ್ಷತಾ ಸ್ಥಳಗಳಿಗೆ ತೆರಳಬೇಕು ಎಂದು ತಹಶೀಲ್ದಾರ ಮನವಿ ಮಾಡಿದ್ದಾರೆ.
ಮಹಾರಾಷ್ಟ್ರದ ಕೊಯ್ನಾ : 142 ಮಿ.ಮೀ, ವಾರಣಾ:80 ಮಿ.ಮೀ ದೂಧಗಂಗಾ: 185 ಮಿ.ಮೀ, ರಾಧಾ ನಗರಿ 220 ಮಿ.ಮೀ ಸೇರಿದಂತೆ ಇನ್ನೀತರ ಪ್ರದೇಶದಲ್ಲಿ ಸಾಕಷ್ಟು ಮಳೆಯಾದ ವರದಿಯಾಗಿದೆ.
ಬೋಟ್ ಸೇವೆ ಬಂದ್: ಕೃಷ್ಣಾ ನದಿಯಲ್ಲಿ ನೀರಿನ ಹರಿವು ತೀವ್ರವಾಗಿರುವುದರಿಂದ ರಬಕವಿ-ಬನಹಟ್ಟಿ, ಹಾಗೂ ಮುಧೋಳ ತಾಲ್ಲೂಕಿನಿಂದ ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ನಗರ ಮತ್ತು ಗ್ರಾಮೀಣ ಪ್ರದೇಶಗಳಿಗೆ ಸೇವೆ ಕಲ್ಪಿಸುತ್ತಿದ್ದ ಬೋಟ್ ಸೇವೆಯನ್ನು ಬಂದು ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್
ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು
ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!
Pan India: ಯಶ್ ʼಟಾಕ್ಸಿಕ್ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ