ಜೆಡಿಎಸ್‌ ಹೊಣೆ ಹೊತ್ತ ಎಚ್.ಕೆ.ಕುಮಾರಸ್ವಾಮಿ


Team Udayavani, Jul 5, 2019, 6:00 AM IST

040719kpn87

ಬೆಂಗಳೂರು: ಜೆಡಿಎಸ್‌ನ ನೂತನ ರಾಜ್ಯಾಧ್ಯಕ್ಷರಾಗಿ ನಿರೀಕ್ಷೆಯಂತೆ ಮಾಜಿ ಸಚಿವ ಎಚ್.ಕೆ.ಕುಮಾರಸ್ವಾಮಿ ಹಾಗೂ ಯುವ ಜೆಡಿಎಸ್‌ ರಾಜ್ಯಾಧ್ಯಕ್ಷರಾಗಿ ನಿಖೀಲ್ ಕುಮಾರಸ್ವಾಮಿ ನೇಮಕಗೊಂಡಿದ್ದಾರೆ.

ಮಧು ಬಂಗಾರಪ್ಪ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ, ಶಾಸಕ ಗೋಪಾಲಯ್ಯ ಹಾಗೂ ಮಾಜಿ ಸಚಿವ ಎಂ.ಎ.ನಬಿ ಅವರನ್ನು ಹಿರಿಯ ಉಪಾಧ್ಯಕ್ಷರಾಗಿ ಹನೂರು ಮಂಜುನಾಥ್‌ ಅವರನ್ನು ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ರಾಷ್ಟೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ನೂತನ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿದರು. ನೂತನ ರಾಜ್ಯಾಧ್ಯಕ್ಷ ಎಚ್.ಕೆ. ಕುಮಾರಸ್ವಾಮಿಯವರಿಗೆ ನಿರ್ಗಮಿತ ಅಧ್ಯಕ್ಷ ಎಚ್.ವಿಶ್ವನಾಥ್‌ ಪಕ್ಷದ ಬಾವುಟ ನೀಡಿ ಅಧಿಕಾರ ಹಸ್ತಾಂತರಿಸಿದರು. ಯುವ ಘಟಕದ ಅಧ್ಯಕ್ಷ ನಿಖೀಲ್ಕುಮಾರಸ್ವಾಮಿಗೆ ಮಧು ಬಂಗಾರಪ್ಪ ಪಕ್ಷದ ಬಾವುಟ ನೀಡಿ ಶುಭ ಕೋರಿದರು.

ಇದೇ ವೇಳೆ ಪಕ್ಷದ ಅಲ್ಪಸಂಖ್ಯಾತರ ಘಟಕಕ್ಕೆ ಬೆಳಗಾವಿಯ ನಾಸೀರ್‌ ಭಗವಾನ್‌, ಬೂತ್‌ ಸಮಿತಿ ಅಧ್ಯಕ್ಷರಾಗಿ ಮಾಜಿ ಶಾಸಕ ಸಿ.ಬಿ.ಸುರೇಶ್‌ಬಾಬು, ಯುವ ಘಟಕದ ಕಾರ್ಯಾಧ್ಯಕ್ಷರಾಗಿ ನೂರ್‌ ಅಹ್ಮದ್‌, ಮಹಾಪ್ರಧಾನ ಕಾರ್ಯ ದರ್ಶಿಯಾಗಿ ಶರಣ್‌ಗೌಡ ಕುಂದಕ‌ೂರ್‌, ಉಪಾಧ್ಯಕ್ಷರಾಗಿ ನರಸಿಂಹಮೂರ್ತಿರನ್ನು ನೇಮಿಸಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಎಚ್.ಡಿ.ದೇವೇಗೌಡರು, ಲೋಕಸಭೆ ಸೋಲಿನ ಹಿನ್ನೆಲೆಯಲ್ಲಿ ಎಚ್.ವಿಶ್ವನಾಥ್‌ ಅವರು ನೈತಿಕ ಹೊಣೆ ಹೊತ್ತು ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀ ನಾಮೆ ನೀಡಿದ್ದರು. ಆ ಸ್ಥಾನಕ್ಕೆ ದಲಿತ ಸಮು ದಾಯದ ಎಚ್.ಕೆ. ಕುಮಾರಸ್ವಾಮಿಯವರನ್ನು ನೇಮಿಸಿದ್ದೇನೆ. ಐದು ಬಾರಿ ಶಾಸಕರಾಗಿ ಒಮ್ಮೆ ಸಚಿವರಾಗಿ ಕೆಲಸ ಮಾಡಿರುವ ಅವರು ಪಕ್ಷ ಮುನ್ನಡೆಸಲಿದ್ದಾರೆ ಎಂದು ಹೇಳಿದರು. ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ಶರಣ್‌ಗೌಡ ಅವರನ್ನು ನೇಮಿಸಲು ಬಯಸಿದ್ದೆ. ಆದರೆ, ನಿಖೀಲ್ ಅವರನ್ನೇ ನೇಮಿಸಬೇಕು ಎಂದು ಅವರೆಲ್ಲಾ ಒತ್ತಾಯ ಮಾಡಿದ್ದರಿಂದ ಮಣಿಯಬೇಕಾಯಿತು ಎಂದು ಹೇಳಿದರು.

ಜೆಡಿಎಸ್‌ ರಾಜ್ಯ ಘಟಕಕ್ಕೆ ಮಹಾಪ್ರಧಾನ ಕಾರ್ಯದರ್ಶಿ ನೇಮಕ ಸದ್ಯದಲ್ಲೇ ಮಾಡಲಾಗುವುದು. ಉಳಿದ ಪದಾಧಿಕಾರಿಗಳ ನೇಮಕವನ್ನು ನೂತನ ಅಧ್ಯಕ್ಷ, ಕಾರ್ಯಾಧ್ಯಕ್ಷರು ಮಾಡಲಿದ್ದಾರೆ ಎಂದು ತಿಳಿಸಿದರು.

ಸಮನ್ವಯ ಸಮಿತಿಗೆ ಸೇರಿಸಿ: ನಿರ್ಗಮಿತ ಅಧ್ಯಕ್ಷ ಎಚ್.ವಿಶ್ವನಾಥ್‌ ಮಾತನಾಡಿ, ಪಕ್ಷ ಮತ್ತು ಸರ್ಕಾರ, ಎರಡೂ ಪಕ್ಷದ ಕಾರ್ಯಕರ್ತರು, ಮುಖಂಡರು ಹಾಗೂ ಸಚಿವರ ನಡುವೆ ಸಮನ್ವಯತೆ ಇದ್ದಾಗ ಮಾತ್ರ ಸಮ್ಮಿಶ್ರ ಸರ್ಕಾರ ಯಶಸ್ವಿಯಾಗಲು ಎರಡೂ ಪಕ್ಷದ ಸಿದ್ಧಾಂತ, ಕಾರ್ಯಕ್ರಮ ಜನರಿಗೆ ತಲುಪಲು ಸಾಧ್ಯ. ಹೊಸ ಅಧ್ಯಕ್ಷರನ್ನು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿಗೆ ಸೇರ್ಪಡೆ ಮಾಡಲು ಮನವಿ ಮಾಡುತ್ತೇನೆ. ಅದೇ ರೀತಿ ಕೆಪಿಸಿಸಿ ಅಧ್ಯಕ್ಷರೂ ಸಮಿತಿಯಲ್ಲಿರಬೇಕು ಎಂದು ಹೇಳಿದರು.

ರಾಜ್ಯಾಧ್ಯಕ್ಷರಿಗೆ ಅಧಿಕಾರ ಬೇಕು: ಪಕ್ಷದ ರಾಜ್ಯಾಧ್ಯಕ್ಷರಿಗೆ ಸಂಪನ್ಮೂಲ, ಸ್ವಾತಂತ್ರ್ಯ, ಅಧಿಕಾರ ಬೇಕು. ಈ ವಿಚಾರದಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ವಿಶ್ವನಾಥ್‌ ತಿಳಿಸಿದರು.

ದೇವೇಗೌಡರನ್ನು ಒಳಗೊಂಡ ಕೋರ್‌ ಕಮಿಟಿ ರಚನೆಯಾಗಲಿದ್ದು ಅದರಲ್ಲಿ ನಾವೆಲ್ಲಾ ಇದ್ದು ಮಾರ್ಗದರ್ಶನ ನೀಡುತ್ತೇವೆ ಎಂದು ಹೇಳಿದರು.

ಕಾರ್ಯಾಧ್ಯಕ್ಷ ಮಧು ಬಂಗಾರಪ್ಪ ಮಾತನಾಡಿ, ಪಕ್ಷವು ನನಗೆ ಯುವ ಘಟಕದ ಅಧ್ಯಕ್ಷ ಸ್ಥಾನ ನೀಡಿತ್ತು. ಪ್ರಾಮಾಣಿಕವಾಗಿ ನನ್ನ ಕೆಲಸ ನಾನು ಮಾಡಿದ್ದೆ. ಇದೀಗ ಕಾರ್ಯಾಧ್ಯಕ್ಷ ಹೊಣೆಗಾರಿಕೆ ನೀಡಿದೆ. ಹಿರಿಯರಾದ ಎಚ್.ಕೆ.ಕುಮಾರಸ್ವಾಮಿ ಯವರ ಜತೆಗೂಡಿ ಕೆಲಸ ಮಾಡಲಿದ್ದೇನೆ ಎಂದು ತಿಳಿಸಿದರು.

ಯುವ ಘಟಕದ ಅಧ್ಯಕ್ಷರಾಗಿ ನೇಮಕಗೊಳ್ಳಲು ನಿಖೀಲ್ ಅವರಿಗೆ ಇಷ್ಟ ಇರಲಿಲ್ಲ. ನಾವೇ ಒತ್ತಾಯ ಮಾಡಿದೆವು. ಅವರ ನೇಮಕಕ್ಕೆ ಬೇರೆ ರೀತಿ ಅರ್ಥ ಕಲ್ಪಿಸಬೇಕಿಲ್ಲ. ಅವರ ಅಗತ್ಯತೆ ಪಕ್ಷಕ್ಕೆ ಇದೆ ಎಂದು ಹೇಳಿದರು.

ಸರ್ಕಾರಕ್ಕೆ ಅಪಾಯ ಇಲ್ಲ: ಎಚ್‌ಡಿಡಿ
ಸಮ್ಮಿಶ್ರ ಸರ್ಕಾರಕ್ಕೆ ಆಪಾಯ ಇಲ್ಲ. ಹಾಗೆಂದು ಸಮಸ್ಯೆಯೇ ಇಲ್ಲ ಎಂದಲ್ಲ, ಅಲ್ಪಸ್ವಲ್ಪ ಸಮಸ್ಯೆ ಇವೆ, ಅವೆಲ್ಲವನ್ನೂ ನಿಭಾಯಿಸುವ ಶಕ್ತಿ ನನಗೆ, ಸಿದ್ದರಾಮಯ್ಯ ಅವರಿಗೆ ಹಾಗೂ ಎರಡೂ ಪಕ್ಷದ ನಾಯಕರಿಗೆ ಇದೆ. ಹೀಗಾಗಿ ಸರ್ಕಾರ ಸುಸೂತ್ರವಾಗಿ ನಡೆಯಲಿದೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಹೇಳಿದರು. ಹಿಂದೂಸ್ಥಾನದ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ರೈತರ ಸಾಲ ಸಹಕಾರ ಸಂಘ ಹಾಗೂ ವಾಣಿಜ್ಯ ಬ್ಯಾಂಕುಗಳಲ್ಲಿ ಮನ್ನಾ ಮಾಡಿದ್ದು ಸಮ್ಮಿಶ್ರ ಸರ್ಕಾರ. ಶುಕ್ರವಾರ ನರೇಂದ್ರಮೋದಿ ಅವರ ಎರಡನೇ ಅವಧಿಯ ಸರ್ಕಾರದ ಮೊದಲ ಕೇಂದ್ರ ಬಜೆಟ್ ಮಂಡನೆಯಾಗಲಿದೆ, ಏನೇನೂ ಕೊಡ್ತಾರೋ ನೋಡೋಣ ಎಂದರು.

ಮಾಹಿತಿ ಇಲ್ಲ: ಪ್ರಜ್ವಲ್

ನಿಖೀಲ್ ಕುಮಾರಸ್ವಾಮಿ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷರಾಗಿ ನೇಮಕ ಗೊಂಡಿರುವ ಬಗ್ಗೆ ನನಗೆ ಮಾಹಿತಿಯಿಲ್ಲ ಎಂದು ದೆಹಲಿಯಲ್ಲಿ ಗುರುವಾರ ಬೆಳಗ್ಗೆ ಹೇಳಿಕೆ ನೀಡಿದ ಸಂಸದ ಪ್ರಜ್ವಲ್ ರೇವಣ್ಣ , ಆ ನಂತರ ಮಧ್ಯಾಹ್ನದ ವೇಳೆಗೆ ನೇಮಕಾತಿ ಬಗ್ಗೆ ಮೊದಲೇ ನನಗೆ ಗೊತ್ತಿರಲಿಲ್ಲ. ಪಕ್ಷದ ನಾಯಕರ ಜತೆ ಮಾತನಾಡಿ ಮಾಹಿತಿ ಪಡೆದುಕೊಂಡೆ. ನಿಖೀಲ್ ನೇಮಕದಿಂದ ನನಗೇನೂ ಬೇಸರ ಅಥವಾ ಅಸಮಾಧಾನ ಇಲ್ಲ. ಎಲ್ಲರೂ ಸೇರಿ ಪಕ್ಷ ಕಟ್ಟಲಿದ್ದೇವೆ ಎಂದು ಹೇಳಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.