ಕಾರ್ಪೋರೆಟ್‌ ಕ್ಷೇತ್ರವಾಗಿಸುವ ಹುನ್ನಾರ : ಎಚ್‌.ಕೆ.ಪಾಟೀಲ್‌


Team Udayavani, Jul 14, 2021, 6:35 AM IST

ಕಾರ್ಪೋರೆಟ್‌ ಕ್ಷೇತ್ರವಾಗಿಸುವ ಹುನ್ನಾರ : ಎಚ್‌.ಕೆ.ಪಾಟೀಲ್‌

ಕೇಂದ್ರ ಸರಕಾರ ಬಹುವರ್ಷಗಳ ಬೇಡಿಕೆಗೆ ಪೂರಕ ವಾಗಿ ಸಹಕಾರ ಕ್ಷೇತ್ರಕ್ಕೆ ಪ್ರತ್ಯೇಕ ಸಚಿವಾಲಯ ಮಾಡಿರುವುದು ಸ್ವಾಗತಾರ್ಹವಾಗಿದೆ. ಆದರೆ ಕೇಂದ್ರ ಸರಕಾರದ, ಚಿಂತನೆಗಳನ್ನು ಗಮನಿಸಿದರೆ, ಸಹಕಾರ ಕ್ಷೇತ್ರವನ್ನು ಕಾರ್ಪೋರೆಟ್‌ ಕ್ಷೇತ್ರ ವಾಗಿಸುವ ಯತ್ನಗಳು ನಡೆಯುತ್ತಿವೆಯೇ ಸಹಕಾರ ಕ್ಷೇತ್ರವನ್ನು ರಾಜಕೀಯವಾಗಿ ಬಳಸಲು ವ್ಯವಸ್ಥಿತ ಯತ್ನಗಳನ್ನು ರೂಪಿಸಲಾಗುತ್ತಿದೆಯೇ ಎಂಬ ಶಂಕೆ-ಅನುಮಾನ, ಆತಂಕ ನನ್ನಂತಹ ಅನೇಕ ಸಹಕಾರಿಗಳಲ್ಲಿ ಮೂಡದೇ ಇರದು.

ಸಹಕಾರ ಕ್ಷೇತ್ರಕ್ಕೆ, ಸಹಕಾರಿ ತಣ್ತೀಗಳಿಗೆ ಅದರದ್ದೇ ಆದ ಮಹತ್ವವಿದೆ, ಪ್ರಭಾವ, ಪಾವಿತ್ರ್ಯ ಇದೆ. ಸಹಕಾರ ತಣ್ತೀ ಭಾರತೀಯರ ಬದುಕಿನ ಅವಿಭಾಜ್ಯ ಅಂಗ ವಾಗಿಯೇ ರೂಪಿತವಾಗಿ ಬೆಳೆದು ಬಂದಿದೆ. ಕೃಷಿ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಭಾರತೀಯರಿಗೆ ಸಹಕಾರ ಕ್ಷೇತ್ರ ಹೊಸತಲ್ಲ. ಸಹಕಾರ ಕ್ಷೇತ್ರ ವ್ಯಾಪಕತೆ ಹೊಂದಿದ್ದು, ಆದನ್ನು ಸೀಮಿತಗೊಳಿಸುವ ಇಲ್ಲವೆ, ಸಹಕಾರದ ಮೂಲ ಆಶಯಕ್ಕೆ ಧಕ್ಕೆ ತರುವ ರೀತಿಯಲ್ಲಿ ಕಾರ್ಪೋರೆಟ್‌ ರೂಪ ಕೊಡುವ ಯತ್ನ ಯಾರಿಂದಲೂ ಆಗಬಾರದು. ನೂತನ ಸಹಕಾರ ಖಾತೆ ನಿರ್ವಹಣೆ ಜವಾಬ್ದಾರಿಯನ್ನು ಕೇಂದ್ರ ಗೃಹ ಖಾತೆ ಸಚಿವ ಅಮಿತ್‌ ಶಾ ಅವರಿಗೆ ನೀಡಲಾಗಿದೆ. ಅಭಿವೃದ್ಧಿ ಇಲಾಖೆ ಹೇಗೆ ಗೃಹ ಖಾತೆಗೆ ಸಂಬಂಧ ಹೊಂದುತ್ತದೆ ಎಂಬುದು ಅನೇಕರ ಪ್ರಶ್ನೆ ಯಾಗಿದೆ. ಕೇಂದ್ರದ ನಿರ್ಣಯವನ್ನು ನಾನು ಪ್ರಶ್ನಿಸುತ್ತಿಲ್ಲ.

ನಾನು ಸೇರಿದಂತೆ ಸಹಕಾರಿ ಕ್ಷೇತ್ರದ ಆಶಯವೆಂದರೆ, ಕೇಂದ್ರ ಗೃಹ ಸಚಿವರು ಸಹಕಾರಿಯಾಗಿ ಕ್ಷೇತ್ರದ ಅಭಿವೃದ್ಧಿಗೆ ಮಹತ್ವದ ಹೆಜ್ಜೆಗಳನ್ನು ಇರಿಸಬೇಕು. ರಾಜಕೀಯೇತರ ಮನೋಭಾವದೊಂದಿಗೆ ನಿರ್ಣಯಗಳನ್ನು ಕೈಗೊಳ್ಳಬೇಕು. ಸಹಕಾರಿ ಕ್ಷೇತ್ರದ ತಣ್ತೀ, ಮೂಲ ಆಶಯಗಳಿಗೆ ಧಕ್ಕೆ ತರದ ರೀತಿಯಲ್ಲಿ ಅಭಿವೃದ್ಧಿಗೆ ಪೂರಕ, ಕ್ಷೇತ್ರದ ಮೌಲ್ಯ ಹೆಚ್ಚುವ ರೀತಿಯಲ್ಲಿ ಕಾರ್ಯನಿರ್ವಹಿಸಲಿ ಎಂಬುದಾಗಿದೆ.

ಸಹಕಾರ ಕ್ಷೇತ್ರದ ಬಲವರ್ಧನೆ ನಿಟ್ಟಿನಲ್ಲಿ ಈ ಹಿಂದೆ ಯುಪಿಎ ಸರಕಾರದಲ್ಲಿ ಅಂದಿನ ಪ್ರಧಾನಿ ಡಾ| ಮನಮೋಹನ್‌ ಸಿಂಗ್‌ ನೇತೃತ್ವದಲ್ಲಿ ಅಂದಿನ ಸಚಿವ, ಸಹಕಾರಿ ಧುರೀಣ ಶರದ್‌ ಪವಾರ್‌ ಅವರ ವಿಶೇಷ ಯತ್ನದೊಂದಿಗೆ ಸಂವಿಧಾನ ತಿದ್ದುಪಡಿಯೊಂದಿಗೆ ಸಹಕಾರ ಸಂಘ ರಚನೆ, ಮೂಲಭೂತ ಹಕ್ಕು ಆಗಿ ಮಾಡುವ ಮೂಲಕ ಕ್ರಾಂತಿಕಾರಕ ಹೆಜ್ಜೆ ಇರಿಸಲಾಗಿತ್ತು. ಸಹಕಾರ ಕ್ಷೇತ್ರದ ಪುನಶ್ಚೇತನಕ್ಕೆ ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿತ್ತು.

ಕಳೆದ 7-8 ವರ್ಷಗಳಿಂದ ಸಹಕಾರ ಕ್ಷೇತ್ರ, ಸಹಕಾರ ಬ್ಯಾಂಕಿಂಗ್‌ ವಿಷಯ ವಾಗಿ ಭಾರತೀಯ ರಿಸರ್ವ್‌ ಬ್ಯಾಂಕ್‌ ಹಾಗೂ ಕೇಂದ್ರ ಸರಕಾರ ತೋರಿದ ಅಸಹಕಾರ, ಉದಾಸೀನತೆ ನಿಲವುಗಳಿಂದಾಗಿ ಸಹಕಾರ ಕ್ಷೇತ್ರ ಸೊರಗುವಂತೆ ಮಾಡಿದೆ ಎಂದರೆ ತಪ್ಪಾಗಲಾರದು. ಸಹಕಾರಿ ಕ್ಷೇತ್ರ ಮತ್ತು ಅದರ ಅಭಿವೃದ್ಧಿಗೆ ಮಾರಕವೆನ್ನಬಹುದಾದ ವಾತಾವರಣ ಸೃಷ್ಟಿಸಲಾಗಿದೆ ಎಂಬುದನ್ನು ಸ್ಥಿತಿ ಸಾಕ್ಷಿ ಹೇಳುತ್ತಿದೆ. ಕಳೆದ ಏಳೆಂಟು ವರ್ಷಗಳಿಂದ ಕಾರ್ಪೋರೆಟ್‌ ವಲಯಕ್ಕೆ ಕೇಂದ್ರ ಸರಕಾರ ರತ್ನಗಂಬಳಿ ಸ್ವಾಗತಕ್ಕೆ ನಿಂತಿದೆ. ನೀತಿ ನಿಯಮ, ಹಣಕಾಸು ಬೆಂಬಲ ಸೇರಿದಂತೆ ವಿವಿಧ ರೂಪದಲ್ಲಿ ಕಾರ್ಪೋರೆಟ್‌ ವಲಯಕ್ಕೆ ಏನೆಲ್ಲ ಬೆಂಬಲ, ರಿಯಾಯಿತಿ, ಪ್ರೋತ್ಸಾಹ ದೊರೆ ಯುತ್ತಿದೆ. ಇನ್ನೊಂದು ಕಡೆ ಸಹಕಾರ ಕ್ಷೇತ್ರ ಎಲ್ಲಿಲ್ಲದ ಕಿರುಕುಳ ಅನುಭವಿಸು ವಂತಾಗಿದ್ದು, ಮಲತಾಯಿ ಧೋರಣೆಗೆ ಸಿಲುಕಿ ಮೌನರೋದನಕ್ಕೆ ಸಿಲುಕಿದೆ.

ಕೇಂದ್ರ ಸರಕಾರ ಸಹಕಾರ ಕ್ಷೇತ್ರದ ಕುರಿತು ಮಾಡಿದ ಕಾಯ್ದೆ-ಕಾನೂನು, ಸಹಕಾರ ಮತ್ತು ಕಾರ್ಪೋರೆಟ್‌ ವಲಯಗಳ ನಡುವೆ ವ್ಯತ್ಯಾಸ ಗುರುತಿಸದೆ ನಿಯಮ-ನಿರ್ದೇಶನ ನೀಡಿರುವುದು ನೋಡಿದರೆ, ಕಾರ್ಪೋರೆಟ್‌ ವಲಯಕ್ಕೆ ಏನು ಬೇಕು ಎಂದು ಕೇಳುವ ಮೊದಲೇ ಕೇಂದ್ರ ಸರಕಾರವೇ ಮುಂದೆ ನಿಂತು, ಇದು ನಿಮಗಾಗಿಯೇ ಇದೆ ತೆಗೆದುಕೊಳ್ಳಿ, ಬಳಸಿಕೊಳ್ಳಿ ಎಂದು ತುದಿಗಾಲ ಮೇಲೆ ನಿಂತಂತೆ ಭಾಸವಾಗುತ್ತಿದೆ.

ಆತಂಕ ಹಾಗೂ ಆಘಾತಕಾರಿ ಅಂಶವೆಂದರೆ ಸಹಕಾರ ಮೂಲ ತಣ್ತೀ-ಗುಣಲಕ್ಷಣಗಳೇ ಕಳೆದು ಹೋಗುವಂತಾಗುವ ರೀತಿಯ ನಿಯಮಗಳ ಮೂಲಕ ಸಹಕಾರ ಕ್ಷೇತ್ರದ ಅಸ್ತಿತ್ವಕ್ಕೆ ಸವಾಲಾಗುವ ರೀತಿಯಲ್ಲಿ ಕೇಂದ್ರ ವರ್ತಿಸುತ್ತಿದೆಯೇ ಎಂದೆನಿಸದೆ ಇರದು. ಸಹಕಾರ ಕ್ಷೇತ್ರ ರಾಜ್ಯ ಪಟ್ಟಿಯಲ್ಲಿ ಬರುತ್ತದೆ. ಆದರೆ ಕೇಂದ್ರ ಸರಕಾರದ ನಡೆ ಹಾಗೂ ವೇಗ, ಚಿಂತನೆಗಳನ್ನು ಗಮನಿಸಿದರೆ, ರಾಜ್ಯ ಸರಕಾರಗಳ ಅಧಿಕಾರದ ಮೇಲೂ ಗದಾಪ್ರಹಾರ ನಡೆಸಿದಂತೆ ಭಾಸವಾ ಗುತ್ತಿದೆ. ಇದು ಒಕ್ಕೂಟ ವ್ಯವಸ್ಥೆಗೆ ಧಕ್ಕೆ ಅಲ್ಲದೆ ಮತ್ತೇನು? ಸಹಕಾರ ಕ್ಷೇತ್ರದ ತಣ್ತೀ-ಗುಣಲಕ್ಷಣ, ಮೂಲ ಆಶಯಗಳನ್ನು ಹಾಳು ಮಾಡದ ಯಾವುದೇ ಕ್ರಮ, ನೀತಿ-ನಿಲುವುಗಳನ್ನು ಒಪ್ಪ ಬಹುದು. ಆದರೆ ಸಹಕಾರ ತಣ್ತೀ, ಆಶಯಗಳನ್ನೇ ಹಾಳು ಮಾಡುವ ನೀತಿ-ನಿಯಮ, ಕ್ರಮಗಳನ್ನು ಸಹಕಾರ ಕ್ಷೇತ್ರದ ಕಾರ್ಯಕರ್ತರು ಒಪ್ಪುವುದಕ್ಕೆ ಸಾಧ್ಯವೇ ಇಲ್ಲ. ಈ ನಡೆಯನ್ನು ಗಮನಿಸಿದರೆ, ಸಹಕಾರ ಸಂಸ್ಥೆಗಳಿಗೆ ಬಲ ತುಂಬುವ ಕೆಲಸ ಆಗುತ್ತಿಲ್ಲ. ಬದಲಾಗಿ ಕಾರ್ಪೋರೆಟ್‌ ವಲಯಕ್ಕೆ ಇನ್ನಷ್ಟು ಬಲ ತುಂಬುವ ಯತ್ನ ನಡೆಯುತ್ತಿದೆ ಎಂದೆನಿಸುತ್ತಿದೆ. ಕಾರ್ಪೋರೆಟ್‌ ವಲಯ, ಖಾಸಗಿ ಕ್ಷೇತ್ರಕ್ಕೆ ಅನುಕೂಲಕರ ಸ್ಥಿತಿ ರೂಪಿಸುವುದಕ್ಕಾಗಿ ಸಹಕಾರ ಕ್ಷೇತ್ರಕ್ಕೆ ಅನ್ಯಾಯ ಮಾಡುವ, ಅಸ್ತಿತ್ವಕ್ಕೆ ಧಕ್ಕೆ ತರುವ ಯಾವ ಕೆಲಸವನ್ನು ಕೇಂದ್ರ ಸರಕಾರ ಮಾಡಬಾರದು ಎನ್ನುವುದು ಸಹಕಾರ ಕ್ಷೇತ್ರದ ಪ್ರಬಲ ಹಕ್ಕೊತ್ತಾಯವಾಗಿದೆ.

– ಎಚ್‌.ಕೆ.ಪಾಟೀಲ್‌, ಮಾಜಿ ಸಹ ಕಾರ ಸಚಿವ

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.