ಸುವರ್ಣ ಯುಗದ ಒಲಿಂಪಿಯನ್‌ ಹಾಕಿಪಟು ಕೇಶವ್‌ ದತ್‌ ಇನ್ನಿಲ್ಲ


Team Udayavani, Jul 8, 2021, 12:20 AM IST

ಸುವರ್ಣ ಯುಗದ ಒಲಿಂಪಿಯನ್‌ ಹಾಕಿಪಟು ಕೇಶವ್‌ ದತ್‌ ಇನ್ನಿಲ್ಲ

ಕೋಲ್ಕತಾ: ಭಾರತೀಯ ಹಾಕಿಯ ಸುವರ್ಣ ಯುಗದ ಹರಿಕಾರ, ಎರಡು ಬಾರಿಯ ಒಲಿಂಪಿಕ್ಸ್‌ ಸ್ವರ್ಣ ವಿಜೇತ ಹಾಕಿ ತಂಡದ ಸದಸ್ಯ ಕೇಶವ್‌ ದತ್‌ ಬುಧವಾರ ಅಪರಾಹ್ನ ಕೋಲ್ಕತಾದ ಸಂತೋಷ್‌ಪುರ್‌ ನಿವಾಸದಲ್ಲಿ ಕೊನೆಯುಸಿರೆಳೆದರು. 95 ವರ್ಷದ ಅವರು ವಯೋಸಹಜ ಅನಾರೋಗ್ಯಕ್ಕೆ ಒಳಗಾಗಿದ್ದರು.

1925ರ ಡಿ. 29ರಂದು ಲಾಹೋರ್‌ನಲ್ಲಿ ಜನಿಸಿದ ಕೇಶವ್‌ ದತ್‌, ಹಾಫ್ಬ್ಯಾಕ್‌ ಆಟಗಾರನಾಗಿ ಜನಪ್ರಿಯರಾಗಿದ್ದರು. 1948ರ ಲಂಡನ್‌ ಒಲಿಂಪಿಕ್ಸ್‌ ಹಾಗೂ 1952ರ ಹೆಲ್ಸಿಂಕಿ ಒಲಿಂಪಿಕ್ಸ್‌ನಲ್ಲಿ ಸ್ವರ್ಣ ವಿಜೇತ ಭಾರತ ಭಾರತ ತಂಡದ ಸದಸ್ಯರಾಗಿದ್ದರು. ಲಂಡನ್‌ನಲ್ಲಿ ಭಾರತ ಆತಿಥೇಯ ಇಂಗ್ಲೆಂಡ್‌ ತಂಡವನ್ನು 4-0 ಅಂತರದಿಂದ ಬಗ್ಗುಬಡಿದಿತ್ತು. ಸ್ವಾತಂತ್ರ್ಯ ಲಭಿಸಿದ ಬಳಿಕ ಭಾರತಕ್ಕೆ ಒಲಿದ ಮೊದಲ ಒಲಿಂಪಿಕ್ಸ್‌ ಹಾಕಿ ಚಿನ್ನ ಇದಾಗಿತ್ತು. ಬಳಿಕ ಹೆಲ್ಸಿಂಕಿಯಲ್ಲಿ ನೆದರ್ಲೆಂಡ್ಸ್‌ಗೆ 6-1 ಅಂತರದ ಸೋಲುಣಿಸಿ ಸತತ 5ನೇ ಚಿನ್ನ ಜಯಿಸಿತ್ತು.

ದತ್‌ ಅವರ ನಿಧನದೊಂದಿಗೆ 1948 ಹಾಗೂ 1952ರ ಸ್ವರ್ಣ ಪದಕ ವಿಜೇತ ತಂಡದ ಕಟ್ಟಕಡೆಯ ಹಾಕಿಪಟುವನ್ನು ಭಾರತ ಕಳೆದುಕೊಂಡಂತಾಯಿತು.

ಇದನ್ನೂ ಓದಿ :ಟೋಕಿಯೊ ಒಲಿಂಪಿಕ್ಸ್‌ : ಟೋಕಿಯೊ ಬೀದಿಯಲ್ಲಿ ಟಾರ್ಚ್‌ ರಿಲೇ ರದ್ದು

“ಮೋಹನ್‌ ಬಗಾನ್‌ ರತ್ನ’
1948ರ ಒಲಿಂಪಿಕ್ಸ್‌ಗೂ ಮುನ್ನ ಹಾಕಿ ದಂತಕತೆ ಮೇಜರ್‌ ಧ್ಯಾನ್‌ಚಂದ್‌ ನಾಯಕತ್ವದಲ್ಲಿ ಪೂರ್ವ ಆಫ್ರಿಕಾ ಪ್ರವಾಸಗೈದ ಭಾರತ ತಂಡದಲ್ಲೂ ಕೇಶವ್‌ ದತ್‌ ಇದ್ದರು. 50ರ ದಶಕದಲ್ಲಿ, ಎರಡು ಅವಧಿಗಳಲ್ಲಿ ಅವರು ಮೋಹನ್‌ ಬಗಾನ್‌ ಹಾಕಿ ತಂಡದ ನಾಯಕತ್ವವನ್ನೂ ವಹಿಸಿದ್ದರು. ಈ ಕ್ಲಬ್‌ನೊಂದಿಗೆ ಒಂದು ದಶಕದ ಬಾಂಧವ್ಯ ಅವರದಾಗಿತ್ತು. 2019 ರಲ್ಲಿ “ಮೋಹನ್‌ ಬಗಾನ್‌ ರತ್ನ’ ಗೌರವಕ್ಕೆ ಭಾಜನರಾಗಿದ್ದರು. ಫ‌ುಟ್ಬಾಲಿಗರನ್ನು ಹೊರತುಪಡಿಸಿ ಈ ಗೌರವಕ್ಕೆ ಪಾತ್ರರಾದ ಮೊದಲ ಆಟಗಾರನೆಂಬುದು ದತ್‌ ಹೆಗ್ಗಳಿಕೆ.

ದತ್‌ ನಿಧನಕ್ಕೆ ಹಾಕಿ ಇಂಡಿಯಾ ಅಧ್ಯಕ್ಷ ಗ್ಯಾನೇಂದೊ ನಿಂಗೋಂಬಮ್‌, ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂತಾಪ ಸೂಚಿಸಿದ್ದಾರೆ.

ಟಾಪ್ ನ್ಯೂಸ್

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.