ಅಶಾಂತಿ ಸೃಷ್ಟಿಗೆ ವಿದ್ಯಾರ್ಥಿಗಳ ಬಳಕೆ : ಗೃಹ ಸಚಿವ ಬೊಮ್ಮಾಯಿ ಆತಂಕ


Team Udayavani, Feb 23, 2020, 7:15 AM IST

bhommai

ಬೆಂಗಳೂರು/ದಾವಣಗೆರೆ/ಹಾವೇರಿ: ದೇಶದ್ರೋಹಿ ಚಟುವಟಿಕೆಗಳಿಗೆ ವಿದ್ಯಾರ್ಥಿಗಳು, ಅದರಲ್ಲೂ ಹೆಣ್ಣು ಮಕ್ಕಳನ್ನು ಬಳಸಿಕೊಂಡು ಸಮಾಜದಲ್ಲಿ ಶಾಂತಿ ಕದಡುವ, ಗಲಭೆ ಸೃಷ್ಟಿಸುವ ಮತ್ತು ವೈಷಮ್ಯ ಸೃಷ್ಟಿಸುವ ಕೆಲಸ ನಡೆಯುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಆತಂಕ ವ್ಯಕ್ತಪಡಿಸಿದ್ದಾರೆ. ಈ ಮಧ್ಯೆ ಅಮೂಲ್ಯಾ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರಕಾರ ಹೆಚ್ಚುವರಿ ತನಿಖೆಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದೆ.

ದಾವಣಗೆರೆ, ಹಾವೇರಿಯಲ್ಲಿ ಮಾತನಾಡಿದ ಬೊಮ್ಮಾಯಿ, ದೇಶದ್ರೋಹಿ ಹೇಳಿಕೆ ನೀಡಿರುವ ಅಮೂಲ್ಯಾ ಹಿಂದೆ ಕೆಲವು ವ್ಯಕ್ತಿ ಗಳು ಮತ್ತು ಸಂಘಟನೆಗಳಿವೆ. ಆಕೆಗೆ ಕುಮ್ಮಕ್ಕು ನೀಡುವುದು, ಕಾನೂನು ನೆರವು ನೀಡುವ ಕೆಲಸ ನಡೆಯುತ್ತಿದೆ ಎಂದಿದ್ದಾರೆ. ರಾಜ್ಯದಲ್ಲಿ ಈಚೆಗೆ ಇಂಥ ಘಟನೆಗಳು, ಬೆಳವಣಿಗೆಗಳು ನಡೆಯುತ್ತಿದ್ದು, ದೇಶದ್ರೋಹಿ ಕೃತ್ಯಗಳು ಹೆಚ್ಚುತ್ತಿವೆ. ಇದು ವ್ಯವಸ್ಥಿತ ಸಂಚು ಮತ್ತು ಷಡ್ಯಂತ್ರದ ಭಾಗ ಎಂದರು.

ಶಿಕ್ಷಣ ಸಂಸ್ಥೆಗಳಿಗೆ ಎಚ್ಚರಿಕೆ
ವಿದ್ಯಾಸಂಸ್ಥೆಗಳು, ಹಾಸ್ಟೆಲ್‌ ಮ್ಯಾನೇಜ್‌ ಮೆಂಟ್‌ಗಳು ದೇಶದ್ರೋಹಿ ಘಟನೆಗಳ ಬಗ್ಗೆ ನಿಗಾ ವಹಿಸಬೇಕು. ಗೊತ್ತಿದ್ದೂ ಸುಮ್ಮನಿದ್ದರೆ ಕಠಿನ ಕ್ರಮ ಅನಿವಾರ್ಯ ವಾಗುತ್ತದೆ ಎಂದು ಬೊಮ್ಮಾಯಿ ಎಚ್ಚರಿಕೆ ನೀಡಿದರು.

ಇಂದು ಸಭೆ
ದೇಶ ವಿರೋಧಿ ಹೇಳಿಕೆ ಹಿಂದೆ ದೊಡ್ಡ ಷಡ್ಯಂತ್ರ ವಿದ್ದು, ರಾಜ್ಯದಲ್ಲೂ ಕಾರ್ಯಾಚರಿಸುತ್ತಿದೆ. ಧರ್ಮಗಳ ಮಧ್ಯೆ ಗಲಭೆ ಹುಟ್ಟಿಸುವ ಕೆಲಸ ನಡೆಯುತ್ತಿದೆ. ಈ ಷಡ್ಯಂತ್ರದ ಹಿಂದಿರುವ ಸಂಘಟನೆ- ಶಕ್ತಿಗಳನ್ನು ಬೇರು ಸಹಿತ ಕಿತ್ತೂಗೆಯಲಾಗುತ್ತದೆ. ಈ ಬಗ್ಗೆ ರವಿವಾರ ಬೆಂಗಳೂರಿನಲ್ಲಿ ನಡೆಯುವ ಉನ್ನತ ಮಟ್ಟದ ಸಭೆಯಲ್ಲಿ ಚರ್ಚಿಸಲಾಗುವುದು ಎಂದಿದ್ದಾರೆ.

ಸಿಎಎ ವಿರೋಧಕ್ಕೆ ವಿದೇಶೀ ಹಣ
ಸಿಎಎ ವಿರೋಧಿ ಪ್ರತಿಭಟನೆಗಳಿಗೆ ವಿಪಕ್ಷಗಳ ಕುಮ್ಮಕ್ಕಿದೆ. ಪ್ರತಿಭಟನೆಗೆ ಅಂತಾರಾಷ್ಟ್ರೀಯ ಹಣ ವಿನಿಯೋಗ ಕುರಿತು ಇಡಿ ತನಿಖೆ ನಡೆಯುತ್ತಿದೆ. ಕೆಲವು ಬ್ಯಾಂಕ್‌ ಖಾತೆಗಳಿಗೆ ನೂರಾರು ಕೋಟಿ ರೂ. ಹಣ ವರ್ಗಾವಣೆಯಾಗಿದೆ. ವಿದೇಶ ಗಳಿಂದಲೂ ಹಣ ಬಂದಿದೆ. ಇವೆಲ್ಲದರ ಬಗ್ಗೆ ಪೋಲಿಸರು ತನಿಖೆ ನಡೆಸುತ್ತಿದ್ದಾರೆ ಎಂದರು.

ಬೊಮ್ಮಾಯಿ ಹೇಳಿದ್ದೇನು?
1 ದೇಶದ್ರೋಹಿ ಕೃತ್ಯಗಳಿಗಾಗಿಯೇ ವಿದೇಶಗಳಿಂದ ಕೆಲವು ಸಂಘಟನೆಗಳಿಗೆ ಹಣ ಸಂದಾಯವಾಗುತ್ತಿರುವ ಸಂಶಯವಿದೆ.
2 ದೇಶದ್ರೋಹಿ ಹೇಳಿಕೆ ನೀಡುವುದು, ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡುವುದು ಹೆಚ್ಚಾಗುತ್ತಿದೆ.
3 ಅಮೆರಿಕ ಮೂಲದ ಇಂಟರ್‌ನೆಟ್‌ ಕಂಪೆನಿಯಿಂದ ಭಾರತದ ವಿರುದ್ಧ ನಿರಂತರ ಪೋಸ್ಟ್‌ ಆಗುತ್ತಿದೆ.
4 ಪೋಸ್ಟ್‌ಗಳಿಗಾಗಿ ಫೇಸ್‌ಬುಕ್‌, ವಾಟ್ಸ್‌ಆ್ಯಪ್‌ಗಳ ಬಳಕೆ.
5 ವಾಟ್ಸ್‌ಆ್ಯಪ್‌, ಫೇಸ್‌ಬುಕ್‌ ಪೋಸ್ಟಿಂಗ್‌ಗಳನ್ನು ಪರಿಶೀಲಿಸುವ ಕೆಲಸ ಆಗಬೇಕಿದೆ.
6 ದೇಶದ್ರೋಹದ ಪೋಸ್ಟ್‌ಗಳಿದ್ದಲ್ಲಿ ಮೂಲದಲ್ಲಿಯೇ ನಿರ್ಬಂಧಿಸುವ ಕೆಲಸವಾಗಬೇಕು
7 ದೇಶದ್ರೋಹದ ಪೋಸ್ಟ್‌ಗೆ ಅವಕಾಶ ಕೊಡದೆ ನಿರ್ಬಂಧ ಹೇರಬೇಕು.
8 ಇಂಥವುಗಳನ್ನು ಸೈಬರ್‌ ಕ್ರೈಂನಡಿ ತಂದು ಕ್ರಮ ಕೈಗೊಳ್ಳಲು ಚಿಂತನೆ ನಡೆಸುತ್ತಿ¨ªೇವೆ.
9 ದೇಶದ್ರೋಹದ ಪೋಸ್ಟ್‌ಗಳ ಬಗ್ಗೆ ಕೇಂದ್ರದ ಗಮನ ಸೆಳೆಯಲಾಗುತ್ತದೆ.

ಎಸ್‌ಐಟಿ ತಂಡ
ಸಿಎಎ ವಿರೋಧಿ ಪ್ರತಿಭಟನೆ ವೇಳೆ ನಡೆದಿರುವ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರಕಾರವು ಹೆಚ್ಚುವರಿ ತನಿಖೆ ನಡೆಸಲು ಚಿಕ್ಕಪೇಟೆ ಎಸಿಪಿ ಮಹಂತ ರೆಡ್ಡಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದೆ. ಇದರ ಒಂದು ಭಾಗ ತನಿಖೆಗಾಗಿ ಚಿಕ್ಕಮಗಳೂರಿಗೆ ತೆರಳಿದೆ.

ದೇಶದ್ರೋಹಿ ಘೋಷಣೆ ಕೂಗಿದ ಯುವತಿ ಮತ್ತು ಫ್ರೀ ಕಾಶ್ಮೀರ ಫ‌ಲಕ ಪ್ರದರ್ಶಿಸಿದ ಯುವತಿಯರ ಹೆತ್ತವರನ್ನು ಎಸ್‌ಐಟಿ ವಿಚಾರಣೆಗೆ ಒಳಪಡಿಸಲಿದೆ. ಜತೆಗೆ ಇವರಿಬ್ಬರ ಹಿಂದೆ ದೊಡ್ಡ ತಂಡವಿರುವುದು ಬಹಿರಂಗವಾಗಿದ್ದು, ಎಲ್ಲರನ್ನೂ ವಿಚಾರಣೆಗೆ ಒಳಪಡಿಸಲಾಗುತ್ತದೆ ಎಂದು ಎಸ್‌ಐಟಿ ಮೂಲಗಳು ಹೇಳಿವೆ.

ಟಾಪ್ ನ್ಯೂಸ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.