ರಥದ ಗಾಲಿಗೆ ಸಿಲುಕಿ ವ್ಯಕ್ತಿ ಸಾವು : ನಾರದಮುನಿ ರಥೋತ್ಸವದ ವೇಳೆ ನಡೆದ ಘಟನೆ
Team Udayavani, Apr 21, 2022, 7:44 PM IST
ಹರಪನಹಳ್ಳಿ: ರಥೋತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲೂಕಿನ ಚಿಗಟೇರಿ ಗ್ರಾಮದಲ್ಲಿ ಗುರುವಾರ ಸಂಜೆ ನಡೆದ ಶ್ರೀ ನಾರದಮುನಿ ರಥೋತ್ಸವ ಸಂದರ್ಭದಲ್ಲಿ ಜರುಗಿದೆ.
ಸುರೇಶ ಬಿ.(42) ಸಾವನ್ನಪ್ಪಿದ ಭಕ್ತ, ದಾವಣಗೆರೆಯ ಮಹೇಂದ್ರ ಶೋ ರೂಂ ನಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಸುರೇಶ ಅವರು ಕುಟುಂಬ ಸಮೇತರಾಗಿ ನಾರದಮುನಿ ರಥೋತ್ಸವಕ್ಕೆ ತಾಲೂಕಿನ ಚಿಗಟೇರಿ ಗ್ರಾಮಕ್ಕೆ ಬೆಳಿಗ್ಗೆ 11 ಗಂಟೆಗೆ ಬಂದಿದ್ದರು.
ಗ್ರಾಮದ ಹೊಂಡದ ಬಳಿ ಪತ್ನಿಯನ್ನು ಬಿಟ್ಟು ತಂದೆ ಹಾಗೂ ಮಗ ರಥದ ಬಳಿ ಆಗಮಿಸಿದ್ದಾರೆ. ಸಂಜೆ 4.30ಕ್ಕೆ ರಥ ಎಳೆದಾಗ ಕೇವಲ 5-6 ಅಡಿ ರಥ ಚಲಿಸಿದಾಗ ಬಾಳೆ ಹಣ್ಣಿನ ಸಿಪ್ಪೆ ತುಳಿದು ಜಾರಿ ಬಿದ್ದ ಸುರೇಶ ರಥದ ಗಾಲಿಗೆ ಸಿಲುಕಿ ಸಾವನ್ನಪ್ಪಿದ್ದಾನೆ.
ತಂದೆಯ ಜೊತೆ ಮಗನು ಸಹ ಕೆಳಕ್ಕೆ ಬಿದ್ದಾಗ ತಕ್ಷಣ ಪೋಲೀಸರು ಹಾಗೂ ಜನರು ಮಗನನ್ನು ಮೇಲಕ್ಕೆತ್ತಿದ್ದಾರೆ ಪರಿಣಾಮ ಮಗ ಪ್ರಾಣಪಾಯದಿಂದ ಪಾರಾಗಿದ್ದಾನೆ. ಮೃತ ಸುರೇಶನ ಶವವನ್ನು ಹರಪನಹಳ್ಳಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆಸಿದ್ದಾರೆ, ಈ ಸಂಬಂಧ ಚಿಗಟೇರಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಕುಳಗೇರಿಯಲ್ಲಿ ಬಿರುಗಾಳಿ ಮಳೆಗೆ ಧರೆಗುರುಳಿದ ಮರ… ಜನಜೀವನ ತತ್ತರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
Yugadi: ಯುಗಾದಿ
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ