ಹೊಟೇಲ್‌ ಮಾಲಕನ ಶವವನ್ನು ಬ್ಯಾಗ್‌ನಲ್ಲಿ ಸಾಗಿಸಿದ ಪ್ರಕರಣ: ಯುವತಿ ಸಹಿತ ನಾಲ್ವರು ವಶಕ್ಕೆ


Team Udayavani, May 28, 2023, 7:20 AM IST

police siren

ಕಾಸರಗೋಡು: ಕಲ್ಲಿಕೋಟೆ ಒಳವಣ್ಣದಲ್ಲಿ ಹೊಟೇಲ್‌ ನಡೆಸುತ್ತಿರುವ ಮಲಪ್ಪುರಂ ತಿರೂರ್‌ ನಿವಾಸಿಯನ್ನು ಕೊಂದು ಮೃತದೇಹವನ್ನು ತುಂಡರಿಸಿ ಎರಡು ಟ್ರೋಲಿ ಬ್ಯಾಗ್‌ನಲ್ಲಿ ತುಂಬಿಸಿ ಕಂದಕಕ್ಕೆ ಎಸೆದ ಘಟನೆ ನಡೆದಿದೆ. ಈ ಸಂಬಂಧ 18ರ ಹರೆಯದ ಯುವತಿ ಸಹಿತ ನಾಲ್ವರನ್ನು ಚೆನ್ನೈಯಿಂದ ಮಲಪ್ಪುರಂ ಪೊಲೀಸರು ಬಂಧಿಸಿದ್ದಾರೆ.
ಮಲಪ್ಪುರಂ ಜಿಲ್ಲೆಯ ತಿರೂರ್‌ ವಾಳೂರು ನಿವಾಸಿ ಮುಚ್ಚೇರಿ ಸಿದ್ದಿಕ್‌ (58) ಕೊಲೆಗೀಡಾದವರು. ಪಾಲ್ಗಾಟ್‌ ಪೆರ್ಲಶೆರಿಯ ಶಿಬಿಲಿ (22), ಫರ್ಹಾನಾ (18) ಹಾಗೂ ಫರ್‌ಹಾನಳ ಸಹೋದರ ಗಫೂರ್‌ ಮತ್ತು ಆಶಿಕ್‌ ಬಂಧಿತರು.

ಮೃತದೇಹವನ್ನು ತುಂಡರಿಸಿ ತುಂಬಿಸಿ ಎಸೆಯಲಾದ ಟ್ರೋಲಿ ಬ್ಯಾಗ್‌ಗಳನ್ನು ಅಗ್ನಿಶಾಮಕ ದಳದ ಸಹಾಯದಿಂದ ಅಟ್ಟಪ್ಪಾಡಿ 9ನೇ ತಿರುವಿನ ಕಂದಕದಲ್ಲಿರುವ ನೀರಿನ ತೊರೆಯಿಂದ ಪೊಲೀಸರು ಮೇಲಕ್ಕೆತ್ತಿದ್ದಾರೆ.

ಪ್ರಕರಣದ ಹಿನ್ನೆಲೆ
ಮೇ 18 ರಂದು ಕಲ್ಲಿಕೋಟೆಯ ಡಿ ಕಾಸ್‌ ಇನ್‌ ಎಂಬ ಹೆಸರಿನ ಹೊಟೇಲ್‌ನಲ್ಲಿ ಆರೋಪಿಗಳು ಬಾಡಿಗೆಗೆ ಕೊಠಡಿ ಪಡೆದಿದ್ದರು. ಅದೇ ವಸತಿಗೃಹದಲ್ಲಿ ಕೊಲೆಯಾದ ಸಿದ್ದಿಕ್‌ ಕೂಡ ಎರಡು ಕೊಠಡಿಗಳನ್ನು ಬಾಡಿಗೆಗೆ ಪಡೆದುಕೊಂಡಿದ್ದರು. ಆ ಕೊಠಡಿಯಲ್ಲೇ ಸಿದ್ದಿಕ್‌ ಮತ್ತು ಆರೋಪಿಗಳು ತಂಗಿದ್ದರೆಂದೂ ತನಿಖೆಯಲ್ಲಿ ಸ್ಪಷ್ಟಗೊಂಡಿದೆಯೆಂದು ಪೊಲೀಸರು ತಿಳಿಸಿದ್ದಾರೆ. ಇಲ್ಲೇ ಸಿದ್ದಿಕ್‌ ಅವರನ್ನು ಕೊಂದು ಮೃತದೇಹವನ್ನು ಎರಡು ಟ್ರೋಲಿ ಬ್ಯಾಗ್‌ಗಳಲ್ಲಿ ತುಂಬಿಸಿ ಮೇ 19ರಂದು ಅಟ್ಟಪ್ಪಾಡಿಗೆ ಸಾಗಿಸಿ ಕಂದಕಕ್ಕೆ ಎಸೆದಿದ್ದಾರೆ. ಮೃತದೇಹವನ್ನು ತುಂಡರಿಸಲು ಎಲೆಕ್ಟ್ರಿಕ್‌ ಕಟ್ಟರನ್ನು ಬಳಸಲಾಗಿತ್ತೆಂದು ತನಿಖೆಯಿಂದ ತಿಳಿದು ಬಂದಿದೆ. ಮೃತದೇಹವನ್ನು ಸಾಗಿಸುತ್ತಿರುವ ದೃಶ್ಯಗಳು ಹೊಟೇಲ್‌ ಪರಿಸರದ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಅದನ್ನು ಪೊಲೀಸರು ಸಂಗ್ರಹಿಸಿದ್ದಾರೆ.

ಅಟ್ಟಪ್ಪಾಡಿಯಿಂದ ಆರೋಪಿಗಳು ಆ ಬಳಿಕ ಚೆನ್ನೈಗೆ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಮೇ 24ರಂದು ಸಿದ್ದಿಕ್‌ ನಾಪತ್ತೆಯಾಗಿರುವುದಾಗಿ ಅವರ ಪುತ್ರ ಪೊಲೀಸರಿಗೆ ದೂರು ನೀಡಿದ್ದರು. ಅವರ ಮೊಬೈಲ್‌ ಫೋನ್‌ ಅಂದಿನಿಂದಲೇ ಸ್ವಿಚ್‌ ಆಫ್‌ ಆಗಿತ್ತು. ಅವರ ಎಟಿಎಂ ಕಾರ್ಡ್‌ ಬಳಸಿ 2 ಲಕ್ಷ ರೂಪಾಯಿ ಹಿಂಪಡೆಯಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿತ್ತು. ಕೊಲೆಯಾದ ಸಿದ್ದಿಕ್‌ ಕೊನೆಯ ಬಾರಿ ತನ್ನ ಮೊಬೈಲ್‌ನಲ್ಲಿ ಮಾತನಾಡಿದ್ದು ಕಲ್ಲಿಕೋಟೆಯಿಂದ ಆಗಿದೆಯೆಂದು ಸೈಬರ್‌ ಸೆಲ್‌ನ ಸಹಾಯದಿಂದ ಪೊಲೀಸರು ಪತ್ತೆಹಚ್ಚಿದ್ದಾರೆ. ಅದರ ಜಾಡು ಹಿಡಿದು ಕಲ್ಲಿಕೋಟೆಗೆ ಸಾಗಿ ನಡೆಸಿದ ತನಿಖೆಯಲ್ಲಿ ಈ ಕೊಲೆ ಪ್ರಕರಣ ಬಯಲಾಗಿದೆ.

ಟಾಪ್ ನ್ಯೂಸ್

3-bangalore

Couples: ಲಿವಿಂಗ್‌ ಟುಗೆದರ್‌ನಲ್ಲಿದ್ದ ಮುಸ್ಲಿಂ ಯುವಕನಿಂದ ಯುವತಿಗೆ ವಂಚನೆ

Pakistan: ಪಾಕಿಸ್ತಾನದಲ್ಲಿ ಪ್ರಬಲ ಬಾಂಬ್ ಸ್ಫೋಟ; 34 ಮಂದಿ ಮೃತ್ಯು, 100ಕ್ಕೂ ಹೆಚ್ಚು ಗಾಯ

Pakistan: ಪಾಕಿಸ್ತಾನದಲ್ಲಿ ಪ್ರಬಲ ಬಾಂಬ್ ಸ್ಫೋಟ; 34 ಮಂದಿ ಮೃತ್ಯು, 100ಕ್ಕೂ ಹೆಚ್ಚು ಗಾಯ

Cauvery issue; Vatal Nagaraj calls for KRS siege

Cauvery issue; ಕೆಆರ್ ಎಸ್ ಮುತ್ತಿಗೆಗೆ ವಾಟಾಳ್ ನಾಗರಾಜ್ ಕರೆ

Rain;ಉಡುಪಿ, ಉ.ಕ ಜಿಲ್ಲೆಗೆ ಆರೆಂಜ್, ದ.ಕ‌ ಜಿಲ್ಲೆಗೆ ಯೆಲ್ಲೊ ಅಲರ್ಟ್; ‌ಭಾರಿ ಮಳೆ ಸಾಧ್ಯತೆ

Rain;ಉಡುಪಿ, ಉ.ಕ ಜಿಲ್ಲೆಗೆ ಆರೆಂಜ್, ದ.ಕ‌ ಜಿಲ್ಲೆಗೆ ಯೆಲ್ಲೊ ಅಲರ್ಟ್; ‌ಭಾರಿ ಮಳೆ ಸಾಧ್ಯತೆ

ನಮ್ಮ ಕೆಲಸಗಳಿಂದ ಮತ್ತೊಬ್ಬರ ಕೆಡುಕಿಗೆ ಕಾರಣವಾಗದಂತೆ ನೋಡಿಕೊಳ್ಳಬೇಕು: ಪೇಜಾವರ ಶ್ರೀ

Chaturmasya: ನಿತ್ಯ ಜೀವನದಲ್ಲಿ ರಾಮನಾಮ ಸ್ಮರಣೆ ಮಾಡಿದರೆ ಜೀವನ ಪಾವನ: ಪೇಜಾವರ ಶ್ರೀ

Election: ಅನಂತಕುಮಾರ ಹೆಗಡೆ ಅವರೇ ಉತ್ತರ ಕನ್ನಡದ ಬಿಜೆಪಿ ಅಭ್ಯರ್ಥಿ: ಕಾಗೇರಿ

Election: ಅನಂತಕುಮಾರ ಹೆಗಡೆ ಅವರೇ ಉತ್ತರ ಕನ್ನಡದ ಬಿಜೆಪಿ ಅಭ್ಯರ್ಥಿ: ಕಾಗೇರಿ

Yash 19; ರಾಜ್ಯೋತ್ಸವಕ್ಕೆ ಯಶ್‌ ಹೊಸ ಚಿತ್ರ ಘೋಷಣೆ?

Yash 19; ರಾಜ್ಯೋತ್ಸವಕ್ಕೆ ಯಶ್‌ ಹೊಸ ಚಿತ್ರ ಘೋಷಣೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ತಲೆಗೆ ಗಂಭೀರ ಏಟಿನಿಂದ ಸಾವು: ಅಳಿಯನ ಬಂಧಿಸಿದ ಪೊಲೀಸರು

Kasaragod ತಲೆಗೆ ಗಂಭೀರ ಏಟಿನಿಂದ ಸಾವು: ಅಳಿಯನ ಬಂಧಿಸಿದ ಪೊಲೀಸರು

eleElephant Attack :ಹಾಲು ತರಲು ತೆರಳುತ್ತಿದ್ದ ವೃದ್ಧನ ಮೇಲೆ ಕಾಡಾನೆ ದಾಳಿ

Elephant Attack :ಹಾಲು ತರಲು ತೆರಳುತ್ತಿದ್ದ ವೃದ್ಧನ ಮೇಲೆ ಕಾಡಾನೆ ದಾಳಿ

Untitled-1

Missing Case ಅಣ್ಣ ತಂಗಿಯರ ಪುತ್ರಿಯರು ನಾಪತ್ತೆ

UDKasaragod ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರು: ಗಾಯ

Kasaragod ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರು: ಗಾಯ

Kasaragod ಅಕ್ರಮ ಮರಳುಗಾರಿಕೆ: 4 ಕೇಂದ್ರಗಳು ನೆಲಸಮ

Kasaragod ಅಕ್ರಮ ಮರಳುಗಾರಿಕೆ: 4 ಕೇಂದ್ರಗಳು ನೆಲಸಮ

MUST WATCH

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

ಹೊಸ ಸೇರ್ಪಡೆ

araga jnanendra reacts to cauvery issue

Cauvery issue; ಕಾಂಗ್ರೆಸ್ ಗೆ ರಾಜ್ಯದ ಜನರ ಹಿತ ಮುಖ್ಯವಲ್ಲ: ಆರಗ ಟೀಕೆ

3-bangalore

Couples: ಲಿವಿಂಗ್‌ ಟುಗೆದರ್‌ನಲ್ಲಿದ್ದ ಮುಸ್ಲಿಂ ಯುವಕನಿಂದ ಯುವತಿಗೆ ವಂಚನೆ

2-chikkodi

Belagavi: ಶೆಫರ್ಡ ಇಂಡಿಯಾ ಇಂಟರ್‌ನ್ಯಾಷನಲ್ ಸಮಾವೇಶಕ್ಕೆ 1.50 ಲಕ್ಷ ಜನ ಸೇರುವ ನಿರೀಕ್ಷೆ

Pakistan: ಪಾಕಿಸ್ತಾನದಲ್ಲಿ ಪ್ರಬಲ ಬಾಂಬ್ ಸ್ಫೋಟ; 34 ಮಂದಿ ಮೃತ್ಯು, 100ಕ್ಕೂ ಹೆಚ್ಚು ಗಾಯ

Pakistan: ಪಾಕಿಸ್ತಾನದಲ್ಲಿ ಪ್ರಬಲ ಬಾಂಬ್ ಸ್ಫೋಟ; 34 ಮಂದಿ ಮೃತ್ಯು, 100ಕ್ಕೂ ಹೆಚ್ಚು ಗಾಯ

Cauvery issue; Vatal Nagaraj calls for KRS siege

Cauvery issue; ಕೆಆರ್ ಎಸ್ ಮುತ್ತಿಗೆಗೆ ವಾಟಾಳ್ ನಾಗರಾಜ್ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.