ಕೋವಿಡ್ ನಿರ್ವಹಣೆಗೆ ಕರಾವಳಿ ಶಾಸಕರು ಹೇಗೆ ಸಿದ್ಧರಾಗಿದ್ದಾರೆ ?


Team Udayavani, May 14, 2021, 6:40 AM IST

ಕೋವಿಡ್ ನಿರ್ವಹಣೆಗೆ ಕರಾವಳಿ ಶಾಸಕರು ಹೇಗೆ ಸಿದ್ಧರಾಗಿದ್ದಾರೆ ?

ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ವಿಷಮ ಪರಿಸ್ಥಿತಿ ಉದ್ಭವಿಸಿದರೆ ನಿಭಾಯಿಸುವುದು ಹೇಗೆಂಬ ಜನಸಾಮಾನ್ಯರ ಪ್ರಶ್ನೆ ಸಹಜವಾದದ್ದೇ. ಈ ಹಿನ್ನೆಲೆಯಲ್ಲಿ ಉಭಯ ಜಿಲ್ಲೆಗಳ ಶಾಸಕರು ತಾವು ನಡೆಸಿರುವ ಪೂರ್ವ ಸಿದ್ಧತೆಯನ್ನು ಈ ಮಾತುಕತೆಯಲ್ಲಿ ವಿವರಿಸಿದ್ದಾರೆ.

ಡಿ. ವೇದವ್ಯಾಸ್‌ ಕಾಮತ್‌, ಶಾಸಕರು, ಮಂಗಳೂರು ದಕ್ಷಿಣ ವಿ.ಸಭಾ ಕ್ಷೇತ್ರ :

1. ನಿಮ್ಮ ಕ್ಷೇತ್ರದಲ್ಲಿ ಕೋವಿಡ್‌ 19ರ ವಿಷಮ ಪರಿಸ್ಥಿತಿ ನಿಭಾವಣೆಗೆ ಪೂರ್ವಸಿದ್ಧತೆ ಹೇಗೆ ನಡೆದಿದೆ?

– ಮಂಗಳೂರು ವ್ಯಾಪ್ತಿಯಲ್ಲಿಯೇ ಹೆಚ್ಚು ಪ್ರಕರಣ ಇರುವ ಕಾರಣ ಆಸ್ಪತ್ರೆಗಳಲ್ಲಿ ಆಕ್ಸಿಜನ್‌, ವೆಂಟಿಲೇಟರ್‌ ಕೊರತೆ ಆಗದಂತೆ ಎಚ್ಚರ ವಹಿಸ ಲಾಗಿದೆ. ಪಾಲಿಕೆ ವ್ಯಾಪ್ತಿಯ 38 ವಾರ್ಡ್‌ಗಳ ವ್ಯಾಪ್ತಿಯಲ್ಲಿ ನೋಡಲ್‌ ಅಧಿಕಾರಿಗಳನ್ನು ಸೇರಿಸಿ ಟಾಸ್ಕ್ಪೋರ್ಸ್‌ ರಚಿಸಲಾಗಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಸಂಸದರ ವಾರ್‌ರೂಂ ನ ಉಸ್ತುವಾರಿ ನನಗೇ ವಹಿಸ ಲಾಗಿದೆ. ಹೀಗಾಗಿ ಪ್ರತ್ಯೇಕ ವಾರ್‌ರೂಂ ಮಾಡಿಲ್ಲ. ಆಕ್ಸಿಜನ್‌, ಬೆಡ್‌, ಆ್ಯಂಬುಲೆನ್ಸ್‌ ಎಲ್ಲವನ್ನೂ ಸಮಸ್ಯೆಯಾಗದಂತೆ ನಿಭಾಯಿಸಲಾಗುತ್ತಿದೆ.

2. ಜಿಲ್ಲಾಡಳಿತ, ತಾಲೂಕು ಆಡಳಿತ ಹೊರತು ಪಡಿಸಿ ದಂತೆ ಸ್ಥಳೀಯರನ್ನು ಒಗ್ಗೂಡಿಸಿ ಪರ್ಯಾಯ ವ್ಯವಸ್ಥೆ (ಪ್ಲ್ರಾನ್‌ ಬಿ) ರೂಪಿಸಿದ್ದೀರಾ?

ವೆನಾÉಕ್‌ ಆಸ್ಪತ್ರೆಯಲ್ಲಿ ಎಂಆರ್‌ಪಿಎಲ್‌ ವತಿಯಿಂದ ಪ್ರತೀದಿನ 7 ಸಾವಿರ ಲೀ. ಸಾಮರ್ಥಯದ (192 ಜಂಬೋ ಸಿಲಿಂಡರ್‌) ಆಕ್ಸಿಜನ್‌ ಘಟಕ ನಿರ್ಮಾಣ ಆರಂಭಿಸಲಾಗಿದೆ. ಎಂಸಿಎಫ್‌ ವತಿಯಿಂದ ತಲಾ 80 ಲೀಟರ್‌ ಸಾಮರ್ಥಯದ (ತಲಾ 17 ಜಂಬೋ ಸಿಲಿಂಡರ್‌)ಘಟಕ ಇಎಸ್‌ಐ ಆಸ್ಪತ್ರೆಯಲ್ಲಿ ಆರಂಭಿಸಲಾಗುತ್ತಿದೆ.

3. ಸೋಂಕು ಹರಡದಂತೆ ಜನರಲ್ಲಿ ಜಾಗೃತಿ ಮೂಡಿ ಸುವ ಕೆಲಸವನ್ನು ಹೇಗೆ ಮಾಡುತ್ತಿದ್ದೀರಿ? ಖುದ್ದಾಗಿ ವಿಶೇಷ ಕ್ರಮಗಳನ್ನು ಕೈಗೊಂಡಿದ್ದೀರಾ?

ಪ್ರತೀದಿನ ನಾನು ವಾರ್‌ರೂಂನಲ್ಲೇ ಇದ್ದು ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದೇನೆ. ಕೊರೊನಾ ಚಿಕಿತ್ಸೆ ನೀಡುತ್ತಿರುವ ವೈದ್ಯರು, ದಾದಿಯ ರಿಗೆ ಪ್ರೇರಣಾದಾಯಕ ಕೌನ್ಸಿಲಿಂಗ್‌ ಅನ್ನು ಕಲ್ಪಿಸಲಾಗುತ್ತಿದೆ. ವಾರ್ಡ್‌ ಮಟ್ಟದ ಪಕ್ಷದ ಕಾರ್ಯಕರ್ತರ ಜತೆಗೆ ವಾರದಲ್ಲಿ ಕನಿಷ್ಠ 1 ಬಾರಿ ಚರ್ಚಿಸಿ ಜನಜಾಗೃತಿಗೆ ಪ್ರಯತ್ನಿಸಲಾಗುತ್ತಿದೆ.

4. ಪ್ರತಿ ಜಿಲ್ಲೆಯಲ್ಲೂ ಸಾಮಾನ್ಯವಾಗಿ ಕೇಳಿ ಬರು ತ್ತಿರುವ ಸಮಸ್ಯೆ ಆಕ್ಸಿಜನ್‌ ಕೊರತೆ, ಹಾಸಿಗೆಗಳ ಕೊರತೆ- ನಿಮ್ಮಲ್ಲಿ ಯಾವ ಕ್ರಮ ಕೈಗೊಂಡಿದ್ದೀರಿ?

ಕ್ಷೇತ್ರ ವ್ಯಾಪ್ತಿಯಲ್ಲಿ ಬಹುಮುಖ್ಯ ಆಸ್ಪತ್ರೆಗಳು ಇರುವ ಕಾರಣದಿಂದ ಜಿಲ್ಲೆ-ಹೊರಜಿಲ್ಲೆಯಿಂದಲೂ ಇಲ್ಲಿಗೆ ರೋಗಿಗಳು ಬರುತ್ತಾರೆ. ಆದರೆ, ಕ್ಷೇತ್ರದ ಜನರಿಗೆ ಸಮಸ್ಯೆ ಆಗದಂತೆ ವಾರ್‌ರೂಂನಲ್ಲಿ ಪ್ರತ್ಯೇಕ ತಂಡ ರಚಿಸಲಾಗಿದೆ. ಬಳ್ಳಾರಿ ಹಾಗೂ ವಿದೇಶದಿಂದ ರೆಡ್‌ಕ್ರಾಸ್‌ ಮುಖೇನ ಆಕ್ಸಿಜನ್‌ ತರಿಸಿದ್ದು, ಸದ್ಯ ಕೊರತೆ ಇಲ್ಲ. ವೆನಾÉಕ್‌ನಲ್ಲಿ 350 ಬೆಡ್‌ಗಳಿದ್ದು, 50 ಹೆಚ್ಚುವರಿ ವೆಂಟಿಲೇಟರ್‌ ಜೋಡಿಸಲಾಗುತ್ತಿದೆ. ನಗರದ 17 ಖಾಸಗಿ ಆಸ್ಪತ್ರೆಯ ಶೇ.50ರಷ್ಟು ಬೆಡ್‌ಗಳನ್ನು ಪಡೆಯಲಾಗುತ್ತಿದೆ. ಡಾ|ಎಂ.ಎನ್‌.ರಾಜೇಂದ್ರ ಕುಮಾರ್‌ ಅವರ ನೇತೃತ್ವದಲ್ಲಿ 50 ಬೆಡ್‌ಗಳ ಕೋವಿಡ್‌ ಸೆಂಟರ್‌ ಆರಂಭಿಸಲಾಗುತ್ತಿದೆ. ಇಎಸ್‌ಐ ಆಸ್ಪತ್ರೆಯಲ್ಲಿ 75 ಹಾಸಿಗೆಗಳ ಕೇರ್‌ ಸೆಂಟರ್‌ ಸಿದ್ಧಗೊಂಡಿದೆ. ಮೊರಾರ್ಜಿ ದೇಸಾಯಿ ಶಾಲೆಯನ್ನೂ ಕೇರ್‌ ಸೆಂಟರ್‌ ಆಗಿ ಬಳಸಲಾಗುತ್ತಿದೆ.

5. ಲಾಕ್‌ಡೌನ್‌ ಹಿನ್ನೆಲೆಯಲ್ಲಿ ನಿಮ್ಮ ಕ್ಷೇತ್ರದಲ್ಲಿ ಸಂಕಷ್ಟಕ್ಕೀಡಾಗಿರುವ ಬಡ ಕುಟುಂಬಗಳು/ಕೂಲಿ ಕಾರ್ಮಿಕರ ನೆರವಿಗೆ ಏನು ಮಾಡುತ್ತಿದ್ದೀರಿ?

ಸೇವಾಂಜಲಿ, ಕಾಸ್‌, ವಿ ಆರ್‌ ಯುನೈಟೆಡ್‌, ಬಿರುವೆರ್‌ ಕುಡ್ಲ ಸೇರಿ ದಂತೆ ಹಲವು ಸಂಘಟನೆಯವರು ನಗರದ ನಿರ್ವಸಿತರಿಗೆ, ಬಡ ವರಿಗೆ ಆಹಾರ ನೀಡುತ್ತಿದ್ದಾರೆ. ವಿಹಿಂಪ, ಬಜರಂಗದಳದ ನೆರವೂ ಲಭ್ಯವಿದೆ.

6. ಕ್ಷೇತ್ರದ ಯುವ/ಸಮು ದಾಯ ಸಂಘಟನೆ ಗಳನ್ನು ಕಠಿನ ಪರಿಸ್ಥಿತಿಗೆ ಸಜ್ಜುಗೊಳಿಸಿದ್ದೀರಾ?

ಲಸಿಕೆ ವಿತರಣೆಯನ್ನು ಸುಸೂತ್ರವಾಗಿ ನಡೆಸಲು ನನ್ನ ಕ್ಷೇತ್ರ ವ್ಯಾಪ್ತಿಯ ವಿವಿಧ ಸಂಘ ಸಂಸ್ಥೆಯವರನ್ನು ವಿಶೇಷ ನೆಲೆಯಲ್ಲಿ ಬಳಸಿಕೊಳ್ಳಲು ಉದ್ದೇ ಶಿಸಲಾಗಿದೆ. ಹಾಗೂ ಕೊರೊನಾದಿಂದ ಮೃತಪಟ್ಟವರ ಅಂತ್ಯಸಂಸ್ಕಾರವನ್ನು ಗೌರವಯುತವಾಗಿ ನಡೆಸಲು ಯುವ ಪಡೆಯನ್ನು ಸಿದ್ಧಗೊಳಿಸಲಾಗಿದೆ.

7. ಜನರು ಕೊರೊನಾ ಸಂಕಷ್ಟ ಸಂಬಂಧ ಯಾವು ದೇ ಕ್ಷಣದಲ್ಲಿ ನಿಮ್ಮನ್ನು ಸಂಪರ್ಕಿಸ ಬಹುದೇ?

ಸಂಪರ್ಕ: 8904177609/ 9901925909
***
ಬಿ.ಎಂ. ಸುಕುಮಾರ್‌ ಶೆಟ್ಟಿ, ಬೈಂದೂರು ಶಾಸಕ :

1. ನಿಮ್ಮ ಕ್ಷೇತ್ರದಲ್ಲಿ ಕೋವಿಡ್‌ 19ರ ವಿಷಮ ಪರಿಸ್ಥಿತಿ ನಿಭಾವಣೆಗೆ ಪೂರ್ವಸಿದ್ಧತೆ ಹೇಗೆ ನಡೆದಿದೆ?

ಕ್ಷೇತ್ರ ವ್ಯಾಪ್ತಿಯಲ್ಲಿ ಎಪ್ರಿಲ್‌ನಲ್ಲೇ ಕೋವಿಡ್‌-19 ನಿಯಂತ್ರಣ ಕೇಂದ್ರ ವನ್ನು ಆರಂಭಿಸಲಾಗಿದೆ. ಎಲ್ಲ ತಂಡಗಳು ಬೆಡ್‌ ಅಗತ್ಯ ಇರುವವರಿಗೆ, ತುರ್ತು ಆಕ್ಸಿಜನ್‌ ಬೆಡ್‌ ಬೇಕಾದವರಿಗೆ ವ್ಯವಸ್ಥೆ ಕಲ್ಪಿಸುತ್ತಿವೆ. ಮುಖ್ಯವಾಗಿ ಹೋಮ್‌ ಐಸೋಲೇಷನ್‌ನಲ್ಲಿರುವವರು ಹಾಗೂ ಅವರ ಕುಟುಂಬದ ಬಗ್ಗೆ ಗಮನ ಹರಿಸಲಾಗುತ್ತಿದೆ. ಬೈಂದೂರು ಸಮುದಾಯ ಆರೋಗ್ಯ ಕೇಂದ್ರ ಹಾಗೂ 15 ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ, ಅಲ್ಲಿನ ಸೌಕರ್ಯ ಹಾಗೂ ಸಿಬಂದಿ ಸಮಸ್ಯೆಯನ್ನು ಆಲಿಸಿ, ತುರ್ತು ಅಗತ್ಯಗಳನ್ನು ಈಡೇರಿಸಲು ಕ್ರಮಕೈಗೊಂಡಿರುವೆ.

2. ಜಿಲ್ಲಾಡಳಿತ, ತಾಲೂಕು ಆಡಳಿತ ಹೊರತು ಪಡಿಸಿ ದಂತೆ ಸ್ಥಳೀಯರನ್ನು ಒಗ್ಗೂಡಿಸಿ ಪರ್ಯಾಯ ವ್ಯವಸ್ಥೆ (ಪ್ಲ್ರಾನ್‌ ಬಿ) ರೂಪಿಸಿದ್ದೀರಾ?

ಈಗಾಗಲೇ ಕ್ಷೇತ್ರ¨ 41 ಗ್ರಾ.ಪಂ.ಗಳಲ್ಲೂ ಗ್ರಾಮೀಣ ಕಾರ್ಯಪಡೆ ಹಾಗೂ ವಾರ್ಡ್‌ವಾರು ಸಮಿತಿಯನ್ನು ರಚಿಸಲಾಗಿದೆ. ಎಲ್ಲ 41 ಗ್ರಾ.ಪಂ. ಅಧ್ಯಕ್ಷರು ಹಾಗೂ ಪಿಡಿಒಗಳೊಂದಿಗೆ ಸಭೆ ನಡೆಸಿದ್ದೇನೆ. ಈವರೆಗೆ ಸಂಸದರ ನೇತೃತ್ವದಲ್ಲಿ ಒಂದು ಸಭೆ ಹಾಗೂ ನಾನು 3 ಸಭೆಯನ್ನು ಮಾಡಿ ಸೋಂಕು ನಿಯಂತ್ರಣಕ್ಕೆ ಕ್ರಮಗಳನ್ನು ವಿವರಿಸಿದ್ದೇನೆ. ಸಂಘಟನೆಗಳ, ಪಕ್ಷದ ಕಾರ್ಯಕರ್ತರ‌ ಕೆಲ ತಂಡಗಳು ಜನರ ಸಮಸ್ಯೆಗೆ ಸ್ಪಂದಿಸುತ್ತಿವೆ.

3. ಸೋಂಕು ಹರಡದಂತೆ ಜನರಲ್ಲಿ ಜಾಗೃತಿ ಮೂಡಿ ಸುವ ಕೆಲಸವನ್ನು ಹೇಗೆ ಮಾಡುತ್ತಿದ್ದೀರಿ? ಖುದ್ದಾಗಿ ವಿಶೇಷ ಕ್ರಮಗಳನ್ನು ಕೈಗೊಂಡಿದ್ದೀರಾ?

ಮಾಸ್ಕ್ ಧರಿಸುವ ಕುರಿತಂತೆ, ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡುವಂತೆ ಜನತೆಗೆ ಅರಿವು ಮೂಡಿಸಲಾಗಿದೆ. ಸಾಮಾಜಿಕ ಜಾಲತಾಣಗಳ ಮೂಲಕವೂ ಸಂದೇಶಗಳನ್ನು ಬಿತ್ತರಿಸಲಾಗಿದೆ. ಮದುವೆ, ಮತ್ತಿತರ ಕಾರ್ಯಕ್ರಮಗಳನ್ನು ಮುಂದೂಡಲು ಜನರನ್ನು ಕೋರಿರುವೆ. ಹೆಚ್ಚು ಸೋಂಕು ಇರುವೆಡೆ ಹೆಚ್ಚು ನಿಗಾ ವಹಿಸಲಾಗಿದೆ.

4. ಪ್ರತಿ ಜಿಲ್ಲೆಯಲ್ಲೂ ಸಾಮಾನ್ಯವಾಗಿ ಕೇಳಿ ಬರು ತ್ತಿರುವ ಸಮಸ್ಯೆ ಆಕ್ಸಿಜನ್‌ ಕೊರತೆ, ಹಾಸಿಗೆಗಳ ಕೊರತೆ- ನಿಮ್ಮಲ್ಲಿ ಯಾವ ಕ್ರಮ ಕೈಗೊಂಡಿದ್ದೀರಿ?

ಜಿಲ್ಲೆಯಲ್ಲಿ ಅಗತ್ಯವಿರುವಷ್ಟು ಆಕ್ಸಿಜನ್‌ ಲಭ್ಯವಿದೆ. ಸಂಸದ ಬಿ.ವೈ. ರಾಘವೇಂದ್ರ ಅವರ ಸಹಕಾರದಿಂದ ಬೈಂದೂರಿನ ಸಮುದಾಯ ಆರೋಗ್ಯ ಕೇಂದ್ರಕ್ಕೆ 390 ಎಲ್‌ಪಿಎಂ ಸಾಮರ್ಥ್ಯದ ಆನ್‌ಸೈಟ್‌ ಆಕ್ಸಿಜನ್‌ ಪ್ಲಾÂಂಟ್‌ ಮಂಜೂರಾಗಿದ್ದು, ತಿಂಗಳೊಳಗೆ ಕಾರ್ಯಾರಂಭ ಮಾಡಲಿದೆ. ಪ್ರತಿ ನಿತ್ಯ 80 ಸಿಲಿಂಡರ್‌ ಮೆಡಿಕಲ್‌ ಆಕ್ಸಿಜನ್‌ ಉತ್ಪಾದನೆಯಾಗಲಿದೆ. ಸಮುದಾಯ ಆರೋಗ್ಯ ಕೇಂದ್ರದಲ್ಲಿ 30 ಬೆಡ್‌ಗಳಿದ್ದು, ಇದರಲ್ಲಿ 15 ಬೆಡ್‌ ಮೀಸಲಿರಿಸಲಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ತಲಾ 6 ಬೆಡ್‌ಗಳಿವೆ. ಯಾರೂ ಸಹ ಆತಂಕ ಪಟ್ಟುಕೊಳ್ಳುವ ಅಗತ್ಯವಿಲ್ಲ.

5. ಲಾಕ್‌ಡೌನ್‌ ಹಿನ್ನೆಲೆಯಲ್ಲಿ ನಿಮ್ಮ ಕ್ಷೇತ್ರದಲ್ಲಿ ಸಂಕಷ್ಟಕ್ಕೀಡಾಗಿರುವ ಬಡ ಕುಟುಂಬಗಳು/ಕೂಲಿ ಕಾರ್ಮಿಕರ ನೆರವಿಗೆ ಏನು ಮಾಡುತ್ತಿದ್ದೀರಿ?

ನಮ್ಮ ಕ್ಷೇತ್ರದ ಬಹುತೇಕ ಜನ ಕೃಷಿಕರಾಗಿದ್ದು, ಹಾಗಾಗಿ ಯಾರಿಗೂ ಈ ಬಾರಿ ಕಿಟ್‌ ವಿತರಿಸುತ್ತಿಲ್ಲ. ಆದರೆ ಪಡಿತರವನ್ನು ತ್ವರಿತಗತಿಯಲ್ಲಿ ವಿತರಿಸಲು ಸಂಬಂಧಪಟ್ಟ ಎಲ್ಲ ಅಧಿಕಾರಿಗಳಿಗೂ ಸೂಚಿಸಲಾಗಿದೆ.

6. ಕ್ಷೇತ್ರದ ಯುವ/ಸಮು ದಾಯ ಸಂಘಟನೆ ಗಳನ್ನು ಕಠಿನ ಪರಿಸ್ಥಿತಿಗೆ ಸಜ್ಜುಗೊಳಿಸಿದ್ದೀರಾ?

ಈಗಾಗಲೇ ಸಾಕಷ್ಟು ಯುವ ಸಂಘಟನೆಗಳು ಹಾಗೂ ನಮ್ಮ ಪಕ್ಷದ ವಿವಿಧ ಮೋರ್ಚಾಗಳ ವತಿಯಿಂದ ರಕ್ತದಾನ ಶಿಬಿರಗಳೂ ನಡೆದಿವೆ. ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರವನ್ನೂ ಹಲವು ಸಂಘಟ ನೆಗಳು ಮಾಡುತ್ತಿದ್ದು,ಉಚಿತವಾಗಿ ಆಂಬುಲೆನ್ಸ್‌ಗಳು ಲಭ್ಯವಾಗಿವೆ.\

7. ಜನರು ಕೊರೊನಾ ಸಂಕಷ್ಟ ಸಂಬಂಧ ಯಾವುದೇ ಕ್ಷಣದಲ್ಲಿ ನಿಮ್ಮನ್ನು ಸಂಪರ್ಕಿಸ ಬಹುದೇ?

ಸಹಾಯವಾಣಿ – 9448824119 ಆಸ್ಪತ್ರೆ ಮತ್ತು ಆಂಬುಲೆನ್ಸ್‌- 9445816707, ವೆಂಟಿಲೇಟರ್‌,ರೆಮಿxಸಿವರ್‌ – 998609987
ಆಯುಷ್ಮಾನ್‌ ಭಾರತ್‌ (ಕಾರ್ಡ್‌) – 7975887506
ಅಂತ್ಯ ಸಂಸ್ಕಾರ- 8296029677

ಟಾಪ್ ನ್ಯೂಸ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.