ದುಷ್ಟ ರಾಕ್ಷಸರು ಇಲ್ಲದಿದ್ದರೆ ದೇವರು ಪವಾಡ ತೋರಿಸುವುದು ಹೇಗೆ: ಸಿ.ಟಿ.ರವಿ
ಕಾಂತಾರ ಭಕ್ತಿ ಭಾವವನ್ನು ಗಟ್ಟಿಗೊಳಿಸುವ ಕೆಲಸ ಮಾಡಿದೆ
Team Udayavani, Oct 24, 2022, 10:46 PM IST
ಚಿಕ್ಕಮಗಳೂರು : ಮುಂಬರುವ ದಿನಗಳಲ್ಲಿ ಮಳೆ, ಬೆಳೆ ದೇಶಕ್ಕೆ ಬರುವ ಎಲ್ಲ ಆಪತ್ತುಗಳನ್ನು ನಿವಾರಣೆ ಮಾಡುವಂತೆ ಶ್ರೀ ಬಿಂಡಿಗ ದೇವೀರಮ್ಮನಲ್ಲಿ ಪಾರ್ಥಿಸಿದ್ದೇನೆ ಎಂದು ಶಾಸಕ ಸಿ.ಟಿ. ರವಿ ಹೇಳಿದರು.
ಸೋಮವಾರ ಬಿಂಡಿಗ ದೇವೀರಮ್ಮ ಬೆಟ್ಟದಲ್ಲಿ ಶ್ರೀ ದೇವೀರಮ್ಮ ದರ್ಶನ ಪಡೆದು ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರತಿ ವರ್ಷ ದೇವಿಯ ದರ್ಶನ ಪಡೆದು ಬಳಿಕ ದೇವಸ್ಥಾನಕ್ಕೆ ಹೋಗಿ ಪೂಜಾ ವಿ ಧಿ ವಿಧಾನಗಳನ್ನು ನೆರವೇರಿಸುವುದು ಈ ಭಾಗದ ವಾಡಿಕೆ. ಭಕ್ತರು ಉಪವಾಸವಿದ್ದು ದೇವಿಗೆ ಆರತಿ ಮಾಡಿದ ಬಳಿಕ ಉಪವಾಸ ತ್ಯಜಿಸುವ ಮತ್ತು ಹರಕೆ ಕಟ್ಟಿ ಬೆಟ್ಟ ಹತ್ತುವ ಪ್ರತೀತಿ ಬಹಳ ವರ್ಷಗಳಿಂದ ಇದೆ. ಅದರಂತೆ ಬಹಳ ವರ್ಷಗಳಿಂದ ಬೆಟ್ಟ ಹತ್ತುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಭಾರತ ವಿಶ್ವಗುರುವಾಗಿ ಜಗತ್ತಿಗೆ ಮಾರ್ಗದರ್ಶನ ಮಾಡಲಿ ಎಂದು ಪಾರ್ಥಿಸಿದ್ದೇನೆ ಎಂದರು.
ಕಾಂತಾರಕ್ಕೆ ಮೆಚ್ಚುಗೆ
ಕಾಂತಾರ ತುಳು ಮತ್ತು ಮಲೆನಾಡಿನ ಜಾನಪದ ದೇವತೆ-ಸಾಂಸ್ಕೃತಿಕ ಹಿನ್ನೆಲೆಯ ಚಿತ್ರವಾಗಿದ್ದು, ಸಹಜವಾಗಿ ಜನಾಕರ್ಷಣೆ ಮಾಡಿದೆ. ಪಾತ್ರಕ್ಕೆ ಜೀವ ತುಂಬಿ ಅಭಿನಯಿಸಿರುವುದರಿಂದ ಚಲನಚಿತ್ರ ಅತ್ಯುತ್ತಮವಾಗಿ ಮೂಡಿ ಬಂದಿದೆ. ದೇವರಲ್ಲಿ ಶ್ರದ್ಧೆ ಮತ್ತು ಭಕ್ತಿ ಭಾವವನ್ನು ಗಟ್ಟಿಗೊಳಿಸುವ ಕೆಲಸ ಮಾಡಿದೆ. ವಿರೋಧ ಮಾಡುವವರು ಎಲ್ಲ ಕಾಲದಲ್ಲೂ ಇದ್ದಾರೆ. ದುಷ್ಟರು, ರಾಕ್ಷಸರು ಇಲ್ಲದಿದ್ದರೆ ದೇವರು ತಮ್ಮ ಪವಾಡವನ್ನು ತೋರಿಸುವುದು ಹೇಗೆ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
MUST WATCH
ಹೊಸ ಸೇರ್ಪಡೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ