ವಿಕ್ರಂ ಲ್ಯಾಂಡರ್‌ ಸಂಪರ್ಕಕ್ಕೆ ಇಸ್ರೋ ಯತ್ನಿಸುತ್ತಿರೋದು ಹೇಗೆ?

ಸೆ.21ರ ಒಳಗೆ ಸಂಪರ್ಕ ಸಾಧ್ಯವಾಗದಿದ್ದರೆ ಆಸೆ ಕಮರಿದಂತೆ!

Team Udayavani, Sep 11, 2019, 6:19 PM IST

Vikram-Lander

ಬೆಂಗಳೂರು: ಚಂದ್ರಯಾನ 2ರ ವಿಕ್ರಂ ಲ್ಯಾಂಡರ್‌ ಚಂದ್ರನ ಮೇಲೆ ಇಳಿವಾಗ ಸಂಪರ್ಕ ತಪ್ಪಿದ್ದು ಗೊತ್ತೇ ಇದೆ. ವಿಕ್ರಂ ಲ್ಯಾಂಡರ್‌ ಇಳಿಯಲು 2.1 ಕಿ.ಮೀ. ದೂರವಿದ್ದಾಗ ಸಂಪರ್ಕ ಕಳೆದುಕೊಂಡು ಪತನವಾಗಿತ್ತು. ಆದರೆ ಅದು ಚೂರು, ಚೂರು ಆಗದಿದ್ದರಿಂದ ಇಸ್ರೋ ವಿಜ್ಞಾನಿಗಳಿಗೆ ಅದರೊಂದಿಗೆ ಮತ್ತೆ ಸಂಪರ್ಕ ಸಾಧಿಸುವ ಛಲ ಹುಟ್ಟಿತ್ತು. ವಿಕ್ರಂ ಲ್ಯಾಂಡರ್‌ನ ಆಯುಷ್ಯ ಕೇವಲ 14 ದಿನ ಆಗಿರುವುದರಿಂದ ವಿಜ್ಞಾನಿಗಳು ಸಂಪರ್ಕಕ್ಕೆ ಅವಿರತ ಯತ್ನಿಸುತ್ತಿದ್ದಾರೆ. ಈ ಯತ್ನಗಳು ಹೇಗೆ ಸಾಗಿವೆ? ಮಾಹಿತಿ ಇಲ್ಲಿದೆ.

ಸಂಪರ್ಕ ಸಾಧ್ಯವಿದೆಯೇ?
ಸೆ.21ರ ಮೊದಲು ವಿಕ್ರಂ ಲ್ಯಾಂಡರ್‌ನೊಂದಿಗೆ ಸಂಪರ್ಕ ಸಾಧಿಸಿದರೆ ಮಾತ್ರ ಫ‌ಲ. ಈಗ ವಿಕ್ರಂ ಲ್ಯಾಂಡರ್‌ ಸಂಪರ್ಕ ಸಂಪೂರ್ಣ ಕಡಿತಗೊಂಡಿದ್ದರಿಂದ ಸಂಪರ್ಕ ಸಾಧಿಸುವ ಕೆಲಸ ಸವಾಲಿನದ್ದು. ಅದರ ಸಂಪರ್ಕ ವ್ಯವಸ್ಥೆಗೆ ಏನಾಗಿದೆ ಎಂದು ತಿಳಿಯುವುದರೊಂದಿಗೆ ಇದು ನಿರ್ದಿಷ್ಟ ದಿನದೊಳಗೆ ಆಗಲೇಬೇಕು.

ಯಾಕೆ ಈ ಸಮಯದ ಮಿತಿ?
ಚಂದ್ರನ ಒಂದು ಹಗಲು ಅಥವಾ ರಾತ್ರಿ ಎಂದರೆ 14 ದಿನಗಳಿಗೆ ಸಮ. ವಿಕ್ರಂ ವಿಚಾರದಲ್ಲಿ ಸೆ.21ರ ಬಳಿಕ ಚಂದ್ರನಲ್ಲಿ ಕತ್ತಲಾವರಿಸುವುದರಿಂದ ವಿಕ್ರಂ ಇಳಿದಿರುವ ಸ್ಥಳದಲ್ಲಿ -200 ಡಿಗ್ರಿ ಸೆಲ್ಸಿಯಸ್‌ಗಿಂತಲೂ ಕಡಿಮೆ ಉಷ್ಣತೆ ಇರುತ್ತದೆ. ಅಂತಹ ಪರಿಸ್ಥಿತಿಯಲ್ಲಿ ಕಾರ್ಯನಿರ್ವಹಿಸುವಂತೆ ಲ್ಯಾಂಡರ್‌ ಅನ್ನು ನಿರ್ಮಾಣ ಮಾಡಿಲ್ಲ. ಅಲ್ಲದೆ ಅದರಲ್ಲಿರುವ ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ಹಾನಿಯಾಗುತ್ತದೆ. ಒಂದು ವೇಳೆ ಇನ್ನು ಮೂರ್‍ನಾಲ್ಕು ದಿನಗಳಲ್ಲಿ ಸಂಪರ್ಕ ಸಾಧ್ಯವಾಗದಿದ್ದರೆ, ಇಸ್ರೋ ಲ್ಯಾಂಡರ್‌ನ ಆಸೆಯನ್ನೇ ಕಳೆದುಕೊಳ್ಳಬೇಕಾಗುತ್ತದೆ.

ವಿಕ್ರಂನೊಂದಿಗೆ ಸಂಪರ್ಕ ಪ್ರಯತ್ನ ಹೇಗೆ?
ಎಲ್ಲೋ ಬಿದ್ದಿರುವ ವಸ್ತುಗೊಳೊಂದಿಗೆ ಎಲೆಕ್ಟ್ರೋ ಮ್ಯಾಗ್ನೆಟಿಕ್‌ ತರಂಗಗಳ ಮೂಲಕ ಸಂಪರ್ಕ ಸಾಧ್ಯವಿದೆ. ಬಾಹ್ಯಾಕಾಶ ಸಂವಹನದಲ್ಲಿ ಎಲೆಕ್ಟ್ರೋ ಮ್ಯಾಗ್ನೆಟಿಕ್‌ ತರಂಗಾಂತರಗಳಲ್ಲಿ ಎಸ್‌ ಬ್ಯಾಂಡ್‌ (ಮೈಕ್ರೋವೇವ್‌) ಮತ್ತು ಎಲ್‌ ಬ್ಯಾಂಡ್‌ (ರೇಡಿಯೋ ತರಂಗಗಳನ್ನು) ಬಳಸಲಾಗುತ್ತದೆ. ಇವುಗಳ ಮೂಲಕ ಮರು ಸಂಪರ್ಕಕ್ಕೆ ಯತ್ನಿಸಲಾಗಿದೆ. ಸದ್ಯ ಸಂಪರ್ಕವೇ ಕಡಿದುಕೊಂಡಿದೆ. ಲ್ಯಾಂಡರ್‌ನ ಸಂವಹನ ವ್ಯವಸ್ಥೆಯಲ್ಲಿ ದೋಷವುಂಟಾಗಿ ಈ ಸಂಪರ್ಕ ಕಡಿದಿರುವ ಸಾಧ್ಯತೆಯಿದೆ. ಜತೆಗೆ ಸಂಪರ್ಕ ಕಡಿತದ ಪರಿಣಾಮ ನಿಗದಿಗಿಂತಲೂ ವೇಗದಲ್ಲಿ ಚಂದ್ರನ ಮೇಲೆ ಲ್ಯಾಂಡರ್‌ ಇಳಿದಿರುವ ಸಾಧ್ಯತೆ ಇದೆ. ಆಗ ಸಾಧನಗಳಿಗೆ ಹಾನಿಯಾಗಿದ್ದಿರಬಹುದು ಎಂದು ಹೇಳಲಾಗಿದೆ.

ವಿಕ್ರಂ ಲ್ಯಾಂಡರ್‌ ಉಪಗ್ರಹ ಮತ್ತು ಭೂಮಿಗೆ ಸಂಪರ್ಕ ಕಲ್ಪಿಸಲು ಅನುಕೂಲವಾಗುವಂತೆ ರೂಪಿಸಲಾಗಿದೆ. ಈ ಎರಡೂ ಸಂಪರ್ಕಕ್ಕೆ ಈಗ ಯತ್ನಿಸಲಾಗುತ್ತಿದೆ. ಲ್ಯಾಂಡರ್‌ ಸ್ವೀಕರಿಸುವ ಸಾಮರ್ಥ್ಯವಿರುವ ನಿರ್ದಿಷ್ಟ ಫ್ರೀಕ್ವೆನ್ಸಿಯ ಸಂದೇಶಗಳನ್ನು ಕಳಿಸಲಾಗುತ್ತಿದೆ. ಇದರಿಂದ ಸಂಪರ್ಕ ಸಾಧ್ಯವಾಗಬಹುದು ಎಂಬ ಆಶಾವಾದವಿದೆ.

ಸಂಪರ್ಕಕ್ಕೆ ಯಾವುದು ಮುಖ್ಯ?
ಲ್ಯಾಂಡರ್‌ನಲ್ಲಿ ಸಂದೇಶಗಳನ್ನು ಸ್ವೀಕರಿಸುವ ಒಂದು ಆ್ಯಂಟೆನಾ ಇದೆ. ಈ ಆ್ಯಂಟೆನಾ ಸರಿಯಾಗಿರಬೇಕಾಗುತ್ತದೆ. ಇದಕ್ಕೆ ಒಂದು ವೇಳೆ ಹಾನಿಯಾಗಿದ್ದರೆ, ಮಣ್ಣಿನಲ್ಲಿ ಹೂತಿದ್ದರೆ ಸಂಪರ್ಕ ಕಷ್ಟ. ಆ್ಯಂಟೆನಾ ನೇರವಾಗಿ ಇರಬೇಕಾಗಿದ್ದರೆ ಸಂಪರ್ಕ ಸಾಧ್ಯವಾಗಬಹುದು. ಲ್ಯಾಂಡರ್‌ ಮಗುಚಿ ಬಿದ್ದಿರುವುದರಿಂದ, ಚೂರಾಗಿ ಹೋಗದಿರುವುದರಿಂದ ಅದಕ್ಕೆ ಏನೂ ಆಗಿಲ್ಲ ಎಂದು ಊಹಿಸಲಾಗಿದೆ. ಆದ್ದರಿಂದ ಉಪಗ್ರಹದ ಮೂಲಕ ಸಂಪರ್ಕಕ್ಕೆ ಗರಿಷ್ಠ ಪ್ರಯತ್ನ ಮಾಡಲಾಗುತ್ತಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.