ಕಜಕಿಸ್ತಾನದಲ್ಲಿ ಭುಗಿಲೆದ್ದ ಹಿಂಸಾಚಾರ : ಅಧ್ಯಕ್ಷರ ನಿವಾಸ, ಮೇಯರ್ ಕಚೇರಿಗೆ ಬೆಂಕಿ
ಎಲ್ಪಿಜಿ ದರ ಏರಿಕೆ ವಿರುದ್ಧ ನಾಗರಿಕರ ಆಕ್ರೋಶ, ಪೊಲೀಸ್ ಠಾಣೆ, ಏರ್ಪೋರ್ಟ್ಗಳ ಮೇಲೂ ದಾಳಿ
Team Udayavani, Jan 6, 2022, 8:45 PM IST
ಆಲ್ಮಟಿ/ಮಾಸ್ಕೋ: ಎಲ್ಪಿಜಿ ದರ ಏರಿಕೆ, ಆರ್ಥಿಕ ಬಿಕ್ಕಟ್ಟು ಸೇರಿದಂತೆ ವಿವಿಧ ಕಾರಣಗಳಿಂದಾಗಿ ಕೇಂದ್ರ ಏಷ್ಯಾ ರಾಷ್ಟ್ರ ಕಜಕಿಸ್ತಾನದ ಸರ್ಕಾರದ ವಿರುದ್ಧ ನಾಗರಿಕರು ರೊಚ್ಚಿಗೆದ್ದಿದ್ದಾರೆ. ಅವರು ಗುರುವಾರ ಅಧ್ಯಕ್ಷೀಯ ನಿವಾಸ ಮತ್ತು ಮೇಯರ್ ಕಚೇರಿಗಳಿಗೆ ಲಗ್ಗೆಯಿಟ್ಟು, ಬೆಂಕಿ ಹಚ್ಚಿದ್ದಾರೆ.
ಕಜಕಿಸ್ತಾನದಾದ್ಯಂತ ಹಿಂಸಾಚಾರ ತೀವ್ರಗೊಂಡಿದ್ದು, ಹಲವು ಕಡೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಘರ್ಷಣೆಗಳು ನಡೆದಿವೆ. ಪೊಲೀಸ್ ಠಾಣೆಗಳ ಮೇಲೆ ದಾಳಿ ನಡೆಸಲು ಬಂದಿದ್ದವರ ಪೈಕಿ 12 ಮಂದಿ ಪೊಲೀಸರ ಗುಂಡಿಗೆ ಬಲಿಯಾಗಿದ್ದಾರೆ. 8 ಪೊಲೀಸರು ಮತ್ತು ನ್ಯಾಷನಲ್ ಗಾರ್ಡ್ನ ಒಬ್ಬ ಅಧಿಕಾರಿಯನ್ನು ಪ್ರತಿಭಟನಾಕಾರರು ಹತ್ಯೆಗೈದಿದ್ದಾರೆ.
ಈ ಗಲಭೆಯಲ್ಲಿ ಸುಮಾರು ಒಂದು ಸಾವಿರ ಮಂದಿ ಗಾಯಗೊಂಡಿದ್ದು, 400 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಲ್ಮಟಿಯ ಮೇಯರ್ ಕಚೇರಿ ಮತ್ತು ಕಜಕಿಸ್ತಾನದ ವಿಮಾನ ನಿಲ್ದಾಣದ ಮೇಲೂ ದಾಳಿ ಮಾಡಲಾಗಿದೆ. ಜಲಫಿರಂಗಿ ಪ್ರಯೋಗ ಮಾಡುವ ಮೂಲಕ ಪ್ರತಿಭಟನಾಕಾರರನ್ನು ಚದುರಿಸಲಾಗಿದೆ. ಗಲಭೆ ತೀವ್ರಗೊಂಡ ಹಿನ್ನೆಲೆಯಲ್ಲಿ ಅಧ್ಯಕ್ಷ ಕಾಸ್ಯಮ್- ಜೋಮಾರ್ಟ್ ಟೋಕಯೇವ್ ಅವರು ರಾಷ್ಟ್ರವ್ಯಾಪಿ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ. ಜತೆಗೆ ಪರಿಸ್ಥಿತಿ ನಿಯಂತ್ರಣಕ್ಕೆ ರಷ್ಯಾ ಪಡೆಗಳು ಆಗಮಿಸಿವೆ.
ಹಿಂಸಾಚಾರಕ್ಕೆ ಕಾರಣವೇನು?
ಅಪಾರ ನೈಸರ್ಗಿಕ ಸಂಪತ್ತು ಇದ್ದರೂ, ಕಜಕಿಸ್ತಾನ ಸರ್ಕಾರವು ರಾತ್ರೋರಾತ್ರಿ ಎಲ್ಪಿಜಿ ದರವನ್ನು ಏರಿಕೆ ಮಾಡಿದ್ದೇ ಕಾರಣ. ಎಲ್ಪಿಜಿಯ ದರದ ಮಿತಿಯನ್ನು ಜ.1ರಿಂದ ಸರ್ಕಾರ ತೆಗೆದುಹಾಕಿತ್ತು. ಹೀಗಾಗಿ, ಲೀಟರ್ಗೆ 8.55 ರೂ. ಇದ್ದ ಎಲ್ಪಿಜಿ ದರ 20.52 ರೂ.ಗೆ ಏರಿತು. ಇದರಿಂದ ಜನ ರೊಚ್ಚಿಗೆದ್ದರು. ಇದರ ಜೊತೆಗೆ ಸರ್ಕಾರದ ಭ್ರಷ್ಟಾಚಾರ, ಹದಗೆಟ್ಟ ಬ್ಯಾಂಕಿಂಗ್ ವ್ಯವಸ್ಥೆ, ಆರ್ಥಿಕ ಬಿಕ್ಕಟ್ಟು ಕೂಡ ಜನರ ಕೋಪಕ್ಕೆ ಕಾರಣ.
ಪ್ರತಿಭಟನೆ ನೇತೃತ್ವ ಯಾರದ್ದು?
ಹಿಂದಿನಿಂದಲೂ ಸರ್ಕಾರದ ವಿರುದ್ಧ ಧ್ವನಿಯೆತ್ತಿದವರನ್ನು ಹತ್ತಿಕ್ಕಲಾಗುತ್ತಿತ್ತು. ಆದರೆ, ಈಗ ಯಾರದ್ದೂ ನೇತೃತ್ವವೇ ಇಲ್ಲದೆ ಜನರೇ ದಂಗೆಯೆದ್ದಿದ್ದಾರೆ.
ರಷ್ಯಾದ ಪಾತ್ರವೇನು?
ಹಿಂಸಾಚಾರದಲ್ಲಿ ವಿದೇಶದಲ್ಲಿ ತರಬೇತಿ ಪಡೆದ ಭಯೋತ್ಪಾದಕರ ಗ್ಯಾಂಗ್ನ ಕೈವಾಡವಿದೆ ಎಂದು ಅಧ್ಯಕ್ಷ ಟೋಕಯೇವ್ ಆರೋಪಿಸಿದ್ದಾರೆ. ಹೀಗಾಗಿ, ರಷ್ಯಾದ ಸಹಾಯವನ್ನು ಅವರು ಯಾಚಿಸಿದ್ದಾರೆ. ಅದರಂತೆ, ರಷ್ಯಾದ ಯೋಧರು ಸೇನಾ ವಿಮಾನದ ಮೂಲಕ ಕಜಕಿಸ್ತಾನಕ್ಕೆ ಬಂದಿಳಿದಿದ್ದಾರೆ.
ಇದನ್ನೂ ಓದಿ : ಕಾಶ್ಮೀರ ಮಾಜಿ ಸಿಎಂಗಳಿಗೆ ನೀಡಲಾಗಿದ್ದ ವಿಶೇಷ ಭದ್ರತೆ ಹಿಂಪಡೆಯಲು ಕೇಂದ್ರ ಚಿಂತನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್ಗಳು: 10 ಯೋಧರು ಸಾವು
Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ
Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ
US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ
MUST WATCH
ಹೊಸ ಸೇರ್ಪಡೆ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ