ಹುಬ್ಬಳ್ಳಿ-ಅಂಕೋಲಾ ರೈಲಿಗೆ ಅಸ್ತು; ಬಹುದಿನಗಳಿಂದ ನನೆಗುದಿಗೆ ಬಿದ್ದಿದ್ದ ಯೋಜನೆ
Team Udayavani, Mar 21, 2020, 6:30 AM IST
ಬೆಂಗಳೂರು: ಬಹುದಿನಗಳಿಂದ ನನೆಗುದಿಗೆ ಬಿದ್ದಿದ್ದ ಹುಬ್ಬಳ್ಳಿ-ಅಂಕೋಲಾ ರೈಲು ಯೋಜನೆಗೆ ಪರಿಸರವಾದಿಗಳು ಮತ್ತು ಅರಣ್ಯ ಇಲಾಖೆಯ ವಿರೋಧದ ನಡುವೆಯೇ ರಾಜ್ಯ ವನ್ಯಜೀವಿ ಮಂಡಳಿ ಒಪ್ಪಿಗೆ ನೀಡಿದೆ.
ಕಳೆದ ವಾರವಷ್ಟೇ ರಾಜ್ಯ ವನ್ಯಜೀವಿ ಮಂಡಳಿ ಯೋಜನೆ ಕೈಬಿಡುವ ನಿರ್ಧಾರ ಪ್ರಕಟಿಸಿತ್ತು. ಆದರೆ ಈಗ ಹಿಂದಿನ ನಿರ್ಧಾರ ವಾಪಸ್ ಪಡೆದು ಯೋಜನೆಗೆ ಅನುಮತಿ ನೀಡುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲು ಮಂಡಳಿ ನಡೆಸಿದ ಸಭೆಯಲ್ಲಿ ನಿರ್ಧರಿಸಲಾಗಿದೆ.
ಮುಖ್ಯಮಂತ್ರಿ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಆರ್.ವಿ. ದೇಶಪಾಂಡೆ, ಕಾರ್ಮಿಕ ಸಚಿವ ಮತ್ತು ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಟಾರ್ ಯಾವುದೇ ಕಾರಣಕ್ಕೂ ಯೋಜನೆ ಕೈಬಿಡಬಾರದು ಎಂದು ಆಗ್ರಹಿಸಿದರು.
ರಾಜ್ಯದ ಅಭಿವೃದ್ಧಿಗೆ, ವಿಶೇಷವಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಕೈಗಾರಿಕಾ ಅಭಿವೃದ್ಧಿ ಮತ್ತು ರಪು¤ ಉದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡಲು ಈ ಯೋಜನೆ ಅಗತ್ಯವಿದೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಪ್ರತಿಪಾದಿಸಿದರು.
ಸೌಮ್ಯಾ ರೆಡ್ಡಿ ರಾಜೀನಾಮೆ
ಹುಬ್ಬಳ್ಳಿ-ಅಂಕೋಲಾ ರೈಲು ಯೋಜನೆಗೆ ಮಂಡಳಿ ಸದಸ್ಯರ ವಿರೋಧದ ನಡುವೆಯೂ ಒಪ್ಪಿಗೆ ನೀಡಿರುವುದನ್ನು ಖಂಡಿಸಿ, ಶಾಸಕಿ ಸೌಮ್ಯಾ ರೆಡ್ಡಿ ಮಂಡಳಿಯ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಪರಿಸರವಾದಿಗಳ ವಾದ
ಹುಬ್ಬಳ್ಳಿ-ಅಂಕೋಲಾ ರೈಲು ಹಾದು ಹೋಗುವ ಪ್ರದೇಶ ಸಂಪೂರ್ಣ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಬರುವುದರಿಂದ ಸುಮಾರು 595 ಹೆಕ್ಟೇರ್ ಅರಣ್ಯ ನಾಶವಾಗುತ್ತದೆ. ಸುಮಾರು 5 ಲಕ್ಷ ಮರಗಳನ್ನು ಕಡಿಯಬೇಕಾಗುತ್ತದೆ. ಅಲ್ಲದೆ ಈ ಪ್ರದೇಶ ಜೀವ ವೈವಿಧ್ಯ ತಾಣವಾಗಿದ್ದು, ಆನೆ ಕಾರಿಡಾರ್ ಕೂಡ ಹಾದುಹೋಗಿದೆ. ಅನೇಕ ಅಳಿವಿನಂಚಿನಲ್ಲಿರುವ ವನ್ಯ ಪ್ರಾಣಿಗಳ ವಾಸಸ್ಥಾನವಾಗಿರುವುದರಿಂದ ಈ ಯೋಜನೆ ಕೈಗೆತ್ತಿಕೊಳ್ಳುವುದರಿಂದ ಜೀವ ವೈವಿಧ್ಯಕ್ಕೆ ಹಾನಿಯಾಗುತ್ತದೆ ಎಂದು ಪರಿಸರವಾದಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.
ಹುಬ್ಬಳ್ಳಿ -ಅಂಕೋಲಾ ರೈಲು ಯೋಜನೆಗೆ ಸಾಕಷ್ಟು ಹೋರಾಟ ಮಾಡಲಾಗಿದೆ. ಮಂಡಳಿ ಸಭೆಯಲ್ಲಿ ಕೆಲವರು ವಿರೋಧ ವ್ಯಕ್ತಪಡಿಸಿದರು. ಆದರೆ ಈ ಯೋಜನೆ ಜಾರಿಯಿಂದ ಉತ್ತರ ಕರ್ನಾಟಕ ಭಾಗದಲ್ಲಿ ಔದ್ಯೋಗಿಕ ಮತ್ತು ರಪು¤ ಉದ್ಯಮಕ್ಕೆ ಹೆಚ್ಚಿನ ಅನುಕೂಲವಾಗಲಿದೆ. ಅಟಲ್ ಬಿಹಾರಿ ವಾಜಪೇಯಿ ಕಾಲದಲ್ಲಿಯೇ ಈ ಯೋಜನೆಗೆ ಶಂಕು ಸ್ಥಾಪನೆ ಮಾಡಲಾಗಿದೆ.
– ಜಗದೀಶ್ ಶೆಟ್ಟರ್, ಕೈಗಾರಿಕಾ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು
BS ಯಡಿಯೂರಪ್ಪನೇ ನನ್ನನ್ನು ವಾಪಸ್ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ
Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್ ವಶ: ಜಿಲ್ಲಾಧಿಕಾರಿ ಮಾಹಿತಿ