ಸಾಹಿತ್ಯ ಅಕಾಡೆಮಿ ಪುಸ್ತಕಗಳ ಭರ್ಜರಿ ಮಾರಾಟ; 345 ಪುಸ್ತಕ ಒಳಗೊಂಡ ಸೆಟ್‌ಬಾಕ್ಸ್‌

ಮಲ್ಲೇಪುರಂ ಜಿ.ವೆಂಕಟೇಶ ಅವರ "ದೇಶಿಯ ದರ್ಶನ ಮಾಲೆ" ಕೃತಿಗಳನ್ನು ಅಧಿಕ ಸಂಖ್ಯೆಯಲ್ಲಿ ಓದುಗರು ಖರೀದಿಸಿದ್ದಾರೆ.

Team Udayavani, Oct 14, 2022, 9:52 AM IST

ಸಾಹಿತ್ಯ ಅಕಾಡೆಮಿ ಪುಸ್ತಕಗಳ ಭರ್ಜರಿ ಮಾರಾಟ; 345 ಪುಸ್ತಕ ಒಳಗೊಂಡ ಸೆಟ್‌ಬಾಕ್ಸ್‌

ಬೆಂಗಳೂರು: ಹಣ ಕೊಟ್ಟು ಪುಸ್ತಕಗಳನ್ನು ಖರೀದಿಸುವವರ ಸಂಖ್ಯೆ ಕ್ಷೀಣಿಸುತ್ತಿದೆ ಎಂಬ ಮಾತಿಗೆ ಅಪವಾದ ಎಂಬಂತೆ ಕರ್ನಾಟಕ ಸಾಹಿತ್ಯಅಕಾಡೆಮಿ ರಾಜ್ಯದ ವಿವಿಧ ಕಾಲೇಜು ಮತ್ತು ವಿವಿಗಳಲ್ಲಿ ಹಮ್ಮಿಕೊಂಡಿದ್ದ ಶೇ.50ರ ರಿಯಾಯ್ತಿ ದರದ ಪುಸ್ತಕಗಳ ಮಾರಾಟದಲ್ಲಿ ಭರ್ಜರಿ ಖರೀದಿ ವಹಿವಾಟು ನಡೆದಿದೆ.

ಬೆಂಗಳೂರಿನಿಂದ ಆರಂಭವಾದ ಪುಸ್ತಕ ಪ್ರದರ್ಶನ ಮತ್ತು ಮಾರಾಟ ಬಸವ ಕಲ್ಯಾಣದಲ್ಲಿ ಮುಕ್ತಾಯವಾಗಿದ್ದು ಸುಮಾರು 5 ಸಾವಿರಕ್ಕೂ ಹೆಚ್ಚಿನ ವಿವಿಧ ಶೀರ್ಷಿಕೆ ಗಳ ಪುಸ್ತಕಗಳ ಮಾರಾಟವಾಗಿವೆ. ಸುಮಾರು 35ಲಕ್ಷ ರೂ.ಗಳ ಖರೀದಿ ವಹಿವಾಟು ನಡೆದಿದೆ.

ಹಿರಿಯ ಸಾಹಿತಿಗಳ ಕೃತಿಗಳು ಅಧಿಕ ಸಂಖ್ಯೆಯಲ್ಲಿ ಮಾರಾಟವಾಗಿದ್ದು ಅಕಾಡೆಮಿಯ ಉತ್ಸಾಹ ಇಮ್ಮಡಿಸಿದೆ. ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಅಕಾಡೆಮಿ ರಾಜ್ಯದ 75 ಪದವಿ, ಪದವಿ ಪೂರ್ವ ಕಾಲೇಜು ಹಾಗೂ ಕೆಲ ವಿಶ್ವವಿದ್ಯಾಲಯಗಳಲ್ಲಿ ತಾನು ಪ್ರಕಟಿಸಿದ್ದ ಪುಸ್ತಕಗಳ ಪ್ರದರ್ಶನ, ಮಾರಾಟವನ್ನು ಏರ್ಪಡಿಸಿತ್ತು. ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಹಲವು ಕಾರ್ಯಕ್ರಮಗಳನ್ನು ರೂಪಿಸಿತ್ತು.

ಆ ಹಿನ್ನೆಲೆಯಲ್ಲಿ ಅಕಾಡೆಮಿ ಕೂಡ ದೇಶದ ಸ್ವಾತಂತ್ರ ಸಾಧಕರ ಕುರಿತು ಕನ್ನಡ ಭಾಷೆಯಲ್ಲಿ 75 ಪುಸ್ತಕಗಳ ಮಾಲೆಯನ್ನು ಹೊರತಂದಿತ್ತು. ಇದಾದ ಬಳಿಕ ಸಾಕ್ಷ್ಯ ಚಿತ್ರದ ಜತೆಗೆ ರಾಜ್ಯದ 31 ಜಿಲ್ಲೆಗಳ ಪದವಿ ಮತ್ತು ಪದವಿ ಪೂರ್ವ ಮತ್ತು ವಿವಿಗಳಲ್ಲಿ ಪುಸ್ತಕಗಳ ಪ್ರದರ್ಶನ ಮತ್ತು ಮಾರಾಟ ಹಮ್ಮಿಕೊಂಡಿತ್ತು. ಇಲ್ಲಿ ಭರ್ಜರಿಯಾಗಿಯೇ ಪುಸ್ತಕ ಖರೀದಿಯ ವಹಿವಾಟು ನಡೆದಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್‌ ಕರಿಯಪ್ಪ ಹೇಳುತ್ತಾರೆ.

ಗಿರಡ್ಡಿ, ಬರಗೂರು, ಸಿದ್ದಲಿಂಗಯ್ಯ ಪುಸ್ತಕಗಳಿಗೆ ಬೇಡಿಕೆ: ಅಕಾಡೆಮಿ ಪುಸ್ತಕ ಮಾರಾಟದಲ್ಲಿ  ಹಿರಿಯ ವಿಮರ್ಶಕ ಗಿರಡ್ಡಿ ಗೋವಿಂದರಾಜ ಅವರ “ಸಾಹಿತ್ಯ ಪರಿಭಾಷಿಕ ಮಾಲೆ” (16 ಪುಸ್ತಕಗಳು), ಬರಗೂರು ರಾಮಚಂದ್ರ ಅವರ “ಕನ್ನಡ ಸಾಹಿತ್ಯ ಸಂಗಾತಿ’, ಹಿರಿಯ ಕವಿ ಸಿದ್ದಲಿಂಗಯ್ಯ ಮತ್ತು ಎಂ.ಎಚ್‌.ಕೃಷ್ಣಯ್ಯ ಸಂಪಾದನೆಯ “ಸಾಲು ದೀಪಗಳು’ ಹಾಗೂ ಮಲ್ಲೇಪುರಂ ಜಿ.ವೆಂಕಟೇಶ ಅವರ “ದೇಶಿಯ ದರ್ಶನ ಮಾಲೆ” ಕೃತಿಗಳನ್ನು ಅಧಿಕ ಸಂಖ್ಯೆಯಲ್ಲಿ ಓದುಗರು ಖರೀದಿಸಿದ್ದಾರೆ.

ರಿಯಾಯ್ತಿ ಪುಸ್ತಕ ಮಾರಾಟದಲ್ಲಿ ಸ್ನಾತಕೋತ್ತರ ಮತ್ತು ಪದವೀಧರ ವಿದ್ಯಾರ್ಥಿಗಳೇ ಅಧಿಕ ಸಂಖ್ಯೆಯಲ್ಲಿ ಕನ್ನಡ ಪುಸ್ತಕಗಳನ್ನು ಖರೀದಿಸಿದ್ದಾರೆ. ಜತೆಗೆ ಕಾಲೇಜು ಉಪನ್ಯಾಸಕರು, ಸಾಹಿತ್ಯಆಸಕ್ತರು ಕೂಡ ಅಕಾಡೆಮಿ ಹೊರತಂದಿರುವ ವಿವಿಧ ಕೃತಿಗಳನ್ನು ಮಾರಾಟ ಕೇಂದ್ರಕ್ಕೆ ಬಂದು ಕೊಂಡುಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಈ ಸಂಖ್ಯೆ ದ್ವಿಗುಣಗೊಳ್ಳುವ ನಿರೀಕ್ಷೆಯಿದೆ ಎಂದು ಅಕಾಡೆಮಿ ಅಧಿಕಾರಿಗಳು ಹೇಳುತ್ತಾರೆ.

345 ಪುಸ್ತಕಗಳ ಒಳಗೊಂಡ ಸೆಟ್‌ಬಾಕ್ಸ್‌
ಅಕಾಡೆಮಿ ರಿಯಾಯ್ತಿ ಪುಸ್ತಕ ಮಾರಾಟಕ್ಕಾಗಿ 15,435 ರೂ. ಮುಖ ಬೆಲೆಯ 345 ಪುಸ್ತಕಗಳ ಒಳಗೊಂಡ ಸೆಟ್‌ ಸಿದ್ಧಪಡಿಸಿತ್ತು. ಇದರಲ್ಲಿ ಸುಮಾರು 22 ಸೆಟ್‌ ಬಾಕ್ಸ್‌ಗಳು ಮಾರಾಟವಾಗಿದೆ. ಬಹುತೇಕ ಸೆಟ್‌ ಬಾಕ್ಸ್‌ ಪುಸ್ತಕಗಳನ್ನು ವಿವಿಗಳು ಮತ್ತು ಕಾಲೇಜುಗಳು ಖರೀದಿ ಮಾಡಿವೆ. ಈ ಪುಸ್ತಕ ಮಾರಾಟ ಮತ್ತು ಪ್ರದರ್ಶನ ಆಯೋಜನೆಯಿಂದಾಗಿ ಅಕಾಡೆಮಿಯಲ್ಲಿ ಉತ್ತಮ ಪುಸ್ತಕಗಳು ಇವೆ ಎಂಬುವುದು ಕಾಲೇಜು ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ ಗಮನಕ್ಕೆ
ಬಂದಿದೆ ಎಂದು ಅಧಿಕಾರಿಗಳು ಹೇಳುತ್ತಾರೆ.

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಅಕಾಡೆಮಿ ರಾಜ್ಯದ 75 ಸ್ಥಳಗಳಲ್ಲಿ ಪುಸ್ತಕ ಪ್ರದರ್ಶನ ಮತ್ತು ರಿಯಾಯ್ತಿ ದರದಲ್ಲಿ ಪುಸ್ತಕಗಳ ಮಾರಾಟವನ್ನು ಹಮ್ಮಿಕೊಂಡಿತ್ತು. 35 ಲಕ್ಷ ರೂ. ಖರೀದಿ ವಹಿವಾಟು ನಡೆದಿದ್ದು, ಇದು ಕನ್ನಡ ಪುಸ್ತಕ ಓದುಗರಿಗೆ ಬರವಿಲ್ಲ ಎಂಬುವುದನ್ನು ತೋರಿಸುತ್ತದೆ.
● ಡಾ.ಬಿ.ವಿ. ವಸಂತಕುಮಾರ್‌,
ಅಧ್ಯಕ್ಷರು ಕರ್ನಾಟಕ ಸಾಹಿತ್ಯ ಅಕಾಡೆಮಿ

*ದೇವೇಶ ಸೂರುಗುಪ್ಪ

ಟಾಪ್ ನ್ಯೂಸ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.