ಹುಳಿಮಾವು ಕೆರೆಯಿಂದ ಒಡೆದ ಜನಜೀವನ: ಪರಿಹಾರ ಕಾರ್ಯ ಮುಂದುವರಿಕೆ
Team Udayavani, Nov 25, 2019, 8:44 AM IST
ಬೆಂಗಳೂರು: ಭರ್ತಿಯಾಗಿದ್ದ ಹುಳಿಮಾವು ಕೆರೆ ಒಡೆದು ಸುತ್ತಲಿನ ನೂರಾರು ಕುಟುಂಬಗಳು ಜಲಾವೃತವಾದ ಘಟನೆ ರವಿವಾರ ಸಂಜೆ ನಡೆದಿದ್ದು, ಸದ್ಯ ಪರಿಹಾರ ಕಾರ್ಯಾಚರಣೆ ಮುಂದುವರಿದಿದೆ.
ಕೆರೆ ಒಡೆದ ಕಾರಣ ಹುಳಿಮಾವು, ಅರೆಕೆರೆ ವಾರ್ಡ್ ಗಳು ದ್ವೀಪದಂತಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಕೆರೆ ಏರಿ ಒಡೆದ ಭಾಗವನ್ನು ಸಂಪೂರ್ಣವಾಗಿ ಮಣ್ಣಿನಿಂದ ಮುಚ್ಚಲಾಗಿದೆ. ಇದಕ್ಕೆ ಮೆಟ್ರೋ ಸಹಕಾರವೂ ನೀಡಿದ್ದರಿಂದ ಕಾರ್ಯಾಚರಣೆಗೆ ಸಹಕಾರವಾಯಿತು ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.
ಬನ್ನೇರುಘಟ್ಟ ರಸ್ತೆಯಲ್ಲಿ ಮೆಟ್ರೋ ಕಾಮಗಾರಿ ನಡೆಯುತ್ತಿದ್ದು, ಮೆಟ್ರೋ ಲಾರಿಗಳನ್ನು ಬಳಸಿಕೊಂಡು ಏರಿ ಒಡೆದ ಭಾಗದಲ್ಲಿ ಮಣ್ಣು ಮುಚ್ಚಲಾಗಿದೆ.
ಕೆರೆ ಏರಿ ಒಡೆದು ಉಂಟಾಗಿರುವ ನಷ್ಟ ಅಂದಾಜಿಸಲು ಬಿಬಿಎಂಪಿಯ ಕಂದಾಯ ಅಧಿಕಾರಿಗಳು, ಎಂಜಿನಿಯರ್ ಗಳು ಸ್ಥಳ ಪರಿಶೀಲನೆ ನಡೆಸಲಿದ್ದಾರೆ. ಅನಾಹುತಕ್ಕೆ ಸಂಬಂಧಿಸಿದಂತೆ ಬಿಡಿಎ ಮತ್ತು ಬಿಬಿಎಂಪಿ ಅಧಿಕಾರಿಗಳ ಜತೆ ಮೇಯರ್ ಎಂ.ಗೌತಮ್ ಕುಮಾರ್ ಸಭೆ ನಡೆಸುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
MUST WATCH
ಹೊಸ ಸೇರ್ಪಡೆ
Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ