ವರ್ಷದೊಳಗೆ 3.55 ಕೋಟಿ ವೆಚ್ಚದ ರಾಜಕಾಲುವೆ ನಿರ್ಮಾಣ ಭರವಸೆ : ಎಸ್.ಜಯರಾಂ

ಮಳೆ ಹಾನಿ ಪ್ರದೇಶಕ್ಕೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಭೇಟಿ

Team Udayavani, May 24, 2022, 9:14 PM IST

ವರ್ಷದೊಳಗೆ 3.55 ಕೋಟಿವೆಚ್ಚದ ರಾಜಕಾಲುವೆ ನಿರ್ಮಾಣ ಭರವಸೆ : ಎಸ್.ಜಯರಾಂ

ಹುಣಸೂರು : ಅಪಾರ ಮಳೆಯಿಂದ ಮನೆಗಳಿಗೆ ನೀರು ನುಗ್ಗಿ ಹಾನಿಗೊಳಗಾಗಿದ್ದ ಹುಣಸೂರು ನಗರದ ಮಂಜುನಾಥ ಬಡಾವಣೆ, ಶಬ್ಬೀರ್ ನಗರ ಬಡಾವಣೆಗಳಿಗೆ ಮೈಸೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ಜಯರಾಂ ಮಂಗಳವಾರ ಭೇಟಿ ಇತ್ತು ಪರಿಶೀಲನೆ ನಡೆಸಿ, ನಿವಾಸಿಗಳೊಂದಿಗೆ ಚರ್ಚಿಸಿದರು.

ನಗರದ ಮಂಜುನಾಥ ಬಡಾವಣೆಗೆ ಭೇಟಿ ನೀಡಿದ್ದ ವೇಳೆ ನಿವಾಸಿಗಳಾದ ಜವರೇಗೌಡ, ಕೃಷ್ಣ, ಕಿರಂಗೂರುಬಸವರಾಜು ಮತ್ತಿತರರು ನಗರಸಭೆಯ ಅಸಮರ್ಪಕ ನಿರ್ವಹಣೆ ಹಾಗೂ ಮಳೆ-ಚರಂಡಿ ನೀರು ಸರಾಗವಾಗಿ ಹರಿದು ಹೋಗಲು ಸೂಕ್ತ ಚರಂಡಿ, ರಾಜ ಕಾಲುವೆ ನಿರ್ಮಿಸದೆ ಪ್ರತಿ ಮಳೆಗಾಲದಲ್ಲೂ ಈ ಬಡಾವಣೆಯ ಮನೆಗಳಿಗೆ ನೀರು ನುಗ್ಗುತ್ತಿದೆ. ಇಡೀ ಬಡಾವಣೆಯೇ ನೀರಿನಲ್ಲಿ ಮುಳುಗುತ್ತದೆ. ಇನ್ನಾದರೂ ಅಗತ್ಯವಿರುವೆಡೆ ಚರಂಡಿ ಹಾಗೂ ರಾಜಕಾಲುವೆ ನಿರ್ಮಿಸಲು ಕ್ರಮವಹಿಸಬೇಕೆಂದು ಮನವಿ ಮಾಡಿದರು.

ಈವೇಳೆ ಪೌರಾಯುಕ್ತ ರವಿಕುಮಾರ್ ಅಕ್ರಮ ಬಡಾವಣೆಯಾಗಿದ್ದು, ಯೋಜನೆಇಲ್ಲದೆ ನಿರ್ಮಿಸಿದ್ದರಿಂದ ಈ ಪರಿಸ್ಥಿತಿ ಉದ್ಭವವಾಗಿದೆ. ಆದರೂ ನಗರಸಭೆಯ ಎಸ್‌ಎಫ್‌ಸಿ ಯೋಜನೆಯಡಿ ಅಗತ್ಯ ಕಾಮಗಾರಿಕೈಗೊಳ್ಳಲಾಗುವುದೆಂದಾಗ ಇಂತಹ ಬಡಾವಣೆಗಳ ಸ್ಥಾಪನೆಗೆ ನಗರಸಭೆ ಯಾಕೆ ಒಪ್ಪಿಗೆ ನೀಡಿತೆಂದು ನಿವಾಸಿಗಳು ಪ್ರಶ್ನಿಸಿದಾಗ, ಮಧ್ಯಪ್ರವೇಶಿಸಿದ ಉಸ್ತುವಾರಿ ಕಾರ್ಯದರ್ಶಿಯವರು ಇಲ್ಲಿ ಬಡಾವಣೆ ನಿರ್ಮಿಸಿರುವವರು, ನಿವೇಶನ ಖರೀದಿಸಿರುವವರು, ನಗರಸಭೆಯವರದ್ದು ತಪ್ಪಿದೆ. ಇದೀಗ ೩.೫೫ ಕೋಟಿ ವೆಚ್ಚದಡಿ ರಾಜಕಾಲುವೆ, ಚರಂಡಿನಿರ್ಮಾಣ ಸೇರಿದಂತೆ ಅಗತ್ಯ ಕಾಮಗಾರಿಗಳ ಯೋಜನೆ ರೂಪಿಸಲಾಗಿದೆ. ಮುಂದಿನ ಬಾರಿಗೆ ಸಮಸ್ಯೆ ಇರಲ್ಲವೆಂದು ಭರವಸೆ ಇತ್ತರು. ಇದೇ ವೇಳೆ ಪಕ್ಕದ ಬಡಾವಣೆಯ ಮಹಿಳೆಯರು ಅಲ್ಲೂ ಅನಧಿಕೃತ ಬಡಾವಣೆ ಇದೆ, ನಗರಸಭೆಯಿಂದ ನಿವೇಶನ ಬಿಡುಗಡೆ ಮಾಡಬೇಡಿರೆಂದು ಒತ್ತಾಯಿಸಿದರು.

ಆಕ್ರೋಶ: ಮಂಜುನಾಥ ಬಡಾವಣೆಯ ಸಿಮೆಂಟ್ ರಸ್ತೆ ಇರುವ ಭಾಗಕ್ಕೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಭೇಟಿ ನೀಡಿ ಹೋಗಿದ್ದಾರೆ. ನಿಜವಾಗಿ ನಿತ್ಯ ಸಮಸ್ಯೆಯಲ್ಲಿ ಮುಳುಗಿರುವ ಭಾಗಕ್ಕೆ ಭೇಟಿ ನೀಡಲಿಲ್ಲ ಎಂದು ನಿವಾಸಿ ಎಂ.ಎಲ್.ರವಿಶಂಕರ್, ರಾಜೇಶ್ ಜೈನ್, ಮನು, ಕಾರ್ತಿಕ್ ಮತ್ತು ವೆಂಕಟೇಶ್ ಆಕ್ರೋಶ ಹೊರ ಹಾಕಿದರು.

ವಳ್ಳಮ್ಮನ ಕಟ್ಟೆ ಕೆರೆ ನೀರು ಹರಿಯುತ್ತಿದ್ದಂತೆ ಮೊದಲು ಬಲಿಪಶುವಾಗುವ ಭಾಗಕ್ಕೆ ಸ್ಥಳಿಯ ಅಧಿಕಾರಿಗಳು ಉದ್ದೇಶಪೂರಕವಾಗಿ ಜಿಲ್ಲಾ ಕಾರ್ಯದರ್ಶಿಗಳನ್ನುಕರೆ ತರದೆ ಅಧಿಕಾರಿಗೆ ದಿಕ್ಕು ತಪ್ಪಿಸುವ ಕೆಲಸ ಮಾಡಲಾಗಿದೆ. ಇಂದಿಗೂ ಬಡಾವಣೆಯಲ್ಲಿ ಕೊಳಚೆ ನೀರು ತುಂಬಿದ್ದು, ತೆರವು ಕಾರ್ಯಾಚರಣೆ ಸಮರ್ಪಕವಾಗಿ ಮಾಡದೆ ಇರುವುದರಿಂದ ನಗರಸಭೆ ಅಧಿಕಾರಿ ತಮ್ಮ ಕರ್ತವ್ಯ ಲೋಪ ಮುಚ್ಚುವ ಕೆಲಸ ಮಾಡಿದ್ದಾರೆ ಎಂದರು.

ಅನಧಿಕೃತ : ಅನಧಿಕೃತ ಎಂಬ ಹಣೆಪಟ್ಟಿ ಅಂಟಿಸಿ ಬಡಾವಣೆಗೆ ಯಾವುದೇ ಸೌಲಭ್ಯ ನೀಡುತ್ತಿಲ್ಲ, ನಾವು ಕಂದಾಯ ಪಾವತಿಸುತ್ತಿಲ್ಲವೆ. ಅನಧಿಕೃತ ಎಂದು ಹೇಳುವುದಾದರೆ ಮನೆ ನಿರ್ಮಿಸಲು ಪರವಾನಿಗೆ ಏಕೆ ನೀಡಬೇಕು. ನಗರಸಭೆ ತಪ್ಪು ಮುಚ್ಚಿಕೊಳ್ಳಲು ಸಾರ್ವಜನಿಕರ ಹೆಗಲಿಗೆ ತಪ್ಪು ಹೊರಿಸುತ್ತಿದ್ದಾರೆ ಎಂದು ಶ್ರೀನಿವಾಸ್ ಆರೋಪಿಸಿದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ವರ್ಣೀತ್‌ನೇಗಿ, ತಹಸೀಲ್ದಾರ್ ಡಾ.ಅಶೋಕ್, ತಾ.ಪಂ.ಆಡಳಿತಾಧಿಕಾರಿ ನಂದ, ಇಓ.ಗಿರೀಶ್, ಎಇಇಗಳಾದ ಭೋಜರಾಜ್, ಪ್ರಭಾಕರ್, ಸಿದ್ದಪ್ಪ, ಬಿಇಓ ನಾಗರಾಜ್, ಸಮಾಜಕಲ್ಯಾಣಾಧಿಕಾರಿ ಮೋಹನ್‌ಕುಮಾರ್,ಸಿಡಿಪಿಒ ರಶ್ಮಿ ಮತ್ತಿತರ ಅಧಿಕಾರಿಗಳಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.