ನಾನು ಉಪ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಲ್ಲ: ಕೆ.ಎಸ್. ಈಶ್ವರಪ್ಪ
Team Udayavani, Dec 12, 2019, 6:52 PM IST
ಬೆಂಗಳೂರು: ಪ್ರಸ್ತುತ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಅವಕಾಶ ಇಲ್ಲ. ನಾನು ಆ ಹುದ್ದೆ ಕೊಡಿ ಎಂದು ಕೇಳಿಯೂ ಇಲ್ಲ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಪತ್ರಕರ್ತರ ಜತೆ ಮಾತನಾಡಿದ ಅವರು, ಸರಕಾರ ಸುಭದ್ರವಾಗಿ ಮುಂದುವರಿಯಬೇಕು. ನಮ್ಮ ಸರಕಾರ ಬರಲು ತ್ಯಾಗ ಮಾಡಿದವರಿಗೆ ನಾವು ಸ್ಥಾನಮಾನ ಕಲ್ಪಿಸಬೇಕು. ಇದೊಂದೇ ನಮ್ಮೆಲ್ಲರ ಗುರಿ. ಆ ವಿಚಾರದಲ್ಲಿ ಯಾರದೂ ಭಿನ್ನಾಭಿಪ್ರಾಯ ಇಲ್ಲವೇ ಇಲ್ಲ ಎಂದು ತಿಳಿಸಿದರು.
ಬಿಜೆಪಿಯಲ್ಲಿ ಯಾವ ರೀತಿಯ ಅಸಮಾಧಾನ, ಭಿನ್ನಾಭಿಪ್ರಾಯಕ್ಕೆ ಅವಕಾಶವೂ ಇಲ್ಲ. ಉಪ ಚುನಾವಣೆಯಲ್ಲಿ ಗೆದ್ದವರಿಗೆ ಸಚಿವ ಸ್ಥಾನ, ಚುನಾವಣೆಗೆ ಸ್ಪರ್ಧೆ ಮಾಡದ ಆರ್.ಶಂಕರ್ಗೆ ಸಚಿವ ಸ್ಥಾನ ಕೊಡಲೇಬೇಕಿದೆ. ಸೋತವರಿಗೆ ಯಾವ ಸ್ಥಾನಮಾನ ಎಂಬುದು ಹೈಕಮಾಂಡ್ ಮತ್ತು ಸಿಎಂ ಯಡಿಯೂರಪ್ಪ ಅವರು ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?