ನಾನು ಯಾವುದೇ ಲಾಭಿಯ ಹಿಂದಿಲ್ಲ, ಇದು ನನ್ನ ಕೊನೆಯ ಚುನಾವಣೆ: ಸಿ.ಹೆಚ್.ವಿಜಯಶಂಕರ್

14 ವರ್ಷದ ರಾಜಕೀಯ ವನವಾಸಕ್ಕೆ ಮುಕ್ತಿ ನೀಡಿ: BJP ಅಭ್ಯರ್ಥಿ ಸಿ.ಹೆಚ್.ವಿಜಯಶಂಕರ್ ಮನವಿ

Team Udayavani, Apr 12, 2023, 7:49 PM IST

hc vij

ಪಿರಿಯಾಪಟ್ಟಣ: ನಾನು ಯಾವುದೇ ಲಾಭಿಯ ಹಿಂದಿಲ್ಲ, ಹೊಂದಾಣಿಕೆ-ಒಳ ಒಪ್ಪಂದ ಯಾವುದಕ್ಕೂ ನಾವು ಸಿದ್ದರಿಲ್ಲ, ನಮ್ಮ ಸ್ವಂತ ಬಲದ ಮೇಲೆ ಚುನಾವಣೆ ಎದುರಿಸಲು ಬಂದಿದ್ದೇವೆ ತಾಲ್ಲೂಕಿನ ಜನತೆ ಆಶೀರ್ವಾದ ಮಾಡಬೇಕು ಎಂದು ಬಿಜೆಪಿ ಪಕ್ಷದ ನಿಯೋಜಿತ ಅಭ್ಯರ್ಥಿ ಸಿ.ಹೆಚ್.ವಿಜಯಶಂಕರ್ ಮನವಿ ಮಾಡಿದರು.

ಪಟ್ಟಣದ ಗೋಣಿಕೊಪ್ಪ ರಸ್ತೆಯಲ್ಲಿರುವ ಬಿಜೆಪಿ ಪಕ್ಷದ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

ನಾನು 5 ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ 2 ಬಾರಿ ಸಂಸದನಾಗಿ, ಒಮ್ಮೆ ಶಾಸಕನಾಗಿ ವಿಧಾನ ಪರಿಷತ್ ಸದಸ್ಯನಾಗಿ ಮಂತ್ರಿಯಾಗಿ ಕೆಲಸ ಮಾಡಿದ್ದೇನೆ ಆದರೂ ಕಳೆದ 3 ಲೋಕಸಭಾ ಚುಣಾವಣೆಗಳಲ್ಲಿ ಸೋತಿದ್ದೇನೆ. ಇದು ನನ್ನ ರಾಜಕೀಯ ಜೀವನದ ಕೊನೆಯ ಚುನಾವಣೆ 14 ವರ್ಷದ ರಾಜಕೀಯ ವನವಾಸ ಕೊನೆಯಾಗಬೇಕು ಎಂಬ ಉದ್ದೇಶದಿಂದ ಪಿರಿಯಾಪಟ್ಟಣವನ್ನು ಆಯ್ಕೆ ಮಾಡಿಕೊಂಡು ಸ್ಪರ್ಧೆ ಮಾಡುತ್ತಿದ್ದೇನೆ ತಾಲೂಕಿನ ಜನತೆ ಸಹಕಾರ ನೀಡಬೇಕು. ತಾಲೂಕಿನಾದ್ಯಂತ ಪ್ರಚಾರ ಕೈಗೊಂಡ ವೇಳೆ ಮತದಾರರಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ, ತಾಲೂಕಿನ ಜನತೆ ಈ ಬಾರಿ ಬದಲಾವಣೆ ಬಯಸಿ ನನ್ನ ಗೆಲುವಿಗೆ ಸಹಕರಿಸಲಿದ್ದಾರೆ ಈ ಮೂಲಕ ಸಂಸತ್ ಚುನಾವಣೆಯಲ್ಲಿ ಸತತ ಮೂರು ಬಾರಿ ಸೋಲುಂಡ ನನ್ನ 14 ವರ್ಷಗಳ ರಾಜಕೀಯ ವನವಾಸ ಅಂತ್ಯವಾಗುವ ಭರವಸೆ ಇದೆ ಎಂದರು.

ನಾನು ಯಾವುದೇ ಲಾಬಿಯ ಹಿಂದೆಯಿಲ್ಲ ರಿಯಲ್ ಎಸ್ಟೆಟ್ ಮೈನಿಂಗ್ ನನಗೆ ಗೊತ್ತಿಲ್ಲ ಅದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ರೈತರು ಬಡವರ ಜನಸಾಮಾನ್ಯರ ಪರ ಅಧಿಕಾರವಧಿಯಲ್ಲಿ ಶುದ್ಧ ಆಡಳಿತ ನೀಡಿದ್ದೇನೆ, 2009 ನಲ್ಲಿ ಸಂಸತ್ ಚುನಾವಣೆಯಲ್ಲಿ ಸೋತ ಬಳಿಕ ಬಿ.ಎಸ್ ಯಡಿಯೂರಪ್ಪ ಅವರು ವಿಧಾನಪರಿಷತ್ ಸದಸ್ಯನಾಗಿ ಮಾಡಿ ಅರಣ್ಯ ಸಚಿವನಾಗಿ ಕರ್ತವ್ಯ ನಿರ್ವಹಿಸಲು ಅವಕಾಶ ಮಾಡಿಕೊಟ್ಟರು ನನ್ನ ಎಲ್ಲಾ ಚುನಾವಣೆಗಳಲ್ಲೂ ಧರ್ಮದ ಆಧಾರದ ಮೇಲೆ ಚುನಾವಣಾ ಕಣದಲ್ಲಿದ್ದೇನೆ, ಪಕ್ಷದಲ್ಲಿನ ಹಿರಿತನ ಹಾಗೂ ಸಾಮಾಜಿಕ ನ್ಯಾಯದ ಆಧಾರದ ಮೇಲೆ ಪಕ್ಷ ನನ್ನನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದು ಪಕ್ಷದ ಪ್ರತಿಯೊಬ್ಬರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಮೂಲಕ ಸಂಘಟನೆಗೆ ಒತ್ತು ನೀಡುತ್ತೇನೆ ಎಂದರು.

ಮಾಜಿ ಶಾಸಕ ಎಚ್.ಸಿ ಬಸವರಾಜು ಅವರು ಮಾತನಾಡಿ ತಾಲೂಕಿನಲ್ಲಿ ಈ ಬಾರಿ 1999 ರ ವಿಧಾನಸಭಾ ಚುನಾವಣಾ ಫಲಿತಾಂಶ ಮರುಕಳಿಸುವ ವಿಶ್ವಾಸವಿದೆ, ಅಂದಿನ ಚುನಾವಣೆಗೂ ಇಂದಿಗೂ ಬಹಳ ವ್ಯತ್ಯಾಸವಿದ್ದು ಪ್ರಸ್ತುತ ಬಿಜೆಪಿ ಪಕ್ಷ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ಷಮತೆಯಿಂದಾಗಿ ವಿಶ್ವದಲ್ಲೇ ಹೆಸರುವಾಸಿಯಾಗಿದ್ದು ಈ ಬಾರಿ ತಾಲೂಕಿನಲ್ಲಿ ಸಿ.ಎಚ್ ವಿಜಯಶಂಕರ್ ಗೆಲ್ಲಲಿದ್ದಾರೆ ಅವರ ಗೆಲುವಿಗೆ ತಾಲೂಕಿನಾದ್ಯಂತ ಪ್ರಚಾರ ಕೈಗೊಳ್ಳುವುದಾಗಿ ತಿಳಿಸಿದರು.

ತಾಲೂಕು ಅಧ್ಯಕ್ಷ ಎಂ.ಎಂ ರಾಜೇಗೌಡ ಅವರು ಮಾತನಾಡಿ ರಾಜಕಾರಣದಲ್ಲಿ ನುರಿತ ಮತ್ತು ಸಜ್ಜನಿಕೆಗೆ ಹೆಸರುವಾಸಿಯಾದ ಸಿ.ಎಚ್ ವಿಜಯಶಂಕರ್ ಅವರ ಆಯ್ಕೆ ಅಭಿನಂದನೀಯ, ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಈ ಬಾರಿ ತಾಲೂಕಿನಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಶತಸಿದ್ಧ, ವಿರೋಧಿಗಳ ಟೀಕೆ ಟಿಪ್ಪಣಿಗಳಿಗೆ ಚುನಾವಣಾ ಫಲಿತಾಂಶ ತಕ್ಕ ಉತ್ತರ ನೀಡಲಿದೆ, ನಾವು ಯಾರನ್ನು ಗೆಲ್ಲಿಸಲು ಅಥವಾ ಸೋಲಿಸಲು ಚುನಾವಣೆ ಎದುರಿಸುತ್ತಿಲ್ಲ ನಮ್ಮ ಅಭ್ಯರ್ಥಿಯ ಪರ ಮತ ಕೇಳಿ ಗೆಲುವಿಗೆ ಶ್ರಮವಹಿಸಲಿದ್ದೇವೆ ಎಂದರು.

ಈ ಸಂದರ್ಭ ಪ್ರಧಾನ ಕಾರ್ಯದರ್ಶಿ ಹೆಚ್.ಸಿ.ವೀರಭದ್ರ, ಮುಖಂಡರಾದ ಆರ್.ಟಿ ಸತೀಶ್, ವಿಕ್ರಮ್ ರಾಜ್, ಅಣ್ಣಪ್ಪ, ಲೋಕಪಾಲಯ್ಯ, ಕಿರಣ್ ಜಯರಾಮೇಗೌಡ, ಪಿ.ಜೆ ರವಿ, ಚುನಾವಣಾ ಉಸ್ತುವಾರಿ ವಿಜಯಕುಮಾರ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.