ನಾನು ಹಣ ಪಡೆದಿಲ್ಲ: ಬೈರತಿ ಬಸವರಾಜು
Team Udayavani, Nov 6, 2019, 9:10 PM IST
ಕೆ.ಆರ್.ಪುರ: “ಹಣ ಪಡೆದು ಬಿಜೆಪಿಗೆ ಸೇರಿಕೊಂಡಿದ್ದಾರೆ ಎಂದು ನನ್ನ ಬಗ್ಗೆ ಅಪಪ್ರಚಾರ ಮಾಡುವವರು ಧರ್ಮಸ್ಥಳ ಮಂಜುನಾಥ ಸ್ವಾಮಿಯ ಮುಂದೆ ಬಂದು ಪ್ರಮಾಣ ಮಾಡಲಿ’ ಎಂದು ಅನರ್ಹ ಶಾಸಕ ಬೈರತಿ ಬಸವರಾಜು ಅವರು ಸವಾಲು ಹಾಕಿದ್ದಾರೆ.
ಬೆಂಗಳೂರಿನ ಕೆ.ಆರ್.ಪುರದಲ್ಲಿ ಮಾತನಾಡಿ, “ಹಣ ತೆಗೆದುಕೊಂಡು ಬಿಜೆಪಿಗೆ ಸೇರಿದ್ದಾರೆ ಎಂದು ಕೆಲವರು ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಅವರಿಗೆ ನೇರವಾಗಿ ಸವಾಲು ಹಾಕುತ್ತೇನೆ. ನದಿ ನೀರಿನಲ್ಲಿ ಸ್ನಾನ ಮಾಡಿ, ಒದ್ದೆ ಬಟ್ಟೆಯಲ್ಲಿ ಧರ್ಮಸ್ಥಳದ ಮಂಜುನಾಥೇಶ್ವರ ಸ್ವಾಮಿಯ ಮುಂದೆ ನಿಂತು ನಾನು ಪ್ರಮಾಣ ಮಾಡುತ್ತೇನೆ. ಅಪಪ್ರಚಾರ ಮಾಡುವವರು ತಾಕತ್ತಿದ್ದರೆ ನಾನು ಹಣ ಪಡೆದಿದ್ದೇನೆ ಎಂದು ಪ್ರಮಾಣ ಮಾಡಲಿ’ ಎಂದು ಸವಾಲು ಹಾಕಿದರು.
“ನಾನು ಯಾರ ಹಂಗಿನಲ್ಲೂ ಇಲ್ಲ. ಒಂದು ಕಪ್ ಕಾಫಿ ಕೂಡ ತೆಗೆದುಕೊಂಡಿಲ್ಲ. ಕೆಲವರು ಬೈರತಿ ಬಸವರಾಜ್ ಅವರು ಬಿಜೆಪಿಯಿಂದ ಹಣ ತೆಗೆದುಕೊಂಡಿದ್ದಾರೆ ಎಂದು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ನಾನು ಬಿಜೆಪಿಯಿಂದ ಹಣ ತೆಗೆದುಕೊಂಡಿದ್ದರೆ ದೇವರು ನನಗೆ ಶಿಕ್ಷೆ ನೀಡಲಿ’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು