ರಾಜಕೀಯ ಬೆಳವಣಿಗೆ ಬಗ್ಗೆ ನನಗೇನೂ ಆತಂಕವಿಲ್ಲ, ನನಗೆ ಸಂಬಂಧವೂ ಇಲ್ಲ: ಕುಮಾರಸ್ವಾಮಿ
Team Udayavani, Jul 8, 2019, 2:53 PM IST
ಬೆಂಗಳೂರು: ರಾಜ್ಯ ರಾಜಕಾರಣದ ಬೆಳವಣಿಗೆ ಬಗ್ಗೆ ನನಗೇನೂ ಆತಂಕವಿಲ್ಲ. ಸರ್ಕಾರಕ್ಕೆ ಏನೂ ಆಗಲ್ಲ. ನನಗೆ ನನ್ನ ಜವಾಬ್ದಾರಿ ಮುಖ್ಯ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಮೈತ್ರಿ ಸರ್ಕಾರದ ಶಾಸಕರ ರಾಜೀನಾಮೆ ಕುರಿತಂತೆ ಸೋಮವಾರ ಸುದ್ದಿಗಾರರು ಪ್ರಶ್ನಿಸಿದಾಗ, ಬಿಜೆಪಿಯವರು ಏನ್ ಮಾಡುತ್ತಾರೆ, ಬೇರೆಯವರು ಏನ್ ಮಾಡುತ್ತಾರೆ ಎಂಬುದು ನನಗೆ ಸಂಬಂಧವಿಲ್ಲ ಎಂದರು.
ಅಮೆರಿಕದಿಂದ ಬೆಂಗಳೂರಿಗೆ ವಾಪಸ್ ಆದ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಅವರು, ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದ ಜವಾಬ್ದಾರಿ ನಿರ್ವಹಣೆ ಮಾಡುವ ಬಗ್ಗೆ ಗಮನಹರಿಸಿದ್ದೇನೆ. ರೈತರ ಸಮಸ್ಯೆಗಳ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇನೆ ಎಂದು ಹೇಳಿದರು.