PVN, ಸಿಂಗ್, ಸ್ವಾಮಿನಾಥನ್ ಗೆ ಭಾರತ ರತ್ನ ಘೋಷಣೆ ಸ್ವಾಗತಿಸುವೆ: ಸೋನಿಯಾ ಗಾಂಧಿ
Team Udayavani, Feb 9, 2024, 3:23 PM IST
ನವದೆಹಲಿ: ಮಾಜಿ ಪ್ರಧಾನಿಗಳಾದ ಪಿ.ವಿ.ನರಸಿಂಹ ರಾವ್, ಚೌಧರಿ ಚರಣ್ ಸಿಂಗ್ ಹಾಗೂ ವಿಜ್ಞಾನಿ ಎಂಎಸ್ ಸ್ವಾಮಿನಾಥನ್ ಅವರಿಗೆ ಕೇಂದ್ರ ಸರ್ಕಾರ ಶುಕ್ರವಾರ (ಫೆ.09) ದೇಶದ ಅತ್ಯುನ್ನತ ಪ್ರಶಸ್ತಿಯಾದ ಭಾರತ ರತ್ನ ಘೋಷಿಸಿರುವುದನ್ನು ಸ್ವಾಗತಿಸುವುದಾಗಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹೇಳಿದ್ದಾರೆ.
ಲೋಕಸಭೆಯ ಹೊರಗೆ ಸುದ್ದಿಗಾರರ ಜತೆ ಮಾತನಾಡಿದ ಸೋನಿಯಾ ಗಾಂಧಿ, ಭಾರತ ರತ್ನ ಪ್ರಶಸ್ತಿ ಘೋಷಿಸಿರುವುದನ್ನು ಸ್ವಾಗತಿಸುವೆ ಎಂದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಮೂವರಿಗೆ ಭಾರತ ರತ್ನ ಪ್ರಶಸ್ತಿ ಘೋಷಿಸಿರುವ ಬಗ್ಗೆ ಎಕ್ಸ್ ನಲ್ಲಿ ತಿಳಿಸಿದ್ದರು. ಮಾಜಿ ಪ್ರಧಾನಿ ನರಸಿಂಹರಾವ್ ಅವರು ದೇಶದ ರಾಜಕೀಯ ರೂಪಾಂತರಕ್ಕೆ ಸಾಂಸ್ಕೃತಿಕವಾಗಿ ಮತ್ತು ಬೌದ್ಧಿಕ ಪರಂಪರೆಗೆ ಮಹತ್ವದ ಕೊಡುಗೆ ನೀಡಿರುವುದಾಗಿ ಪ್ರಧಾನಿ ಮೋದಿ ಉಲ್ಲೇಖಿಸಿದ್ದರು. ದೇಶದ ಆರ್ಥಿಕ ತಳಗಟ್ಟನ್ನು ಭದ್ರಗೊಳಿಸುವಲ್ಲಿ ಪಿವಿಎನ್ ಕೊಡುಗೆ ಅಪಾರವಾಗಿದೆ. ಅದೇ ರೀತಿ ಚರಣ್ ಸಿಂಗ್ ಅವರು ದೇಶಕ್ಕೆ ನೀಡಿರುವ ಕೊಡುಗೆ ಅನುಪಮವಾದದ್ದು. ಎಂಎಸ್ ಸ್ವಾಮಿನಾಥನ್ ಅವರು ದೇಶದ ಕೃಷಿ ಮತ್ತು ರೈತರ ಏಳಿಗೆಗೆ ಅದ್ವಿತೀಯ ಕೊಡುಗೆ ನೀಡಿದ್ದರು ಎಂದು ಪ್ರಧಾನಿ ಮೋದಿ ಎಕ್ಸ್ ನಲ್ಲಿ ಶ್ಲಾಘಿಸಿದ್ದಾರೆ.
ಕಳೆದ ವಾರ ಕೇಂದ್ರ ಸರ್ಕಾರ ಎಲ್.ಕೆ.ಅಡ್ವಾಣಿ ಮತ್ತು ಕರ್ಪೂರಿ ಠಾಕೂರ್ ಅವರಿಗೆ ಭಾರತ ರತ್ನ ಘೋಷಿಸಿತ್ತು. ಕೇಂದ್ರ ಸರ್ಕಾರ ಈ ಬಾರಿ ಐದು ಗಣ್ಯರಿಗೆ ಭಾರತ ರತ್ನ ಘೋಷಿಸಿದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ