ICC ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ : ಜೂ.2 ರಂದು ಭಾರತ ತಂಡ ಇಂಗ್ಲೆಂಡ್‌ಗೆ


Team Udayavani, May 9, 2021, 6:40 AM IST

ICC ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ : ಜೂ.2 ರಂದು ಭಾರತ ತಂಡ ಇಂಗ್ಲೆಂಡ್‌ಗೆ

ಹೊಸದಿಲ್ಲಿ : ಐಸಿಸಿ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಮತ್ತು ಅನಂತರ ಇಂಗ್ಲೆಂಡ್‌ ವಿರುದ್ಧ ಆಡಲಾಗುವ ಟೆಸ್ಟ್‌ ಸರಣಿಗಾಗಿ ಭಾರತ ತಂಡ ಜೂ. ಎರಡರಂದು ಯು.ಕೆ. ವಿಮಾನ ಏರಲಿದೆ.

ಇದೊಂದು ಸುದೀರ್ಘ‌ ಸರಣಿಯಾದ ಕಾರಣ ಕ್ರಿಕೆಟಿಗರ ಕುಟುಂಬದವರಿಗೂ ಇಂಗ್ಲೆಂಡಿಗೆ ತೆರಳಲು ಅನುಮತಿ ನೀಡಲಾಗಿದೆ. ಆದರೆ ಪತ್ನಿ, ಮಕ್ಕಳೆಲ್ಲ ಆರಂಭದಲ್ಲೇ ಕ್ರಿಕೆಟಿಗರ ಜತೆ ಇರುತ್ತಾರೋ ಅಥವಾ ಪ್ರವಾಸದ ಮಧ್ಯ ಭಾಗದಲ್ಲಿ ಸೇರಿಕೊಳ್ಳುತ್ತಾರೋ ಎಂಬುದು ಇನ್ನೂ ಖಾತ್ರಿಯಾಗಿಲ್ಲ.

ಇಂಗ್ಲೆಂಡಿಗೆ ತೆರಳುವ ಮುನ್ನ ಎಲ್ಲರೂ ಮುಂಬಯಿಯಲ್ಲಿ 8 ದಿನ ಕ್ವಾರಂಟೈನ್‌ಗೆ ಒಳಗಾಗಬೇಕಿದೆ. ಲಂಡನ್‌ಗೆ ಬಂದಿಳಿದ ಬಳಿಕ ಮತ್ತೆ 10 ದಿನಗಳ ಸಾಫ್ಟ್ ಕ್ವಾರಂಟೈನ್‌ ಇರಲಿದೆ. ಆದರೆ “ಬಬಲ್‌ ಟು ಬಬಲ್‌’ ಪ್ರಯಾಣವಾದ ಕಾರಣ ಲಂಡನ್‌ ಕ್ವಾರಂಟೈನ್‌ ಅವಧಿಯನ್ನು ಕಡಿಮೆಗೊಳಿಸಲು ಬಿಸಿಸಿಐ ಪ್ರಯತ್ನಿಸಲಿದೆ.

ಭಾರತದ ಕ್ರಿಕೆಟಿಗರೆಲ್ಲ ಸೌತಾಂಪ್ಟನ್‌ನ “ಹಿಲ್ಟನ್‌ ಹೊಟೇಲ್‌’ ನಲ್ಲಿ ಉಳಿದುಕೊಳ್ಳಲಿದ್ದಾರೆ. ಸಾಫ್ಟ್ ಕ್ವಾರಂಟೈನ್‌ ಅವಧಿಯಲ್ಲಿ ಆಟಗಾರರ ಅಭ್ಯಾಸಕ್ಕೇನೂ ಅಡ್ಡಿ ಇರದು.

ಗಂಗೂಲಿ, ಶಾ ಪಯಣ
ಭಾರತ-ನ್ಯೂಜಿಲ್ಯಾಂಡ್‌ ನಡುವಿನ ಐಸಿಸಿ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ವೀಕ್ಷಿಸಲು ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ ಮತ್ತು ಕಾರ್ಯದರ್ಶಿ ಜಯ್‌ ಶಾ ಇಂಗ್ಲೆಂಡಿಗೆ ತೆರಳಲಿದ್ದಾರೆ. ಹಾಗೆಯೇ ಉಳಿದ 31 ಐಪಿಎಲ್‌ ಪಂದ್ಯಗಳನ್ನು ಇಂಗ್ಲೆಂಡ್‌ನ‌ಲ್ಲಿ ಆಯೋಜಿಸುವ ಕುರಿತು ಇವರು ಇಸಿಬಿ ಜತೆ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಲಸಿಕೆ ಕಡ್ಡಾಯ
ಇಂಗ್ಲೆಂಡಿಗೆ ವಿಮಾನ ಏರುವ ಮೊದಲು ಕ್ರಿಕೆಟಿಗರೆಲ್ಲ ಮೊದಲ ಸುತ್ತಿನ ವ್ಯಾಕ್ಸಿನ್‌ ಪಡೆಯಬೇಕೆಂದು ಬಿಸಿಸಿಐ ಸೂಚಿಸಿದೆ. ಆದರೆ ಪಾಸಿಟಿವ್‌ ಫ‌ಲಿತಾಂಶ ಹೊಂದಿರುವ ಪ್ರಸಿದ್ಧ್ ಕೃಷ್ಣ ಅವರಿಗೆ ಇದು ಸಾಧ್ಯವಾಗದು.

ಭಾರತದಲ್ಲೇ ಮೊದಲ ಸುತ್ತಿನಲ್ಲಿ ಕೊವಿಶೀಲ್ಡ್‌ ಲಸಿಕೆ ಪಡೆದರೆ ಇಂಗ್ಲೆಂಡ್‌ನ‌ಲ್ಲಿ ಎರಡನೇ ಸುತ್ತಿನ ಲಸಿಕೆ ಹಾಕಿಸಿಕೊಳ್ಳಬಹುದಾಗಿದೆ. ಆದರೆ ಅದು ಆಕ್ಸ್‌ಫ‌ರ್ಡ್‌ ವ್ಯಾಕ್ಸಿನ್‌ ಆಗಿರುತ್ತದೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.