ಐಸಿಸಿ ವಿಶ್ವ ಟೆಸ್ಟ್‌ ಫೈನಲ್‌ ಪಂದ್ಯ ಡ್ರಾ ಆದರೆ? ಶೀಘ್ರವೇ ಐಸಿಸಿಯಿಂದ ನಿಯಮಾವಳಿ ಬಿಡುಗಡೆ


Team Udayavani, May 20, 2021, 6:50 AM IST

ಐಸಿಸಿ ವಿಶ್ವ ಟೆಸ್ಟ್‌ ಫೈನಲ್‌ ಪಂದ್ಯ ಡ್ರಾ ಆದರೆ? ಶೀಘ್ರವೇ ಐಸಿಸಿಯಿಂದ ನಿಯಮಾವಳಿ ಬಿಡುಗಡೆ

ಹೊಸದಿಲ್ಲಿ: ಹೌದು, ಭಾರತ-ನ್ಯೂಜಿಲ್ಯಾಂಡ್‌ ನಡುವಿನ ಐಸಿಸಿ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಪಂದ್ಯ ಡ್ರಾ ಆದರೆ, ಅಥವಾ ಟೈ ಆಗಿ ಅಂತ್ಯ ಕಂಡರೆ, ಇದಕ್ಕೂ ಮಿಗಿಲಾಗಿ ವಾಶೌಟ್‌ ಆದರೆ ಆಗ ಚಾಂಪಿಯನ್‌ ಆಗುವವರು ಯಾರು? ಅಕಸ್ಮಾತ್‌ ಒಂದು ಇನ್ನಿಂಗ್ಸ್‌ ಕೂಡ ಪೂರ್ತಿಗೊಳ್ಳದೆ ಹೋದರೆ ವಿಜೇತ ತಂಡವನ್ನು ಹೇಗೆ ನಿರ್ಧರಿಸಲಾಗುತ್ತದೆ? ಇಂಥದೊಂದು ಕುತೂಹಲ ಕ್ರಿಕೆಟ್‌ ಅಭಿಮಾನಿಗಳನ್ನು ಕಾಡತೊಡಗಿದೆ.

ಇದಕ್ಕೆ ಶೀಘ್ರದಲ್ಲೇ ಐಸಿಸಿ ನಿಯಮಾವಳಿಯೊಂದನ್ನು ರೂಪಿಸಲಿದೆ. ಆಗ ಈ ಎಲ್ಲ ಪ್ರಶ್ನೆಗಳಿಗೂ ಉತ್ತರ ಲಭಿಸಲಿದೆ.

ಪ್ರತಿಷ್ಠೆಯ ಕಾಳಗ
ಸಾಮಾನ್ಯವಾಗಿ ಏಕದಿನ ಅಥವಾ ಟಿ20 ಪಂದ್ಯಗಳಲ್ಲಿ ಇಂಥ ಸಮಸ್ಯೆ ಉದ್ಭವಿಸುವುದಿಲ್ಲ. ಅಲ್ಲಿ ಸೂಪರ್‌ ಓವರ್‌ ಅಥವಾ ಡಕ್‌ವರ್ತ್‌-ಲೂಯಿಸ್‌ ನಿಯಮದ ಮೂಲಕ ಸ್ಪಷ್ಟ ಫ‌ಲಿತಾಂಶವನ್ನು ಪಡೆದುಕೊಳ್ಳಲಾಗುತ್ತದೆ. ಸೂಪರ್‌ ಓವರ್‌ ಕೂಡ ಟೈ ಆದರೆ ಅತ್ಯಧಿಕ ಬೌಂಡರಿ ಬಾರಿಸಿದ ತಂಡವನ್ನು ಚಾಂಪಿಯನ್‌ ಎಂದು ತೀರ್ಮಾನಿಸಿದ ವಿಚಿತ್ರ ಘಟನೆಗೆ 2019ರ ಏಕದಿನ ವಿಶ್ವಕಪ್‌ ಫೈನಲ್‌ ಸಾಕ್ಷಿಯಾಗಿದ್ದನ್ನು ಮರೆಯಲಾದೀತೇ!

ಆದರೆ ಟೆಸ್ಟ್‌ ಕ್ರಿಕೆಟ್‌ನಲ್ಲಿ ಇದು ಸಾಧ್ಯವಿಲ್ಲ. ಅದರಲ್ಲೂ ವಿಶ್ವ ಚಾಂಪಿಯನ್‌ಶಿಪ್‌ ಫೈನಲ್‌ ಎಂಬುದು ಅತ್ಯಂತ ಪ್ರತಿಷ್ಠೆಯ ಕಾಳಗ. ಇಲ್ಲಿ ತಂಡವೊಂದು ಜಯ ಸಾಧಿಸಿ ಟ್ರೋಫಿ ಎತ್ತಿದಾಗಲೇ ಅದಕ್ಕೊಂದು ಶೋಭೆ, ಪಂದ್ಯಾವಳಿ ಗೊಂದು ಸಾರ್ಥಕ್ಯ.
ಟೆಸ್ಟ್‌ ಪಂದ್ಯದಲ್ಲಿ ಡ್ರಾ ಫ‌ಲಿತಾಂಶಕ್ಕೂ ಮಾನ್ಯತೆ ಇದೆ. ಸೋಲನ್ನು ತಪ್ಪಿಸಿಕೊಳ್ಳಬೇಕಾದ ಅನಿವಾರ್ಯ ಸಂದರ್ಭಗಳಲ್ಲಿ ತಂಡ ಡ್ರಾಗೆ ಪ್ರಯತ್ನಿಸುವುದು ಮಾಮೂಲು ಪ್ರಕ್ರಿಯೆ. ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ನಲ್ಲೂ ಇಂಥದೇ ಸಂದರ್ಭ ಎದುರಾಗಬಹುದು. ಆಗ ಚಾಂಪಿಯನ್‌ ತಂಡವೊಂದನ್ನು ನಿರ್ಧರಿ ಸಲೇಬೇಕಾದ ಅನಿವಾರ್ಯತೆ ಇದೆ. ಇದಕ್ಕೇನು ಮಾನದಂಡ ಎಂಬುದು ಅತ್ಯಂತ ಕುತೂಹಲದ ಸಂಗತಿ.

ಸ್ಪಷ್ಟ ನಿಯಮಾವಳಿ ಅಗತ್ಯ
“ಇದು ದ್ವಿಪಕ್ಷೀಯ ಸರಣಿ ಅಲ್ಲ. ಹೀಗಾಗಿ ನಾವು ಪಂದ್ಯದ ನಿಯಮವನ್ನು ಸ್ಪಷ್ಟವಾಗಿ ತಿಳಿದುಕೊಳ್ಳಬೇಕಿದೆ. ಇಲ್ಲಿ ಮೂರು ಅಂಶಗಳಿವೆ. ಪಂದ್ಯ ಟೈ ಆದರೆ, ವಾಶೌಟ್‌ ಆದರೆ ಅಥವಾ ತಂಡಗಳ ಒಂದು ಇನ್ನಿಂಗ್ಸ್‌ ಕೂಡ ಮುಗಿಯದೇ ಹೋದರೆ ಆಗ ವಿಜೇತರನ್ನು ನಿರ್ಧರಿಸುವುದು ಹೇಗೆ ಎಂಬುದನ್ನು ತಿಳಿಯಬೇಕಿದೆ’ ಎಂದು ಬಿಸಿಸಿಐ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಕೆಲವು ಸಾಧ್ಯತೆಗಳು…
1. ಎರಡೂ ತಂಡಗಳನ್ನು ಜಂಟಿ ವಿಜೇತರೆಂದು ಘೋಷಿಸುವುದು.
2. ಮೀಸಲು ದಿನವನ್ನು ನೀಡಿ ಸ್ಪಷ್ಟ ಫ‌ಲಿತಾಂಶ ಬರುವ ತನಕ ಕಾಯುವುದು.
3. ಐದು ದಿನಗಳ ಮಿತಿಯನ್ನು ತೆಗೆದು ಫ‌ಲಿತಾಂಶ ಬರುವ ತನಕವೂ ಪಂದ್ಯವನ್ನು ಮುಂದುವರಿಸುವುದು (ಟೈಮ್‌ ಲೆಸ್‌ ಟೆಸ್ಟ್‌).
4. ಮೊದಲ ಇನ್ನಿಂಗ್ಸ್‌ ಮುನ್ನಡೆಯ ಆಧಾರದಲ್ಲಿ ತಂಡವನ್ನು ಚಾಂಪಿಯನ್‌ ಎಂದು ತೀರ್ಮಾನಿಸುವುದು.
5. “ಲೀಗ್‌’ ಹಂತದಲ್ಲಿ ಅತ್ಯಧಿಕ ಅಂಕ ಹೊಂದಿದ್ದ ತಂಡವೇ ಚಾಂಪಿಯನ್‌ ಎಂಬ ತೀರ್ಮಾನಕ್ಕೆ ಬರುವುದು.
6. ಪ್ರತೀ ಹಂತದದಲ್ಲಿ (ಪ್ರತೀ 100 ರನ್ನಿಗೆ, ಪ್ರತೀ 5 ವಿಕೆಟಿಗೆ) ಅಂಕಗಳನ್ನು ನೀಡಿ, ಅತ್ಯಧಿಕ ಅಂಕ ಗಳಿಸಿದ ತಂಡಕ್ಕೆ ಟ್ರೋಫಿ ನೀಡುವುದು.

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.