ಐಇಡಿ ತಜ್ಞ, ಜೈಶ್‌ ಉಗ್ರ ಮುನ್ನಾ ಲಹೋರಿ ಹತ

ಮಾ.30, ಜೂ.17ರ ದಾಳಿಯ ಸೂತ್ರಧಾರ ಲಹೋರಿ

Team Udayavani, Jul 28, 2019, 6:11 AM IST

ied

ಶ್ರೀನಗರ: ಜಮ್ಮು – ಕಾಶ್ಮೀರದಲ್ಲಿ ಉಗ್ರರನ್ನು ನಿರ್ದಾಕ್ಷಿಣ್ಯವಾಗಿ ಮಟ್ಟ ಹಾಕುತ್ತಿರುವ ಭದ್ರತಾ ಪಡೆಗಳಿಗೆ ಶನಿವಾರ ಮಹತ್ವದ ಯಶಸ್ಸು ಪ್ರಾಪ್ತಿಯಾಗಿದೆ. ಶೋಪಿಯಾನ್‌ನಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಪಾಕ್‌ ನಾಗರಿಕ, ಜೆಇಎಂನ ಪ್ರಮುಖ ನಾಯಕ ಮುನ್ನಾ ಲಹೋರಿ ಮತ್ತು ಹಿಜ್ಬುಲ್ ಮುಜಾಹಿದೀನ್‌ಗೆ ಸೇರಿದ ಮತ್ತೂಬ್ಬನನ್ನು ಕೊಲ್ಲಲಾಗಿದೆ.

ಶೋಪಿಯಾನ್‌ ಜಿಲ್ಲೆಯ ಬಾಂಡೇ ಮೊಹಲ್ಲಾ ಎಂಬಲ್ಲಿ ಮುನ್ನಾ ಲಹೋರಿ ಮತ್ತು ಹಿಜ್ಬುಲ್ಗೆ ಸೇರಿದ ಮಿರ್‌ ಝೀನತ್‌-ಉಲ್-ಇಸ್ಲಾಮ್‌ ಎಂಬಾತ ಅವಿತಿರುವ ಮಾಹಿತಿ ಸಿಕ್ಕಿತ್ತು. ಕೂಡಲೇ ಕಾರ್ಯಾಚರಣೆ ಆರಂಭಿಸಿ ಅವರನ್ನು ಗುಂಡಿಕ್ಕಿ ಕೊಲ್ಲಲಾಗಿದೆ.

ಪ್ರಮುಖ ದಾಳಿಗಳಲ್ಲಿ ಭಾಗಿ

ಪಾಕ್‌ ನಾಗರಿಕನಾಗಿರುವ ಮುನ್ನಾ ಲಹೋರಿಗೆ ಬಿಹಾರಿ ಎಂಬ ಮತ್ತೂಂದು ಹೆಸರೂ ಇದೆ. ಈತ ಸುಧಾರಿತ ಸ್ಫೋಟಕ ಪರಿಣತ. ಮಾ.30ರಂದು ಬನಿಹಾಲ್ ಎಂಬಲ್ಲಿ ಸೇನಾ ಪಡೆ ಗಳ ಗಸ್ತು ವಾಹನದ ಮೇಲೆ ಮತ್ತು ಜೂ.17ರಂದು ಪುಲ್ವಾಮಾದ ಅರಿಹಾಲ್ ಎಂಬಲ್ಲಿ ಸೇನೆಯ ವಾಹನದಮೇಲೆ ನಡೆಸಲಾದ ದಾಳಿಯಲ್ಲಿ ಇಬ್ಬರು ಸೈನಿಕರು ಹುತಾತ್ಮರಾಗಿದ್ದರು. ಈ 2 ದಾಳಿಗಳ ಸಹಿತ ಕಣಿವೆ ರಾಜ್ಯದಲ್ಲಿ ನಾಗರಿಕರು ಮತ್ತು ಪೊಲೀಸ್‌ ಅಧಿಕಾರಿಗಳ ಮೇಲೆ ನಡೆದ ಹಲವು ಆಕ್ರಮಣಗಳಲ್ಲಿ ಲಹೋರಿ ನೇರ ಭಾಗಿಯಾಗಿದ್ದಾನೆ ಎಂದು ಸೇನೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹತ್ತು ಸಾವಿರ ಯೋಧರ ರವಾನೆ

ಅಗ್ರೇಸರ ಉಗ್ರರಿಬ್ಬರನ್ನು ಸದೆಬಡಿದ ದಿನವೇ ಕೇಂದ್ರ ಸರಕಾರ ಹತ್ತು ಸಾವಿರ ಮಂದಿ ಯೋಧರನ್ನು ಕಾಶ್ಮೀರಕ್ಕೆ ತುರ್ತಾಗಿ ಕಳುಹಿಸಿಕೊಟ್ಟಿದೆ. ಜು.25ರಂದೇ ಕೇಂದ್ರ ಗೃಹ ಸಚಿವಾಲಯ ಈ ಸಂಬಂಧ ಆದೇಶ ಹೊರಡಿಸಿತ್ತು. ಕೇಂದ್ರ ಸಶಸ್ತ್ರ ಪೊಲೀಸ್‌ ಪಡೆ (ಸಿಎಪಿಎಫ್)ಯ 100 ಕಂಪೆನಿಗಳನ್ನು ಕಳುಹಿಸಿ ಕೊಡುವಂತೆ ಈ ಆದೇಶದಲ್ಲಿ ಉಲ್ಲೇಖೀಸಲಾಗಿದೆ. ಸಿಆರ್‌ಪಿಎಫ್ನಿಂದ 50, ಸಶಸ್ತ್ರ ಸೀಮಾ ಬಲದಿಂದ 30, ಐಟಿಬಿಪಿ ಮತ್ತು ಬಿಎಸ್‌ಎಫ್ನಿಂದ ತಲಾ ಹತ್ತು ಕಂಪೆನಿಗಳನ್ನು ಆಯ್ಕೆ ಮಾಡಲಾಗಿದೆ. ಉಗ್ರ ನಿಗ್ರಹ ಹೋರಾಟದಲ್ಲಿ ಈ ಸಿಬಂದಿಯನ್ನು ನಿಯೋಜಿಸಲಾಗುತ್ತದೆ. ಆ.15ರ ವರೆಗೆ ಅಮರನಾಥ ಯಾತ್ರೆ ಇರುವುದರಿಂದಲೂ ಈ ನಿರ್ಧಾರ ಮಹತ್ವ ಪಡೆದಿದೆ. ಒಂದು ಸಿಎಪಿಎಫ್ ಬೆಟಾಲಿಯನ್‌ನಲ್ಲಿ ಒಂದು ಸಾವಿರ ಸಿಬಂದಿ ಇರಲಿದ್ದಾರೆ.
ಹತ್ತು ಸಾವಿರ ಯೋಧರ ರವಾನೆ

ಅಗ್ರೇಸರ ಉಗ್ರರಿಬ್ಬರನ್ನು ಸದೆಬಡಿದ ದಿನವೇ ಕೇಂದ್ರ ಸರಕಾರ ಹತ್ತು ಸಾವಿರ ಮಂದಿ ಯೋಧರನ್ನು ಕಾಶ್ಮೀರಕ್ಕೆ ತುರ್ತಾಗಿ ಕಳುಹಿಸಿಕೊಟ್ಟಿದೆ. ಜು.25ರಂದೇ ಕೇಂದ್ರ ಗೃಹ ಸಚಿವಾಲಯ ಈ ಸಂಬಂಧ ಆದೇಶ ಹೊರಡಿಸಿತ್ತು. ಕೇಂದ್ರ ಸಶಸ್ತ್ರ ಪೊಲೀಸ್‌ ಪಡೆ (ಸಿಎಪಿಎಫ್)ಯ 100 ಕಂಪೆನಿಗಳನ್ನು ಕಳುಹಿಸಿ ಕೊಡುವಂತೆ ಈ ಆದೇಶದಲ್ಲಿ ಉಲ್ಲೇಖೀಸಲಾಗಿದೆ. ಸಿಆರ್‌ಪಿಎಫ್ನಿಂದ 50, ಸಶಸ್ತ್ರ ಸೀಮಾ ಬಲದಿಂದ 30, ಐಟಿಬಿಪಿ ಮತ್ತು ಬಿಎಸ್‌ಎಫ್ನಿಂದ ತಲಾ ಹತ್ತು ಕಂಪೆನಿಗಳನ್ನು ಆಯ್ಕೆ ಮಾಡಲಾಗಿದೆ. ಉಗ್ರ ನಿಗ್ರಹ ಹೋರಾಟದಲ್ಲಿ ಈ ಸಿಬಂದಿಯನ್ನು ನಿಯೋಜಿಸಲಾಗುತ್ತದೆ. ಆ.15ರ ವರೆಗೆ ಅಮರನಾಥ ಯಾತ್ರೆ ಇರುವುದರಿಂದಲೂ ಈ ನಿರ್ಧಾರ ಮಹತ್ವ ಪಡೆದಿದೆ. ಒಂದು ಸಿಎಪಿಎಫ್ ಬೆಟಾಲಿಯನ್‌ನಲ್ಲಿ ಒಂದು ಸಾವಿರ ಸಿಬಂದಿ ಇರಲಿದ್ದಾರೆ.

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.