ಚಾಲನೆ ವೇಳೆ ಮೊಬೈಲ್ ಬಳಸಿದರೆ ಕ್ರಮ: ಸಚಿವ ಲಕ್ಷ್ಮಣ ಸವದಿ
Team Udayavani, Mar 20, 2020, 8:46 PM IST
ಸಾಂದರ್ಭಿಕ ಚಿತ್ರ.
ಬೆಂಗಳೂರು: ವಾಹನ ಚಲಾಯಿಸುವ ವೇಳೆ ಮೊಬೈಲ್ ಬಳಸುವ ಸರಕಾರಿ ಸಾರಿಗೆ ಮತ್ತು ಖಾಸಗಿ ಬಸ್ ಚಾಲಕರ ವಿರುದ್ಧ ಶಿಸ್ತುಕ್ರಮ ಜರಗಿಸಲಾಗುವುದು ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಎಚ್ಚರಿಕೆ ನೀಡಿದ್ದಾರೆ.
ಮೇಲ್ಮನೆಯಲ್ಲಿ ಕಾಂಗ್ರೆಸ್ ಸದಸ್ಯ ಪಿ.ಆರ್.ರಮೇಶ್ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬಸ್ ಚಾಲನೆ ವೇಳೆ ಮೊಬೈಲ್ ಬಳಕೆ ನಿಷೇಧಿಸಲಾಗಿದೆ. ಆದರೂ ಯಾರಿಗೂ ಕ್ಯಾರೆ ಎನ್ನದೇ ಮೊಬೈಲ್ ಬಳಸುವುದು ಸಾಮಾನ್ಯವಾಗಿದೆ. ಈ ಬಗ್ಗೆ ಸಾರ್ವಜನಿಕರು, ಪ್ರಯಾಣಿಕರಿಂದ ಸಾರಿಗೆ ಇಲಾಖೆಗೆ ದೂರು ಬಂದಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ ಸರಕಾರಿ, ಖಾಸಗಿ ಎನ್ನದೇ ಎಲ್ಲ ಚಾಲಕರ ವಿರುದ್ಧ ಶಿಸ್ತು ಕ್ರಮ ಜರಗಿಸಿ, ಕೇಸು ದಾಖಲಿಸಲು ಸಾರಿಗೆ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದರು.
ಬಿಎಸ್-6 ಬಸ್ಗಳು ರಸ್ತೆಗೆ
ಬೆಂಗಳೂರು ನಗರದಲ್ಲಿ ಬಸ್ಗಳಿಂದ ಆಗುವ ಮಾಲಿನ್ಯ ತಡೆಗೆ ಎಲ್ಲ ರೀತಿಯ ಕ್ರಮ ತೆಗೆದುಕೊಳ್ಳುತ್ತಿದ್ದೇವೆ. ಹೊಸ 1200 ಬಿಎಸ್-6 ಬಸ್ಗಳಿಗೆ ಕಾರ್ಯಾದೇಶ ನೀಡಲಾಗಿದೆ. ಎ. 1ರಿಂದ ಕೆಲವು ಬಸ್ಗಳು ರಸ್ತೆಗೆ ಇಳಿಯಲಿದೆ. ಅಲ್ಲದೆ ಖಾಸಗಿ ಗುತ್ತಿಗೆ ಆಧಾರದಲ್ಲಿ 400 ಎಲೆಕ್ಟ್ರಾನಿಕ್ ಬಸ್ ಖರೀದಿಗೆ ಟೆಂಡರ್ ಪ್ರಕ್ರಿಯೆ ಆರಂಭಿಸಿದ್ದೇವೆ. ಇದಕ್ಕಾಗಿ 100 ಕಡೆ ಚಾರ್ಜರ್ ಪಾಯಿಂಟ್ ಕೂಡ ತೆರೆಯಲಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ