ಕನಕಪುರ ಪ್ರಾಂತ್ಯದಲ್ಲಿ ಕಾವೇರಿ ಹೆಚ್ಚು ಮಲಿನ!

ಮದ್ರಾಸ್‌ ಐಐಟಿ ತಜ್ಞರ ವರದಿಯಲ್ಲಿ ಉಲ್ಲೇಖ ; ಸಾಂಪ್ರದಾಯಿಕ ತ್ಯಾಜ್ಯಗಳ ಜೊತೆಗೆ ಆಧುನಿಕ ತ್ಯಾಜ್ಯಗಳೂ ನೀರಿನಲ್ಲಿ ಪತ್ತೆ

Team Udayavani, Oct 8, 2021, 11:15 PM IST

ಕನಕಪುರ ಪ್ರಾಂತ್ಯದಲ್ಲಿ ಕಾವೇರಿ ಹೆಚ್ಚು ಮಲಿನ!

ಚೆನ್ನೈ: ಕರ್ನಾಟಕ ಹಾಗೂ ತಮಿಳುನಾಡಿನ ಜೀವನದಿಯಾಗಿರುವ ಕಾವೇರಿ ನದಿಯ ನೀರು, ಕರ್ನಾಟಕದ ಕನಕಪುರ ಹಾಗೂ ತಮಿಳುನಾಡಿನ ಮೆಟ್ಟೂರು ವ್ಯಾಪ್ತಿಯಲ್ಲಿ ಹೆಚ್ಚು ಕಲುಷಿತವಾಗುತ್ತಿದೆ ಎಂದು ಮದ್ರಾಸ್‌ ಐಐಟಿ ತಜ್ಞರ ವರದಿಯೊಂದು ಹೇಳಿದೆ.

ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ಪರಿಸರ ಇಲಾಖೆ ಮತ್ತು ಯುನೈಟೆಡ್‌ ಕಿಂಗ್‌ಡಮ್‌ನ ನ್ಯಾಚುಲರ್‌ ಎನ್ವಿರಾನ್‌ಮೆಂಟ್‌ ರಿಸರ್ಚ್‌ ಕೌನ್ಸಿಲ್‌ನ ಧನಸಹಾಯದಿಂದ ನಡೆಸಲಾಗಿರುವ ಈ ಸಂಶೋಧನೆಯಲ್ಲಿ, ಕಾವೇರಿಯ ನೀರಿನಲ್ಲಿ ಸಾಂಪ್ರದಾಯಿಕ ಮಲಿನತೆಯ ಜೊತೆಗೆ ಆಧುನಿಕ ತ್ಯಾಜ್ಯಗಳೂ (ಔಷಧಗಳು, ಕೀಟನಾಶಕಗಳು, ಕೈಗಾರಿಕಾ ತ್ಯಾಜ್ಯಗಳು ಇತ್ಯಾದಿ) ಕಾಣಿಸಿಕೊಂಡಿದ್ದು, ಇದರಿಂದ ಮನುಷ್ಯರಿಗೆ ಹಾಗೂ ಪರಿಸರಕ್ಕೆ ಹಾನಿಯಾಗುತ್ತದೆ ಎಂದು ವರದಿಯಲ್ಲಿ ಉಲ್ಲೇಖೀಸಲಾಗಿದೆ.

ವರದಿಯ ವಿಶೇಷತೆಯೇನು?
ಈ ಹಿಂದೆಯೂ ಕಾವೇರಿ ನೀರಿನ ಗುಣಮಟ್ಟವನ್ನು ಒರೆಗೆ ಹಚ್ಚುವಂಥ ಪರೀಕ್ಷೆಗಳು ನಡೆದಿದೆ. ಇದೇ ಮೊದಲ ಬಾರಿಗೆ ನದಿಯಲ್ಲಿನ ಮಲಿನಕ್ಕೆ ಕಾರಣವಾದ ಅಂಶಗಳ ಪ್ರಮಾಣವನ್ನು ಪತ್ತೆಹಚ್ಚಲಾಗಿದೆ. ಉದಾಹರಣೆಗೆ, ಕಾವೇರಿಯ ಪ್ರತಿ ಲೀಟರ್‌ ನೀರಿನಲ್ಲಿ 3,330.73 ನ್ಯಾನೋ ಗ್ರಾಂನಷ್ಟು ಕಾರ್ಬಾಮೆಝಿಪೈನ್‌ ಅಂಶವಿದೆ. ಇದು, ಅಪಸ್ಮಾರ ರೋಗಿಗಳಿಗೆ ನೀಡಲಾಗುವ ಔಷಧಿ. ಇದು ಆರೋಗ್ಯವಂತ ಮನುಷ್ಯರಲ್ಲಿ ಹಲವಾರು ಆರೋಗ್ಯ ಸಮಸ್ಯೆಯನ್ನು ಉಂಟು ಮಾಡುತ್ತದೆ. ಇಂಥ ಅನೇಕ ತ್ಯಾಜ್ಯಗಳೊಂದಿಗೆ, ಪರ್ನನಲ್‌ ಕೇರ್‌ ಸಾಮಗ್ರಿಗಳು, ಪ್ಲಾಸ್ಟಿಕ್‌, ಅಗ್ನಿಶಾಮಕ ರಾಸಾಯನಿಕಗಳು, ಭಾರದ ಲೋಹಗಳ ಅಂಶಗಳೂ ನೀರಿನಲ್ಲಿ ಕರಗತವಾಗಿವೆ. ಎಂದು ತಜ್ಞರು ತಿಳಿಸಿದ್ದಾರೆ.

ಇದನ್ನೂ ಓದಿ:

ತಜ್ಞರ ತಂಡ:
ಐಐಟಿ ಮದ್ರಾಸ್‌ನ ಜಯಕುಮಾರ್‌ ರಂಗನಾಥನ್‌, ಇನjಮಾಮ್‌ ಉಲ್‌ ಹಕ್‌ ಎಸ್‌., ಕಾಮರಾಜ್‌ ರಾಧಾಕೃಷ್ಣನ್‌, ಮಂಥಿರಮ್‌ ಕಾರ್ತಿಕ್‌ ರವಿಚಂದ್ರನ್‌, ಲಿಗೆ ಫಿಲಿಪ್‌. ನದಿ ಹರಿಯುವ ಪ್ರದೇಶಗಳಲ್ಲಿನ 12 ಸ್ಥಳಗಳಿಂದ ನೀರಿನ ಸ್ಯಾಂಪಲ್‌ ಪಡೆದು ಪರೀಕ್ಷೆ ನಡೆಸಲಾಗಿದೆ.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.