ನೆರೆ ಪರಿಹಾರದಲ್ಲಿ ಅಕ್ರಮ: ಮರು ಸಮೀಕ್ಷೆಗೆ ನಿರ್ಧಾರ


Team Udayavani, Nov 13, 2019, 7:00 AM IST

qq-50

ಬೆಂಗಳೂರು: ರಾಜ್ಯದ ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ಅಕ್ರಮ ನಡೆದಿರುವ ಆರೋಪ ಮೇಲಿಂದ ಮೇಲೆ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಮನೆಗಳ “ಮರು ಸಮೀಕ್ಷೆ’ಗೆ ಸರಕಾರ ಮುಂದಾಗಿದೆ.

ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ಅಕ್ರಮ ನಡೆಯುತ್ತಿದ್ದು, ಅನರ್ಹರಿಗೂ ಹೆಚ್ಚಿನ ಪ್ರಮಾಣದಲ್ಲಿ ಪರಿಹಾರ ನೀಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ನಿಜವಾದ ಸಂತ್ರಸ್ತರನ್ನು ಪತ್ತೆಹಚ್ಚಲು ಮರು ಸಮೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ಪ್ರಾಯೋಗಿಕವಾಗಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಮರು ಸಮೀಕ್ಷೆ ಕಾರ್ಯ ಕೈಗೊಳ್ಳಲಾಗುತ್ತಿದೆ.

ರಾಜ್ಯ ಸರಕಾರದ ಸುಮಾರು 38,000 ಕೋಟಿ ರೂ. ಪರಿಹಾರ ನೀಡಲು ಸಲ್ಲಿಕೆಯಾಗಿದ್ದ ಮನವಿ ಬಗ್ಗೆ ಕೇಂದ್ರ ಸರಕಾರ ಆಕ್ಷೇಪ ವ್ಯಕ್ತಪಡಿಸಿ, ಪರಿಹಾರದ ಸಮೀಕ್ಷೆ ಅವೈಜ್ಞಾನಿಕ ವಾಗಿತ್ತು ಎಂದು ಮರುಸಮೀಕ್ಷೆಗೆ ಸೂಚಿಸಿತ್ತು ಎನ್ನಲಾಗಿದೆ. ಅಲ್ಲದೆ ಹಾನಿಗೊಳಗಾದ ಮನೆಗಳ ಸಮೀಕ್ಷೆಯಲ್ಲಿ ತಾರತಮ್ಯವಾಗಿದ್ದು ಮರು ಸಮೀಕ್ಷೆ ನಡೆಸುವಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ “ಮರು ಸಮೀಕ್ಷೆ’ಗೆ ಯಡಿಯೂರಪ್ಪ ಸರಕಾರ ನಿರ್ಧರಿಸಿದೆ ಎಂದು ಹೇಳಲಾಗಿದೆ.

ಆಗಸ್ಟ್‌ ತಿಂಗಳಲ್ಲಿ ರಾಜ್ಯದ ಶತಮಾನದಲ್ಲಿಯೇ ಅತೀ ದೊಡ್ಡ ಪ್ರಮಾಣದ ಪ್ರವಾಹ ಉಂಟಾಗಿದ್ದು, 22 ಜಿಲ್ಲೆಗಳ 103 ತಾಲೂಕುಗಳು ತೊಂದರೆಗೀಡಾಗಿದ್ದವು. ಸಂತ್ರಸ್ತರಿಗೆ ಪರಿಹಾರ ಕೊಡಿಸುವಲ್ಲಿ ಮಧ್ಯ ವರ್ತಿಗಳು ಸೇರಿಕೊಂಡಿದ್ದು, ಸಿ ಗ್ರೇಡ್‌ ಹಾನಿ ಗೀಡಾದವರಿಗೆ ಎ ಗ್ರೇಡ್‌ ಹಾನಿಯ ಪರಿಹಾರ ಕೊಡಿಸಲು ಯತ್ನಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ನಿಜವಾದ ಸಂತ್ರಸ್ತರಿಗೆ ಮಾತ್ರ ಸೂಕ್ತ
ಪರಿಹಾರ ನೀಡಬೇಕು ಎನ್ನುವ ಕಾರಣಕ್ಕೆ ಸರಕಾರ ಮರು ಸಮೀಕ್ಷೆಗೆ ಮುಂದಾಗಿದೆ ಎನ್ನಲಾಗಿದೆ.

ಪ್ರವಾಹದಲ್ಲಿ ಮನೆ ಕಳೆದುಕೊಂಡವ ರಿಗೆ ಪರಿಹಾರ ನೀಡುವಲ್ಲಿ ವ್ಯತ್ಯಾಸ ವಾಗಿರುವುದು ಬೆಳಕಿಗೆ ಬಂದಿದೆ. ನಾನೇ ಖುದ್ದು ಪರಿಶೀಲನೆ ಮಾಡಿದಾಗ ನಿಜವಾದ ಸಂತ್ರಸ್ತ ರಿಗೆ ಸೂಕ್ತ ಪರಿಹಾರ ಸಿಗದಿರುವುದು ಕಂಡು ಬಂದಿದೆ. ಹೀಗಾಗಿ ಆರೋಪ ಕೇಳಿ ಬಂದ ಕಡೆಗಳಲ್ಲಿ ಮರು ಸಮೀಕ್ಷೆ ಮಾಡಲು ಸೂಚಿಸಲಾಗಿದೆ.
– ಲಕ್ಷ್ಮಣ ಸವದಿ, ಉಪ ಮುಖ್ಯಮಂತ್ರಿ

- ಶಂಕರ ಪಾಗೋಜಿ

ಟಾಪ್ ನ್ಯೂಸ್

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.