ಎಸ್‌ಐಟಿಗೆ ಐಎಂಎ ಕೇಸು

8 ಸಾವಿರ ಮಂದಿಯಿಂದ ದೂರು ಇನ್ನೂ ಪತ್ತೆಯಾಗದ ಆರೋಪಿಗಳು

Team Udayavani, Jun 12, 2019, 6:10 AM IST

imf

ಬೆಂಗಳೂರು: ರಾಜಧಾನಿಯಲ್ಲಿ ತಲ್ಲಣ ಮೂಡಿಸಿರುವ ಹಾಗೂ ರಾಜಕೀಯವಾಗಿಯೂ ಮಹತ್ವ ಪಡೆದಿರುವ ಐಎಂಎಯ ಬಹುಕೋಟಿ ವಂಚನೆ ಪ್ರಕರಣವನ್ನು ಎಸ್‌ಐಟಿ (ವಿಶೇಷ ತನಿಖಾ ತಂಡ) ತನಿಖೆಗೆ ವಹಿಸಲು ರಾಜ್ಯ ಸರಕಾರ ತೀರ್ಮಾನಿಸಿದೆ.

ಮಂಗಳವಾರ ಬೆಳಗ್ಗೆ ಪ್ರಕರಣ ಸಿಸಿಬಿ ತನಿಖೆಗೆ ವಹಿಸಲು ತೀರ್ಮಾನಿಸಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಟ್ವೀಟ್ ಮಾಡಿದ್ದರಾದರೂ ಸಚಿವ ಜಮೀರ್‌ ಅಹಮದ್‌ ನೇತೃತ್ವದಲ್ಲಿ ಮುಸ್ಲಿಂ ಶಾಸಕರ ನಿಯೋಗ ಎಸ್‌ಐಟಿ ತನಿಖೆಗೆ ವಹಿಸಲು ಒತ್ತಾಯಿಸಿದ ಹಿನ್ನೆಲೆಯಲ್ಲಿ ಅಂತಿಮವಾಗಿ ಎಸ್‌ಐಟಿ ತನಿಖೆಗೆ ವಹಿಸಲು ನಿರ್ಧರಿಸಲಾಗಿದೆ.

ಕಾಂಗ್ರೆಸ್‌ನಲ್ಲಿ ಅಸಮಾಧಾನಿತ ಶಾಸಕ ಎಂದು ಗುರುತಿಸಿಕೊಂಡಿರುವ ರೋಷನ್‌ ಬೇಗ್‌ ಹೆಸರು ಕೇಳಿಬಂದ ಹಿನ್ನೆಲೆಯಲ್ಲಿ ರಾಜಕೀಯ ಕುತೂಹಲ ಕೆರಳಿಸಿರುವ ಈ ಪ್ರಕರಣದಲ್ಲಿ ಸಚಿವ ಜಮೀರ್‌ ರಂಗಪ್ರವೇಶ ಮತ್ತಷ್ಟು ಜಿಜ್ಞಾಸೆಗೆ ಕಾರಣವಾಗಿದೆ. ಅತ್ತ ಜಮೀರ್‌ ಭೇಟಿ ಮಾಡಿದ ಬೆನ್ನಲ್ಲೇ, ಮತ್ತೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಪ್ರಕರಣದ ತೀವ್ರತೆ ಅರಿತು ಎಸ್‌ಐಟಿ ತನಿಖೆಗೆ ನೀಡಲು ತೀರ್ಮಾನಿಸಲಾಗಿದೆ. ಈ ಕುರಿತು ಡಿಜಿಪಿಯವರಿಗೆ ನಿರ್ದೇಶನ ನೀಡಲಾಗಿದೆ ಎಂದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ 8,000ಕ್ಕೂ ಅಧಿಕ ಮಂದಿ ಪೊಲೀಸರಿಗೆ ದೂರು ನೀಡಿದ್ದಾರೆ.

ಮುಸ್ಲಿಂ ಶಾಸಕರ ನಿಯೋಗ ಭೇಟಿ

ಐಎಂಎ ವಂಚನೆ ಕುರಿತು ಸಚಿವ ಜಮೀರ್‌ ಅಹಮದ್‌ ನೇತೃತ್ವದಲ್ಲಿ ಗೃಹ ಸಚಿವ ಎಂ.ಬಿ. ಪಾಟೀಲ್ ಅವರನ್ನು ಭೇಟಿ ಮಾಡಿದ ಮುಸ್ಲಿಂ ಶಾಸಕರ ನಿಯೋಗವು ಪ್ರಕರಣವನ್ನು ಎಸ್‌ಐಟಿ ತನಿಖೆಗೆ ನೀಡಬೇಕೆಂದು ಮನವಿ ಮಾಡಿತು. ಬಳಿಕ ಮಾತನಾಡಿದ ಜಮೀರ್‌ ಅಹಮದ್‌, ಐಪಿಎಸ್‌ ಅಧಿಕಾರಿ ನೇತೃತ್ವದಲ್ಲಿ ಎಸ್‌ಐಟಿ ತನಿಖೆ ನಡೆಸಿ ಐಎಂಎ ಮಳಿಗೆಗಳ ಒಡವೆ, ಚಿನ್ನಾಭರಣ ತತ್‌ಕ್ಷಣ ಜಪ್ತಿ ಮಾಡಬೇಕು ಎಂದು ಆಗ್ರಹಿಸಿದರು.

ಮತ್ತೂಂದು ಆಡಿಯೋ ಬಹಿರಂಗ

ಐಎಂಎ ಸ್ಥಾಪಕ ಮನ್ಸೂರ್‌ ಖಾನ್‌ನದ್ದು ಎನ್ನಲಾದ ಮತ್ತೂಂದು ಆಡಿಯೋ ಮಂಗಳವಾರ ಬಿಡುಗಡೆಯಾಗಿದೆ. ಇದರಲ್ಲಿ ತಾನು ಬದುಕಿದ್ದು, ಜೂ.15ರ ಒಳಗೆ ಹೂಡಿಕೆದಾರರ ಹಣ ವಾಪಸ್‌ ನೀಡುವುದಾಗಿ ತಿಳಿಸಿದ್ದಾನೆ. ಅಲ್ಲದೆ ನಾನು ಎಲ್ಲೂ ಹೋಗಿಲ್ಲ, ಬೆಂಗಳೂರಿನಲ್ಲಿಯೇ ಇದ್ದೇನೆ ಎಂದಿದ್ದಾನೆ.

ಎಲ್ಲ ಇಲಾಖೆಗಳನ್ನು ಒಳಗೊಂಡ ಸಮಿತಿ

ಹಣಕಾಸು ಅಕ್ರಮಗಳನ್ನು ತಡೆಗಟ್ಟಲು ಕಂದಾಯ, ಸಹಕಾರ, ಕಂಪೆನಿ ನೋಂದಣಿ, ಗೃಹ, ಇಡಿ, ಆರ್‌ಬಿಐ ಸಹಿತ ಎಲ್ಲ ಇಲಾಖೆಗಳನ್ನು ಒಳಗೊಂಡ ಸಮಿತಿ ರಚಿಸಲು ಸರಕಾರ ನಿರ್ಧರಿಸಿದೆ. ಮುಖ್ಯ ಕಾರ್ಯದರ್ಶಿ ಇದರ ನೇತೃತ್ವ ವಹಿಸುವರು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ನಾಪತ್ತೆಯಾದ ಐಎಂಎ ಮುಖ್ಯಸ್ಥ ಮನ್ಸೂರ್‌ ಖಾನ್‌ ಪತ್ತೆಗೆ ಎಲ್ಲ ರೀತಿಯ ಪ್ರಯತ್ನ ನಡೆಸಲಾಗುತ್ತಿದೆ.
-ಎಂ.ಬಿ. ಪಾಟೀಲ್, ಗೃಹಸಚಿವರು
ಸಿಬಿಐ ತನಿಖೆಗೆ ಆಗ್ರಹ

ಐಎಂಎ ಮಾಲಕರ ಜತೆ ಬಹುತೇಕ ರಾಜಕಾರಣಿಗಳ ಫೋಟೋ ತೋರಿಸಲಾಗುತ್ತಿದೆ. ಯಾರು ಕರೆದರೂ ಕಾರ್ಯಕ್ರಮಕ್ಕೆ ನಾವು ಹೋಗುತ್ತೇವೆ. ಆದರೆ ಇಂತಹ ಪ್ರಕರಣ ನಡೆದಾಗ ಬೇರೆ ರೀತಿಯ ಸಂದೇಶ ಹೋಗುತ್ತದೆ. ಹೀಗಾಗಿ ಪ್ರಕರಣ ಸಿಬಿಐಗೆ ವಹಿಸಬೇಕು.
-ರಘು ಆಚಾರ್‌, ವಿಧಾನಪರಿಷತ್‌ ಸದಸ್ಯ
ಐಎಂಎ ಜುವೆಲರ್ ಮಾಲಕನ ವಂಚನೆಯಿಂದ ಜನರಿಗೆ ಅನ್ಯಾಯವಾಗಿದ್ದು, ಕೂಡಲೇ ಹಣ ವಾಪಸ್‌ ನೀಡಬೇಕು. ಶಾಸಕ ರೋಷನ್‌ ಬೇಗ್‌ ಇಲ್ಲವೇ ಮತ್ತೂಬ್ಬರ ಹೆಸರನ್ನು ಹೇಳಲು ಬಯಸುವುದಿಲ್ಲ.
– ಬಿ.ಎಸ್‌. ಯಡಿಯೂರಪ್ಪ, ಬಿಜೆಪಿ ಬಿಜೆಪಿ ರಾಜ್ಯಾಧ್ಯಕ್ಷ
ಪಿಎಫ್ಐ ಸಂಘಟನೆಗೆ ಐಎಂಎ ಜುವೆಲರ್ ಆರ್ಥಿಕ ನೆರವು ನೀಡಿದೆ ಎಂದು ಕೇರಳದ ವ್ಯಕ್ತಿಯೊಬ್ಬರು ಹೇಳಿದ್ದರು. ಮನ್ಸೂರ್‌ ಖಾನ್‌ಗೆ ಭಯೋತ್ಪಾದಕರೊಂದಿಗೆ ನಂಟಿರುವ ಶಂಕೆ ಇದ್ದು, ಇಷ್ಟು ಹಣ ಅವರ ಬಳಿ ಹೇಗೆ ಬಂತು ಎಂಬ ಬಗ್ಗೆ ತನಿಖೆ ನಡೆಸಬೇಕು.
– ಶೋಭಾ ಕರಂದ್ಲಾಜೆ, ಸಂಸದೆ, ಉಡುಪಿ-ಚಿಕ್ಕಮಗಳೂರು

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.