ಎಸ್ಐಟಿಗೆ ಐಎಂಎ ಕೇಸು
8 ಸಾವಿರ ಮಂದಿಯಿಂದ ದೂರು ಇನ್ನೂ ಪತ್ತೆಯಾಗದ ಆರೋಪಿಗಳು
Team Udayavani, Jun 12, 2019, 6:10 AM IST
ಬೆಂಗಳೂರು: ರಾಜಧಾನಿಯಲ್ಲಿ ತಲ್ಲಣ ಮೂಡಿಸಿರುವ ಹಾಗೂ ರಾಜಕೀಯವಾಗಿಯೂ ಮಹತ್ವ ಪಡೆದಿರುವ ಐಎಂಎಯ ಬಹುಕೋಟಿ ವಂಚನೆ ಪ್ರಕರಣವನ್ನು ಎಸ್ಐಟಿ (ವಿಶೇಷ ತನಿಖಾ ತಂಡ) ತನಿಖೆಗೆ ವಹಿಸಲು ರಾಜ್ಯ ಸರಕಾರ ತೀರ್ಮಾನಿಸಿದೆ.
ಮಂಗಳವಾರ ಬೆಳಗ್ಗೆ ಪ್ರಕರಣ ಸಿಸಿಬಿ ತನಿಖೆಗೆ ವಹಿಸಲು ತೀರ್ಮಾನಿಸಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಟ್ವೀಟ್ ಮಾಡಿದ್ದರಾದರೂ ಸಚಿವ ಜಮೀರ್ ಅಹಮದ್ ನೇತೃತ್ವದಲ್ಲಿ ಮುಸ್ಲಿಂ ಶಾಸಕರ ನಿಯೋಗ ಎಸ್ಐಟಿ ತನಿಖೆಗೆ ವಹಿಸಲು ಒತ್ತಾಯಿಸಿದ ಹಿನ್ನೆಲೆಯಲ್ಲಿ ಅಂತಿಮವಾಗಿ ಎಸ್ಐಟಿ ತನಿಖೆಗೆ ವಹಿಸಲು ನಿರ್ಧರಿಸಲಾಗಿದೆ.
ಕಾಂಗ್ರೆಸ್ನಲ್ಲಿ ಅಸಮಾಧಾನಿತ ಶಾಸಕ ಎಂದು ಗುರುತಿಸಿಕೊಂಡಿರುವ ರೋಷನ್ ಬೇಗ್ ಹೆಸರು ಕೇಳಿಬಂದ ಹಿನ್ನೆಲೆಯಲ್ಲಿ ರಾಜಕೀಯ ಕುತೂಹಲ ಕೆರಳಿಸಿರುವ ಈ ಪ್ರಕರಣದಲ್ಲಿ ಸಚಿವ ಜಮೀರ್ ರಂಗಪ್ರವೇಶ ಮತ್ತಷ್ಟು ಜಿಜ್ಞಾಸೆಗೆ ಕಾರಣವಾಗಿದೆ. ಅತ್ತ ಜಮೀರ್ ಭೇಟಿ ಮಾಡಿದ ಬೆನ್ನಲ್ಲೇ, ಮತ್ತೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಪ್ರಕರಣದ ತೀವ್ರತೆ ಅರಿತು ಎಸ್ಐಟಿ ತನಿಖೆಗೆ ನೀಡಲು ತೀರ್ಮಾನಿಸಲಾಗಿದೆ. ಈ ಕುರಿತು ಡಿಜಿಪಿಯವರಿಗೆ ನಿರ್ದೇಶನ ನೀಡಲಾಗಿದೆ ಎಂದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ 8,000ಕ್ಕೂ ಅಧಿಕ ಮಂದಿ ಪೊಲೀಸರಿಗೆ ದೂರು ನೀಡಿದ್ದಾರೆ.
ಮುಸ್ಲಿಂ ಶಾಸಕರ ನಿಯೋಗ ಭೇಟಿ
ಐಎಂಎ ವಂಚನೆ ಕುರಿತು ಸಚಿವ ಜಮೀರ್ ಅಹಮದ್ ನೇತೃತ್ವದಲ್ಲಿ ಗೃಹ ಸಚಿವ ಎಂ.ಬಿ. ಪಾಟೀಲ್ ಅವರನ್ನು ಭೇಟಿ ಮಾಡಿದ ಮುಸ್ಲಿಂ ಶಾಸಕರ ನಿಯೋಗವು ಪ್ರಕರಣವನ್ನು ಎಸ್ಐಟಿ ತನಿಖೆಗೆ ನೀಡಬೇಕೆಂದು ಮನವಿ ಮಾಡಿತು. ಬಳಿಕ ಮಾತನಾಡಿದ ಜಮೀರ್ ಅಹಮದ್, ಐಪಿಎಸ್ ಅಧಿಕಾರಿ ನೇತೃತ್ವದಲ್ಲಿ ಎಸ್ಐಟಿ ತನಿಖೆ ನಡೆಸಿ ಐಎಂಎ ಮಳಿಗೆಗಳ ಒಡವೆ, ಚಿನ್ನಾಭರಣ ತತ್ಕ್ಷಣ ಜಪ್ತಿ ಮಾಡಬೇಕು ಎಂದು ಆಗ್ರಹಿಸಿದರು.
ಮತ್ತೂಂದು ಆಡಿಯೋ ಬಹಿರಂಗ
ಐಎಂಎ ಸ್ಥಾಪಕ ಮನ್ಸೂರ್ ಖಾನ್ನದ್ದು ಎನ್ನಲಾದ ಮತ್ತೂಂದು ಆಡಿಯೋ ಮಂಗಳವಾರ ಬಿಡುಗಡೆಯಾಗಿದೆ. ಇದರಲ್ಲಿ ತಾನು ಬದುಕಿದ್ದು, ಜೂ.15ರ ಒಳಗೆ ಹೂಡಿಕೆದಾರರ ಹಣ ವಾಪಸ್ ನೀಡುವುದಾಗಿ ತಿಳಿಸಿದ್ದಾನೆ. ಅಲ್ಲದೆ ನಾನು ಎಲ್ಲೂ ಹೋಗಿಲ್ಲ, ಬೆಂಗಳೂರಿನಲ್ಲಿಯೇ ಇದ್ದೇನೆ ಎಂದಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ