ಐಎಂಎ ಕೇಂದ್ರ ಕಚೇರಿ ಜಪ್ತಿ, ಮನ್ಸೂರ್ ಖಾನ್ ರೇಂಜ್ ರೋವರ್ ಕಾರು ವಶಕ್ಕೆ!
Team Udayavani, Jun 13, 2019, 5:57 PM IST
ಬೆಂಗಳೂರು:ರಾಜಧಾನಿಯಲ್ಲಿ ತಲ್ಲಣ ಮೂಡಿಸಿರುವ ಶಿವಾಜಿನಗರದಲ್ಲಿರುವ ಐಎಂಎ ಜ್ಯುವೆಲರ್ಸ್ ಸಂಸ್ಥೆಯನ್ನು ಗುರುವಾರ ಎಸ್ ಐಟಿ ಅಧಿಕಾರಿಗಳು ಜಪ್ತಿ ಮಾಡಿ, ಸೀಲ್ ಮಾಡಿದ್ದಾರೆ. ಸಾವಿರಾರು ಹೂಡಿಕೆದಾರರಿಗೆ ಕೋಟ್ಯಂತರ ರೂಪಾಯಿ ಪಂಗನಾಮ ಹಾಕಿರುವ ಐಎಂಎ ಜ್ಯುವೆಲರ್ಸ್ ನ ಮನ್ಸೂರ್ ಖಾನ್ ವಿದೇಶಕ್ಕೆ ಪರಾರಿಯಾಗಿರಬೇಕೆಂದು ಶಂಕಿಸಲಾಗಿದೆ.
ಏತನ್ಮಧ್ಯೆ ಎಸ್ ಐಟಿ ಮುಖ್ಯಸ್ಥ ರವಿಕಾಂತೇಗೌಡ ನೇತೃತ್ವದಲ್ಲಿ ಏಳು ಮಂದಿ ಆರೋಪಿಗಳ ವಿಚಾರಣೆ ಆರಂಭಿಸಲಾಗಿದೆ ಎಂದು ವರದಿ ತಿಳಿಸಿದೆ. ಐಎಂಎ ಜ್ಯುವೆಲರ್ಸ್ ನ ಏಳು ನಿರ್ದೇಶಕರನ್ನು ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಎಸ್ ಐಟಿಗೆ ಹಸ್ತಾಂತರಿಸಿದ್ದಾರೆ.
ಕೆಐಎಎಲ್ ನಲ್ಲಿ ರೇಂಜ್ ರೋವರ್ ಕಾರು ಬಿಟ್ಟು ವಿದೇಶಕ್ಕೆ ಪರಾರಿ?
ಕಳೆದ ನಾಲ್ಕು ದಿನಗಳಿಂದ ಬೆಂಗಳೂರು ವಿಮಾನ ನಿಲ್ದಾಣದ ಪಾರ್ಕಿಂಗ್ ನಲ್ಲಿ ನಿಲ್ಲಿಸಲಾಗಿದ್ದ ರೇಂಜ್ ರೋವರ್ ಕಾರನ್ನು ವಶಕ್ಕೆ ಪಡೆಯಲಾಗಿದೆ ಎಂದು ವರದಿ ತಿಳಿಸಿದೆ. ಐಎಂಎ ಸಂಸ್ಥಾಪಕ ಮನ್ಸೂರ್ ಖಾನ್ ಕಾರನ್ನು ಕೆಐಎಎಲ್ ನಲ್ಲಿ ಪಾರ್ಕ್ ಮಾಡಿ ವಿದೇಶಕ್ಕೆ ಪರಾರಿಯಾಗಿರುವ ಸಾಧ್ಯತೆ ಇದೆ ಎಂದು ಪೊಲೀಸ್ ಅಧಿಕಾರಿಗಳು ಶಂಕಿಸಿದ್ದಾರೆ. ಮತ್ತೊಂದೆಡೆ ಮನ್ಸೂರ್ ಗೆ ಸೇರಿದ್ದ ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ವರದಿ ಹೇಳಿದೆ.
ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಮೂರು ಕೌಂಟರ್ ಗಳನ್ನು ತೆರೆಯಲಾಗಿದ್ದು, ಅಂದಾಜು 25ಸಾವಿರಕ್ಕೂ ಅಧಿಕ ದೂರುಗಳು ದಾಖಲಾಗಿದೆ ಎಂದು ಹೇಳಲಾಗುತ್ತಿದೆ. ಬೇರೆ ರಾಜ್ಯಗಳಿಂದ, ಊರುಗಳಿಂದಲೂ ಆಗಮಿಸಿ ಠಾಣೆಯಲ್ಲಿ ದೂರು ದಾಖಲಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ