- Wednesday 11 Dec 2019
ಸರಕಾರಕ್ಕೆ ಕಿವಿ, ಕಣ್ಣು, ಹೃದಯ ಇಲ್ವಾ: ಈಶ್ವರಪ್ಪ ಪ್ರಶ್ನೆ
ಐಎಂಎ ಕಂಪನಿ ಹೂಡಿಕೆದಾರರಿಗೆ ವಂಚನೆ ಪ್ರಕರಣ
Team Udayavani, Jun 12, 2019, 12:48 PM IST
ಶಿವಮೊಗ್ಗ : ಐಎಂಎ ಕಂಪನಿ ಹೂಡಿಕೆದಾರರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಕೆ.ಎಸ್ ಈಶ್ವರಪ್ಪ ಅವರು ಕಿಡಿ ಕಾರಿದ್ದು ಸರಕಾರಕ್ಕೆ ಕಿವಿ, ಕಣ್ಣು, ಹೃದಯ ಇಲ್ಲವೆ ಎಂದು ಪ್ರಶ್ನಿಸಿದ್ದಾರೆ.
ಬುಧವಾರ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಐಎಂಎ ಮೂಲಕ 10 ಸಾವಿರ ಕೋಟಿಗೂ ಅಧಿಕ ವಂಚನೆ ಆಗಿದೆ. ಇದರಲ್ಲಿ ಅನೇಕ ರಾಜಕಾರಣಿಗಳು ಪ್ರಭಾವಿ ಮಂತ್ರಿಗಳು ಪಾತ್ರವಿರುವುದು ಮಾದ್ಯಮದಲ್ಲಿ ಬರುತ್ತಿದೆ. ಗೃಹ ಮಂತ್ರಿಗಳು ಇಂತಹವರ ವಿರುದ್ಧ ಕ್ರಮಕ್ಕೆ ತೆಗೆದುಕೊಳ್ಳಲು ಕಾನೂನು ಇಲ್ಲ ಎನ್ನುವ ಹೇಳಿಕೆಯಿಂದ ನೋವಾಗಿದೆ ಎಂದರು.
ಸರಕಾರ ಅಸಹಾಯಕತೆ ರೀತಿಯಲ್ಲಿ ವರ್ತನೆ ಮಾಡುತ್ತಿದೆ,
ಕೂಡಲೇ ವಂಚನೆ ಮಾಡಿದವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಲಿ ಎಂದು ಆಗ್ರಹಿಸಿದರು.
ಬಡ ಮದ್ಯಮ ವರ್ಗದವರೂ ಬೀದಿಗೆ ಬಂದಿದ್ದಾರೆ, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಕೆ ನೀಡುತ್ತಿದ್ದಾರೆ. ಸರಕಾರಕ್ಕೆ ಕಿವಿ ಕಣ್ಣು ಹೃದಯ ಇಲ್ವಾ ಎಂದು ಪ್ರಶ್ನಿಸಿದರು.
ಸರಕಾರದ ಕೈಯಲ್ಲಿ ಆದ್ರೆ ಕ್ರಮಕ್ಕೆ ಮುಂದಾಗಲಿ. ಇಲ್ಲದಿದ್ದರೇ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲಿ ಎಂದರು.
ಕರ್ನಾಟಕದಲ್ಲಿ ಇದೊಂದು ಅತೀ ದೊಡ್ಡ ಹಗರಣವಾಗಿದ್ದು,
ಇದರಿಂದ ಯಾವುದೇ ಸಂಸ್ಥೆಯಲ್ಲಿ ಜನರು ಹೂಡಿಕೆ ಮಾಡುವುದಕ್ಕೆ ಭಯ ಪಡುವಂತಹ ವಾತಾವರಣ ನಿರ್ಮಾಣವಾಗಿದೆ ಎಂದು ಅವರು ಹೇಳಿದರು.
ಈ ವಿಭಾಗದಿಂದ ಇನ್ನಷ್ಟು
-
ಕಲಬುರಗಿ: ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಆರೋಪದಡಿ ಜಪ್ತಿ ಮಾಡಿದ್ದ ವಾಹನ ಬಿಡುಗಡೆ ಮಾಡಲು ಲಂಚ ಪಡೆಯುತ್ತಿದ್ದ ಆಹಾರ ಇಲಾಖೆಯ ಜಂಟಿ ನಿರ್ದೇಶಕ...
-
ಬೆಂಗಳೂರು: ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಹುಮ್ಮಸ್ಸಿನಲ್ಲಿರುವ ಬಿಜೆಪಿ ಸಂಪುಟಕ್ಕೆ ಇನ್ನಷ್ಟು ಶಾಸಕರನ್ನು ಸೇರಿಸಲು ತಯಾರಿ ನಡೆಸಿದೆ. ಈ ಬಗ್ಗೆ...
-
ರಾಮನಗರ: ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಜೆಡಿಎಸ್ ತೀವ್ರ ಮುಖಭಂಗ ಅನುಭವಿಸಿದ್ದು, ಶೂನ್ಯ ಸಂಪಾದನೆ ಮಾಡಿದೆ. ಈ ಬಗ್ಗೆ ಪ್ರತಿಕ್ರಿಯೆ...
-
ಬೆಂಗಳೂರು: ಉಪಚುನಾವಣೆಯ ಸೋಲಿನ ನಂತರ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಆ ಪದವಿಗೇರಲು ಹಲವರು ಲಾಬಿ ಮಾಡುತ್ತಿದ್ದು, ಮಾಜಿ ಸಂಸದ ಕೆ.ಎಚ್.ಮುನಿಯಪ್ಪ...
-
ಬೆಂಗಳೂರು: ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿ ಸದ್ಯ ಬಿ ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಸುಭದ್ರವಾಗಿದೆ. ಆದರೆ ಇದರ ಬೆನ್ನಲ್ಲೆ ಯಡಿಯೂರಪ್ಪನವರಿಗೆ...
ಹೊಸ ಸೇರ್ಪಡೆ
-
ರಾಂಚಿ: ಮಾಂಸದ ಅಡುಗೆ ಮಾಡುತ್ತಿದ್ದ ಮನೆಗೆ ನುಗ್ಗಿದ್ದ ಹುಲಿ ಮಹಿಳೆ ಮೇಲೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಜಾರ್ಖಂಡ್ ನ ರಾಮ್ ಕಾಂಡಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...
-
ರಾಯಚೂರು: 1995ರಿಂದ ಆರಂಭಗೊಂಡ ಎಲ್ಲ ಖಾಸಗಿ ಶಾಲಾ, ಕಾಲೇಜುಗಳ ಶಿಕ್ಷಕರಿಗೆ ಹಾಗೂ ಉಪನ್ಯಾಸಕರಿಗೆ ವೇತನಾನುದಾನ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ...
-
ವಿಜಯಪುರ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡೆಂಘೀ ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಆರೋಗ್ಯ...
-
ಬೀದರ: ಜನಸಾಮಾನ್ಯರಲ್ಲಿ ಭಾರತದ ಸಂವಿಧಾನ ಬಗ್ಗೆ ಜಾಗೃತಿ ಮೂಡಿಸಲು ಇಬ್ಬರು ಮಹಿಳೆಯರು ರಾಜಧಾನಿ ಬೆಂಗಳೂರಿನಿಂದ ಹಮ್ಮಿಕೊಂಡಿದ್ದ ಸೈಕಲ್ ಯಾತ್ರೆಯು ಮಂಗಳವಾರ...
-
ಕೋಲಾರ: ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರ ಹೊರವಲಯದ ಅಂತರಗಂಗೆಯಲ್ಲಿ ಮಂಗಳವಾರ ರಾತ್ರಿ ನಡೆದ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವ ನೋಡಲು ಸಹಸ್ರಾರು...